ಕರ್ನಾಟಕ ಚುನಾವಣೆ : ಬಿಜೆಪಿ ಜಾಹೀರಾತಿಗೆ ಆಯೋಗದ ತಡೆ!

ಬೆಂಗಳೂರು, ಏಪ್ರಿಲ್ 27 : ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಬಿಜೆಪಿ ನೀಡಿದ್ದ ಜಾಹೀರಾತಿಗೆ ಚುನಾವಣಾ ಆಯೋಗ ತಡೆ ನೀಡಿದೆ. ಜಾಹೀರಾತಿನಲ್ಲಿ ಆಕ್ಷೇಪಾರ್ಹ ಅಂಶಗಳಿವೆ ಎಂದು ಕಾಂಗ್ರೆಸ್ ಆಯೋಗಕ್ಕೆ ದೂರು ನೀಡಿತ್ತು.

ಸುದ್ದಿ ವಾಹಿನಿಗಳಿಗೆ ಬಿಜೆಪಿ ನೀಡಿರುವ ಜಾಹೀರಾತನ್ನು ತಕ್ಷಣ ವಾಪಸ್ ಪಡೆಯಬೇಕು. 24 ಗಂಟೆಯೊಳಗೆ ಅದನ್ನು ಪುನರ್ ಪರಿಶೀಲಿಸಬೇಕು ಎಂದು ಚುನಾವಣಾ ಆಯೋಗ ಶುಕ್ರವಾರ ಸೂಚನೆ ನೀಡಿದೆ.

ಸುದ್ದಿ ವಾಹಿನಿ, ಫೇಸ್‌ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿಯೂ ಜಾಹೀರಾತು ಪ್ರಸಾರವಾಗಬಾರದು ಎಂದು ಆಯೋಗ ಹೇಳಿದೆ. ಕಾಂಗ್ರೆಸ್ ಈ ಆದೇಶದ ಪ್ರತಿಯನ್ನು ಟ್ವೀಟ್ ಮಾಡಿದ್ದು, ಪಕ್ಷಕ್ಕೆ ಸಿಕ್ಕ ಗೆಲುವು ಎಂದು ಹೇಳಿದೆ.

Karnataka elections : Election commission stays for BJP advertisement

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, 'ಮುಖ್ಯ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ ನಮ್ಮ ಪರವಾದ ವಾದವನ್ನು ಆಲಿಸಿ ಆಯೋಗ ಜಾಹೀರಾತಿಗೆ ತಡೆ ನೀಡಿದೆ. ಇದು ರಾಜ್ಯ ಬಿಜೆಪಿಗೆ ನಾಚಿಕೆಗೇಡಿನ ಸಂಗತಿಯಲ್ಲವೇ?' ಎಂದು ಪ್ರಶ್ನಿಸಿದರು.

'ನಮ್ಮ ಸರ್ಕಾರ ದೇಶದಲ್ಲೇ ವಿವಿಧ ಕ್ಷೇತ್ರಗಳಲ್ಲಿ ನಂ.1.ಇದೆ. ತನ್ನ ಯೋಜನೆಗಳಿಗಾಗಿ ಕೇಂದ್ರದಿಂದ ಹಲವಾರು ಪ್ರಶಸ್ತಿಗಳನ್ನು ಪಡೆದಿದೆ. ಸರ್ಕಾರ ಭ್ರಷ್ಟಾಚಾರದಿಂದ ಕೂಡಿದ್ದರೆ ಇಷ್ಟು ಪ್ರಶಸ್ತಿಗಳು ಹೇಗೆ ಬರುತ್ತಿತ್ತು?' ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಚುನಾವಣಾ ಆಯೋಗದ ಆದೇಶವೇನು?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+