Get Updates
Get notified of breaking news, exclusive insights, and must-see stories!

Karnataka Elections: ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿಗೌಡ, ಮಾಜಿ ಶಾಸಕ ಹಾಲಪ್ಪ ಬಿಜೆಪಿ ಸೇರ್ಪಡೆ

ಬೆಂಗಳೂರು, ಏಪ್ರಿಲ್‌ 04: ನೇತ್ರ ತಜ್ಞ, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ.ಅಪ್ಪಾಜಿಗೌಡ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು. ಅವರ ಸೇರ್ಪಡೆಯಿಂದ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ ಎಂಬ ಆಶಯವನ್ನು ಕೇಸರಿ ಪಕ್ಷವು ವ್ಯಕ್ತಪಡಿಸಿದೆ. ಒಕ್ಕಲಿಗ ಪ್ರಾಬಲ್ಯದ ಹಳೆಯ ಮೈಸೂರು ಭಾಗದಲ್ಲಿ ಬಿಜೆಪಿಗೆ ಭದ್ರ ನೆಲೆಯನ್ನು ಕಂಡುಕೊಳ್ಳಲು ಯತ್ನಿಸುತ್ತಿದೆ.

ಎರಡು ಬಾರಿ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿದ್ದ ಅಪ್ಪಾಜಿಗೌಡರು, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿಯಲ್ಲಿದ್ದಾರೆ ಎನ್ನಲಾಗಿದೆ.

Karnataka Elections: Eye Surgeon Appaji Gowda, former MLA Halappa join BJP

ಅಪ್ಪಾಜಿಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯನ್ನು ಸೇರ್ಪಡೆಗೊಂಡು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿಷ್ಠಾವಂತ ಮತ್ತು ಹಡಗಲಿ ಮಾಜಿ ಶಾಸಕ ವಿಬಿ ಹಾಲಪ್ಪ (ನಂದಿಹಳ್ಳಿ) ಅವರೂ ಸಹ ಇದೇ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಅಪ್ಪಾಜಿಗೌಡರ ಸೇರ್ಪಡೆಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷ ಬಲಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಪಂಚಮಸಾಲಿ ಲಿಂಗಾಯತ ಮುಖಂಡ ಹಾಲಪ್ಪ ಅವರನ್ನು ಬಿಜೆಪಿಗೆ ಕರೆತಂದಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಮುದಾಯದ ಮತಗಳನ್ನು ಕ್ರೋಢೀಕರಿಸುವ ದೃಷ್ಟಿಯಿಂದ ಹಾಲಪ್ಪ ಅವರಿಗೆ ರಾಮುಲು ಗಾಳ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಲಪ್ಪ ಅವರು 1999 ರಲ್ಲಿ ಹಡಗಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಹಡಗಲಿ ಕಾಂಗ್ರೆಸ್ ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ಅವರ ಪರಮಾಪ್ತರು ಎಂದು ಹೇಳಲಾಗುತ್ತದೆ.

Karnataka Elections: Eye Surgeon Appaji Gowda, former MLA Halappa join BJP

ಹಾಲಪ್ಪ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಶ್ರೀರಾಮುಲು ಅವರು ಎರಡೂ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ ಎಂದು ಹೇಳಿದರು. ಹಾಲಪ್ಪ ಅವರ ಪ್ರವೇಶದಿಂದಾಗಿ ಅವಳಿ ಜಿಲ್ಲೆಗಳಾದ ಬಳ್ಳಾರಿ ಮತ್ತು ವಿಜಯನಗರದಲ್ಲಿ ಬಿಜೆಪಿ 10 ಸ್ಥಾನಗಳನ್ನು ಗೆಲ್ಲಲಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

ಇಬ್ಬರು ನಾಯಕರನ್ನು ಸೇರ್ಪಡೆಗೊಂಡ ನಂತರ, ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಜನಾದೇಶದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳುತ್ತದೆ ಎಂದು ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ಬಸವರಾಜ ಬೊಮ್ಮಾಯಿ ಟ್ವೀಟ್‌

'ಭಾರತೀಯ ಜನತಾ ಪಾರ್ಟಿಯ ಜನಪರ ಆಡಳಿತ ಹಾಗೂ ತತ್ವ ಸಿದ್ಧಾಂತಗಳನ್ನು ಮೆಚ್ಚಿ, ಪಕ್ಷವನ್ನು ಸೇರ್ಪಡೆಯಾಗುವವರ ಪರ್ವ ಇಂದು ಸಹ ಮುಂದುವರೆದಿದೆ. ಮಾಜಿ ಶಾಸಕರಾದ ಶ್ರೀ ನಂದಿಹಳ್ಳಿ ಹಾಲಪ್ಪ, ಮುಖಂಡರುಗಳಾದ ಶ್ರೀ ಕೃಷ್ಣ ನಾಯ್ಕ, ಶ್ರೀ ಪರಮೇಶ್ವರಪ್ಪ, ಎನ್. ಕೋಟೆಪ್ಪ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ' ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Karnataka Elections: Eye Surgeon Appaji Gowda, former MLA Halappa join BJP

'ಡಾ. ಅಪ್ಪಾಜಿ ಗೌಡ ಹಾಗೂ ಹಲವು ಮುಖಂಡರು ಇಂದು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಎಲ್ಲರಿಗೂ ಆತ್ಮೀಯವಾದ ಸ್ವಾಗತವನ್ನು ಬಯಸುತ್ತೇನೆ' ಎಂದೂ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕ ಬಿಜೆಪಿ ಘಟಕದಿಂದ ಟ್ವೀಟ್‌

'ಬಿಜೆಪಿ ಸಿದ್ಧಾಂತ, ವಿಚಾರಧಾರೆ ಮತ್ತು ಅಭಿವೃದ್ಧಿಯ ಆಡಳಿತವನ್ನು ಮೆಚ್ಚಿ ಹಲವು ಪ್ರಮುಖರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌, ಅವರ ಸಮ್ಮುಖದಲ್ಲಿ ಇಂದು ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ, ಪ್ರಮುಖರಾದ ಕೃಷ್ಣ ನಾಯ್ಕ, ಪರಮೇಶ್ವರಪ್ಪ' ಎಂದು ಬಿಜೆಪಿ ಟ್ವೀಟಿಸಿದೆ.

'ಎನ್. ಕೋಟೆಪ್ಪ, ಡಾ. ಅಪ್ಪಾಜಿ ಗೌಡ ಮತ್ತು ಹಲವು ಮುಖಂಡರು, ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀರಾಮುಲು, ಸಂಸದರಾದ ದೇವೇಂದ್ರಪ್ಪ ಮತ್ತು ಪ್ರಮುಖರು ಉಪಸ್ಥಿತರಿದ್ದರು' ಎಂದು ಬಿಜೆಪಿ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+