Karnataka: ಚುನಾವಣಾಧಿಕಾರಿಗಳಿಂದ ಪಕ್ಷದ ಚಿಹ್ನೆ 'ಪೊರಕೆ'ಗೆ ಗೇಟ್ ಪಾಸ್: 'ಕೈ' ಕತ್ತರಿಸುತ್ತಾರೆಯೇ?
ಬೆಂಗಳೂರು, ಮೇ 03: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಚುನಾವಣೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಮಧ್ಯೆ ಪಕ್ಷವೊಂದರ ಚಿಹ್ನೆ 'ಪೊರಕೆ'ಗೆ ಆಯೋಗವು ಮತದಾನ ಗೇಟ್ ಪಾಸ್ ನೀಡಿದೆ.
ಮೇ 10 ರಂದು ಮತದಾನ ನಡೆಯಲಿದೆ. ನೀತಿ ಸಂಹಿತೆ ಪಾಲನೆ ದೃಷ್ಟಿಯಿಂದ ಮತದಾನದ ಎರಡು ಮೂರು ದಿನದ ಮೊದಲೇ ಭಾವುಟ ಪ್ರದರ್ಶನ, ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಈ ವೇಳೆ ಯಾವುದೇ ಪಕ್ಷಗಳು ಮತದಾರರ ಮೇಲೆ ಆಮಿಷ ಒಡ್ಡದಂತೆ ನೋಡಿಕೊಳ್ಳಲಾಗುತ್ತದೆ. ಆದರೆ ಪೊರಕೆ ಮರೆಮಾಚುವುದು ಹೇಗೆ? ಎಂಬ ಪ್ರಶ್ನೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಕಾಡಿದೆ.

ಈ ಸಂಬಂಧ ನಿರ್ಧಾರ ಮಾಡಿರುವ ಅವರು, ಆಮ್ ಆದ್ಮಿ ಪಕ್ಷದ (AAP) ಚಿಹ್ನೆ ಆಗಿರುವ 'ಪೊರಕೆ'ಯನ್ನು ಮತಗಟ್ಟೆ ಆವರಣದಲ್ಲಿ ಮತದಾನಕ್ಕೂ ಮುನ್ನ 48 ಗಂಟೆ ನಿಷೇಧಿಸಲಾಗಿದೆ. ಆವರಣದಲ್ಲಿ ಎಲ್ಲಿಯೂ ಪೊರಕೆ ಕಾರಣದಂತೆ ಹಾಗೂ ಸ್ವಚ್ಛತೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಆಯೋಗ ಸೂಚಿಸಿದೆ. ಬೆಂಗಳೂರಿನಲ್ಲೂ ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಈ ಬಗ್ಗೆ ತಿಳಿಸಿದ್ದಾರೆ ಎಂದು ಟಿವಿ ನೈನ್ ಕನ್ನಡ ವರದಿ ಮಾಡಿದೆ.
ಎಲ್ಲ ರಾಜಕೀಯ ಪಕ್ಷಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಳು ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಮತದಾರರನ್ನು ಎಎಪಿ ಪಕ್ಷ ಚಿಹ್ನೆ ಪೊರಕೆ ಸಹ ಸೆಳೆಯಬಹುದು ಎಂದು ಅಂದಾಜಿಸಿರುವ ಅಧಿಕಾರಿಗಳು ಮತಗಟ್ಟೆಯ ಆವರಣದಲ್ಲಿ ಎರಡು ದಿನ ಕಾಣದಂತೆ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಮ್ ಆದ್ಮಿ ಪಕ್ಷವು (AAP) ಕರ್ನಾಟಕದಲ್ಲಿ ಸುಮಾರು 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಪ್ರತಿ ಕ್ಷೇತ್ರಗಳಲ್ಲಿ ಎಎಪಿ ಅಭ್ಯರ್ಥಿಗಳು ಕಾರ್ಯಕರ್ತರು ಭರ್ಜರಿ ಪ್ರಚಾರ ನಡೆಸಿ ಮತಯಾಚನೆ ಮಾಡಿದ್ದಾರೆ. ಆದರೆ ಅವರ ಪೊರಕೆ ಚಿಹ್ಮೆಯನ್ನು ನೀತಿ ಸಂಹಿತೆಯ ನಿಯಮದಂತೆ ಮರೆಮಾಚಲೇ ಬೇಕಿದೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪರದೇ: ಕೈ ಕತ್ತರಿಸಲಾಗುವುದೇ?
ಮತದಾನ ಮೇ 10 ರಂದು ನಡೆಯುವುದಿದ್ದರೆ ಮುನ್ನಾ 48 ಗಂಟೆ ಎಂದರೆ ಮೇ 8ರಂದೇ ಮತಗಟ್ಟೆಯ ಆವರಣದಲ್ಲಿ ಎಎಪಿ ಪಕ್ಷದ ಚಿಹ್ನೆ ಪೊರಕೆ ಕಾಣದಂತೆ ಚುನಾವಣೆ ಆಯೋಗ ಅಗತ್ಯ ವ್ಯವಸ್ಥೆಗೆ ಮಾಡಲಿದೆ.
ಈ ಹಿಂದೆ ಶಿವಮೊಗ್ಗ ವಿಮಾನ ನಿಲ್ದಾಣವು ಕಮಲ ಆಕಾರದಲ್ಲಿದೆ. ಹಾಗಾದರೆ ಅದು ಸಹ ಮತದಾರರ ಮೇಲೆ ಚುನಾವಣೆ ಹೊತ್ತಿನಲ್ಲಿ ಪ್ರಭಾವ ಭೀರಲಿದೆ ಎಂದು ಅದನ್ನು ಪರದೆಯಿಂದ ಮುಚ್ಚಬೇಕು. ಹೀಗೆಂಬ ಮಾತುಗಳು ಈಗಾಗಲೇ ಸಾರ್ವಜನಿಕವಾಗಿ ವ್ಯಕ್ತವಾಗಿತ್ತು. ಇನ್ನೂ ಮುಂದೆ ಹೋಗಿದ್ದ ಕೆಲವು ಕಾಂಗ್ರೆಸ್ ಪಕ್ಷದ ಚಿಹ್ಮೆ ಕೈ ಹಾಗೆಂದು ಕೈ ಕತ್ತರಿಲಾಗುತ್ತದೆಯೇ ಎಂದು ಪ್ರಶ್ನಿ ಮಾಡಲಾಗಿತ್ತು. ಸದ್ಯ ಎರಡು ದಿನ ಮತಗಟ್ಟೆಗಳ ಆವರಣದಲ್ಲಿ ಪೊರಕೆ ನಿರ್ಬಂಧ ಮಾಡಿರುವ ಚುನಾವಣಾ ಆಯೋಗದ ನಿರ್ಧಾರ ಸದ್ದು ಮಾಡಲಿದೆ ಎನ್ನಲಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ











Click it and Unblock the Notifications