ಪುತ್ರನ ತಪ್ಪಿಗೆ ತಂದೆಯ ತಲೆದಂಡ? ಹ್ಯಾರಿಸ್ ಕೈತಪ್ಪಿತೇ ಟಿಕೇಟ್?
Recommended Video

ಬೆಂಗಳೂರು, ಏಪ್ರಿಲ್ 16: ಈ ವರ್ಷದ ಫೆಬ್ರವರಿ ತಿಂಗಳು ಅತ್ಯಂತ ಹೆಚ್ಚು ಸುದ್ದಿಯಾಗಿದ್ದು ವಿದ್ವತ್ ಮೇಲಿನ ಹಲ್ಲೆ ಪ್ರಕರಣದಿಂದಾಗಿ! ಈ ಪ್ರಕರಣದ ಮುಖ್ಯ ಆರೋಪಿ ಮೊಹ್ಮದ್ ನಲಪಾಡ್, ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಮಗ ಎಂಬುದು ಮತ್ತಷ್ಟು ವಿವಾದ ಸೃಷ್ಟಿಸಿದ ಸಂಗತಿ. ಆ ಘಟನೆಯ ನಂತರ ಪುತ್ರನಿಗೆ ಜಾಮೀನು ಕೊಡಿಸುವ ಯತ್ನದಲ್ಲಿ ನಿರಂತರವಾಗಿ ಸೋಲುಂಡ ಶಾಸಕ ಹ್ಯಾರಿಸ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ!
ನಿನ್ನೆ(ಏ.15) ಬಿಡುಗಡೆಯಾದ ಕಾಂಗ್ರೆಸ್ ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರಿಲ್ಲ! ಶಾಂತಿನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಕಾಯ್ದಿರಿಸಿರುವ ಹೈಕಮಾಂಡ್ ನಡೆ ಹ್ಯಾರಿಸ್ ಅವರಲ್ಲಿ ಆತಂಕ ಸೃಷ್ಟಿಸಿದಂತಿದೆ. ಸಮೀಕ್ಷೆಯೊಂದರ ಪ್ರಕಾರ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಅಭಿವೃದ್ಧಿ ಹೊಂದಿದ ಕ್ಷೇತ್ರ ಎಂದರೆ ಶಾಂತಿನಗರ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಎರಡು ಬಾರಿ(2008 ಮತ್ತು 2013) ಸತತವಾಗಿ ಶಾಸಕರಾಗಿ ಆಯ್ಕೆಯಾಗಿದ್ದರೂ ಪುತ್ರ ಮಾಡಿದ ಯಡವಟ್ಟಿನಿಂದಾಗಿ ತಂದೆ ಟಿಕೇಟ್ ನಿಂದ ವಂಚಿತರಾಗುತ್ತಾರಾ ಎಂಬ ಅನುಮಾನ ದಟ್ಟವಾಗಿದೆ! ಶಾಂತಿನಗರ ಟಿಕೇಟ್ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲುವ ಅಧಿಕಾರವನ್ನು ಹೈಕಮಾಂಡ್ ಸಿದ್ದರಾಮಯ್ಯ ಅವರಿಗೇ ನೀಡಿರುವುದರಿಂದ ಸದ್ಯಕ್ಕೆ ಹ್ಯಾರಿಸ್ ರಾಜಕೀಯ ಭವಿಷ್ಯ ಸಿದ್ದರಾಮಯ್ಯ ಅವರ ಕೈಯಲ್ಲಿದೆ!

ಬಿ ಪ್ಯಾಕ್ ಸರ್ವೆಯಲ್ಲಿ ಅತ್ಯುತ್ತಮ ಶಾಸಕ ಹ್ಯಾರಿಸ್!
ಬಿ ಪ್ಯಾಕ್(B. PAC) ಎಂಬ ಎನ್ ಜಿಒ ನಡೆಸಿದ್ದ ಸರ್ವೆಯೊಂದರ ಪ್ರಕಾರ ಎನ್ ಎ ಹ್ಯಾರಿಸ್ ಬೆಂಗಳೂರಿನ ಅತ್ಯುತ್ತಮ ಶಾಸಕ ಎಂದು ಖ್ಯಾತಿ ಪಡೆದಿದ್ದವರಲ್ಲಿ ಹ್ಯಾರಿಸ್ ಸಹ ಒಬ್ಬರು. 100 ಕ್ಕೆ 84 ಅಂಕ ಗಳಿಸಿದ್ದ ಅವರು ತಮ್ಮ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು. 2.18 ಲಕ್ಷ ಮತದಾರರನ್ನು ಪಡೆದ ಈ ಕ್ಷೇತ್ರದಲ್ಲಿ 70,000 ಕ್ಕೂ ಹೆಚ್ಚು ತಮಿಳಿಗರಿದ್ದಾರೆ. ಎಂಜಿ ಬೆಂಗಳೂರಿನ ದುಬಾರಿ ಪ್ರದೇಶಗಳಾದ ಎಂ.ಜಿ.ರಸ್ತೆ, ರಿಚ್ಮಂಡ್ ರಸ್ತೆ, ಬ್ರಿಗೆಡ್ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಇವೆಲ್ಲವೂ ಶಾಂತಿನಗರದಲ್ಲೇ ಬರುತ್ತವೆ. ಆದ್ದರಿಂದ ರಾಜಧಾನಿಯ ಬಹುಮುಖ್ಯ ಕ್ಷೇತ್ರಗಳಲ್ಲಿ ಶಾಂತಿನಗರವೂ ಒಂದು. ಹಲವು ಅಭಿವರದ್ಧಿ ಕಾರ್ಯಗಳನ್ನು ಮಾಡಿದ್ದರೂ ಶಾಂತಿನಗರ ಟಿಕೇಟ್ ಅನ್ನು ಕಾಯ್ದಿರಿಸಿರುವ ಕಾಂಗ್ರೆಸ್ ನಡೆಯಿಂದ ಹ್ಯಾರಿಸ್ ಅವರಿಗೆ ಇರಿಸುಮುರಿಸಾಗಿರುವುದು ಖಂಡಿತ!

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ...!
ಪುತ್ರ ಮಾಡಿದ ತಪ್ಪಿಗೆ ತಂದೆಗೆ ಶಿಕ್ಷೆ ನೀಡುವುದು ಸರಿಯೇ ಎಂಬುದು ಹ್ಯಾರಿಸ್ ಅವರ ಅಭಿಮಾನಿಗಳ ಪ್ರಶ್ನೆ! ಆದರೆ ಮಗ ಮೊಹ್ಮದ್ ಮೇಲೆ ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೋಪ ಇರುವುದರಿಂದ ಈಗಾಗಲೇ ಹ್ಯಾರಿಸ್ ಅವರು ತಮ್ಮ ಕ್ಷೇತ್ರದಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ ಎಂಬ ಮಾತೂ ಕೇಳಿಬರುತ್ತಿದೆ. ಈ ಪ್ರಕರಣವನ್ನು ಪ್ರತಿಪಕ್ಷ ಬಿಜೆಪಿ ಕಾಂಗ್ರೆಸ್ ವೈಫಲ್ಯಕ್ಕೆ ಹಿಡಿದ ಕನ್ನಡಿ ಎಂಬಂತೆ ಬಿಂಬಿಸುವ ಪ್ರಯತ್ನದಲ್ಲಿ ಬಹುಪಾಲು ಯಶಸ್ವಿಯಾಗಿತ್ತು. ಹೀಗಿರುವಾಗ ಹ್ಯಾರಿಸ್ ಗೆ ಟಿಕೇಟ್ ನೀಡಿದಲ್ಲಿ ಚುನಾವಣೆ ಹೊತ್ತಲ್ಲಿ ಮತ್ತೆ ಈ ಪ್ರಕರಣವನ್ನು ಕೆದಕುವ ಅವಕಾಶವನ್ನು ಸ್ವತಃ ಕಾಂಗ್ರೆಸ್ಸೇ ಮಾಡಿಕೊಟ್ಟಂತಾಗುತ್ತದೆ ಎಂಬುದು ಕಾಂಗ್ರೆಸ್ ಲೆಕ್ಕಾಚಾರವಿದ್ದಿರಬಹುದು. ಅಲ್ಲದೆ ಹ್ಯಾರಿಸ್ ಪುತ್ರರ ಮೇಲಿರುವ ಅಪರಾಧ ಪ್ರಕರಣಗಳು ಶಂತಿನಗರದಲ್ಲಿ

ವಿದ್ವತ್ ಮೇಲಿನ ಹಲ್ಲೆ ಪ್ರಕರಣ
ಫೆ.17ರಂದು ಬೆಂಗಳೂರಿನ ಯು.ಬಿ.ಸಿಟಿಯಲ್ಲಿನ ಫರ್ಜಿ ಕೆಫೆಯಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ನಂತರ ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವಿದ್ವತ್ ಪ್ರಾನಾಪಾಯದಿಂದ ಪಾರಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹ್ಮದ್ ನಲಪಾಡ್ ಸೇರಿದಂತೆ 7 ಆರೋಪಿಗಳನ್ನು ಬಂಧಿಸಲಾಗಿತ್ತು. ಪುತ್ರನಿಗೆ ಜಾಮೀನು ಕೊಡಿಸುವ ಹಲವು ಪ್ರಯತ್ನಗಳಲ್ಲೂ ಹ್ಯಾರಿಸ್ ವಿಫಲರಾದರು. ಇದರಿಂದಾಗಿ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆಯಾಗಿರುವುದು ಖಂಡಿತ.

ರಿಜ್ವಾನ್ ಅರ್ಷದ್ ಗೆ ಟಿಕೇಟ್?
ಕೆಲವು ಮೂಲಗಳ ಪ್ರಕಾರ, ಕೇಂದ್ರ ಕಾಂಗ್ರೆಸ್ ನಾಯಕರೊಂದಿಗೆ ಹ್ಯಾರಿಸ್ ಉತ್ತಮ ಬಾಂಧವ್ಯ ಹೊಂದಿದ್ದರೂ, ರಾಜ್ಯ ನಾಯಕರೊಂದಿಗೆ ಅವರಿಗೆ ಉತ್ತಮ ಸಂಬಂಧವೇನೂ ಇಲ್ಲ. ಆದ್ದರಿಂದ ಅವರಿಗೆ ಟಿಕೇಟ್ ನೀಡಬಾರದೆಂದು ಕಾಂಗ್ರೆಸ್ಸಿನೊಳಗೇ ಕೆಲವರು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. ಅದೂ ಅಲ್ಲದೆ ಇನ್ನೋರ್ವ ಯುವ ಕಾಂಗ್ರೆಸ್ ನಾಯಕ ರಿಜ್ವಾನ್ ಅರ್ಷದ್ ಸಹ ಈ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ ಟಿಕೇಟ್ ಅವರಿಗೆ ಸಿಕ್ಕರೂ ಅಚ್ಚರಿಯಿಲ್ಲ. ಸದ್ಯಕ್ಕೆ ಟಿಕೇಟ್ ಯಾರಿಗೆ ನೀಡಬೇಕು ಎಂಬ ಕುರಿತು ಸಿದ್ದರಾಮಯ್ಯ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ನಿನ್ನೆ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಹ್ಯಾರಿಸ್ ಸಿದ್ದರಾಮಯ್ಯ ಅವರನ್ನು ತರಾತುರಿಯಲ್ಲಿ ಭೇಟಿ ಮಾಡಿದ ಬಗ್ಗೆಯೂ ವರದಿಯಾಗಿದ್ದು, ಮುಂದಿನ ಬೆಳವಣಿಗೆ ಕುತೂಹಲ ಕೆರಳಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications