Karnataka Elections: ಬಿಜೆಪಿ, ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಚುನಾವಣಾ ಪ್ರಚಾರ- ಸ್ಥಳಗಳು, ಸಮಯ, ವಿವರ ತಿಳಿಯಿರಿ
ಬೆಂಗಳೂರು, ಏಪ್ರಿಲ್ 24: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಹಲವಾರು ರಾಷ್ಟ್ರೀಯ ನಾಯಕರು ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಕೇಂದ್ರ ನಾಯಕರ ಬೃಹತ್ ಚುನಾವಣಾ ಪ್ರಚಾರ ಸಭೆಗಳನ್ನು ಬಿಜೆಪಿ ಯೋಜಿಸಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ ಅವರು ಏಪ್ರಿಲ್ 29 ರಂದು ಕರ್ನಾಟಕದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಬೆಳಗಾವಿಯಿಂದ ಪ್ರಾರಂಭಿಸಲಿದ್ದಾರೆ. ಬೆಳಗಾವಿ ಪ್ರಚಾರದ ವೇಳೆ ಮೋದಿ ಅವರು ಚಿಕ್ಕೋಡಿ, ಕಿತ್ತೂರು ಮತ್ತು ಕುಡಚಿಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಮೈಸೂರು, ರಾಮನಗರ ಮತ್ತು ಕೋಲಾರದಲ್ಲಿ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. ಮೋದಿ ಉತ್ತರ ಕನ್ನಡ ಜಿಲ್ಲೆಗೂ ಭೇಟಿ ನೀಡಲಿದ್ದಾರೆ. ಪ್ರಧಾನಿಯವರು ಮೇ 3 ರಂದು ಮತ್ತೆ ಕರ್ನಾಟಕಕ್ಕೆ ಚುನಾವಣೆ ಪ್ರಚಾರದ ನಿಮಿತ್ತ ಭೇಟಿ ನೀಡಲಿದ್ದಾರೆ.

ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಗಲಕೋಟೆ ಜಿಲ್ಲೆಯ ತೇರದಾಳ, ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ, ಯಾದಗಿರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮತ್ ಶಾ ಅವರು ಶುಕ್ರವಾರ ಕರ್ನಾಟಕದಲ್ಲಿದ್ದರು. ಮಳೆಯಿಂದಾಗಿ ದೇವನಹಳ್ಳಿಯಲ್ಲಿ ಅವರ ಸಾರ್ವಜನಿಕ ರ್ಯಾಲಿಯನ್ನು ರದ್ದುಗೊಳಿಸಲಾಯಿತು. ಕೇಂದ್ರ ಗೃಹ ಸಚಿವರು ಏಪ್ರಿಲ್ 24 ರಂದು ಕರ್ನಾಟಕಕ್ಕೆ ಮರಳಿದ್ದಾರೆ.
ಜೆಪಿ ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಸೋಮವಾರದಿಂದ ಮೂರು ದಿನಗಳ ಕರ್ನಾಟಕ ಪ್ರವಾಸದಲ್ಲಿ ಇರುತ್ತಾರೆ. ನಡ್ಡಾ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಹಲವಾರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಯೋಗಿ ಆದಿತ್ಯನಾಥ್ ಹಾಗೂ ಹಿಮಂತ ಬಿಸ್ವಾ ಶರ್ಮಾ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 26, ಏಪ್ರಿಲ್ 30, ಮೇ 6 ಮತ್ತು ಮೇ 7 ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಏಪ್ರಿಲ್ 25 ಮತ್ತು ಮೇ 6 ರ ನಡುವೆ ಐದು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ಹಾಗೂ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರದಿಂದ ಎರಡು ಬಾರಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಸೋಮವಾರ ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಕಬ್ಬು ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಭಾನುವಾರ ವಿಜಯಪುರದಲ್ಲಿ ಪಥಸಂಚಲನ ನಡೆಸಿ, ಬಾಗಲಕೋಟೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡರು.
ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಏಪ್ರಿಲ್ 25 ಮತ್ತು ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಕಾಂಗ್ರೆಸ್ ನಾಯಕರು ಮೈಸೂರು ಮತ್ತು ಚಾಮರಾಜನಗರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮೇ 10 ರಂದು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications