ದೆಹಲಿಯಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆ ಹಗ್ಗ ಜಗ್ಗಾಟ!
ಬೆಂಗಳೂರು, ಏಪ್ರಿಲ್ 15 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಜೆಡಿಎಸ್ನಿಂದ ಪಕ್ಷ ಸೇರಿರುವ 7 ಏಳು ನಾಯಕರಿಗೆ ಟಿಕೆಟ್ ನೀಡಬೇಕೆ?, ಬೇಡವೇ? ಎಂದು ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್ ಪಕ್ಷದ ಮೂಲಗಳ ಮಾಹಿತಿ ಪ್ರಕಾರ 190 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಆದರೆ, ಕಳಂಕಿತರ ಆರೋಪ ಹೊತ್ತವರಿಗೆ ಟಿಕೆಟ್ ನೀಡಬೇಕೆ?, ಗೆಲ್ಲುವ ಸಾಧ್ಯತೆ ಇಲ್ಲದೆ ಹಿರಿಯ ನಾಯಕರಿಗೆ ಟಿಕೆಟ್ ಕೊಡಬೇಕೆ? ಎಂಬ ಬಗ್ಗೆ ಚರ್ಚೆ ಸಾಗಿದ್ದು, ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ.
ಟಿಕೆಟ್ ಹಂಚಿಕೆ ಬಗ್ಗೆ ಭಾನುವಾರವೂ ಸರಣಿ ಸಭೆ ನಡೆಯುವ ನಿರೀಕ್ಷೆ ಇದೆ. ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆದ್ದರಿಂದ ಪಕ್ಷ ಇಂದು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಹಿರಿಯ ನಾಯಕರ ನಡುವಿನ ಜಟಾಪಟಿಯೇ ಕಾರಣ ಎಂದು ತಿಳಿದುಬಂದಿದೆ.

ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಪ್ರಚಾರದ ಕಡೆ ಗಮನವಹಿಸಿ, ದೆಹಲಿಯಿಂದ ಕರ್ನಾಟಕಕ್ಕೆ ವಾಪಸ್ ಆಗಿ ಎಂದು ಹಲವು ನಾಯಕರಿಗೆ ಸೂಚನೆ ನೀಡಿದೆ.
ಭಾನುವಾರ ರಹಸ್ಯ ಸ್ಥಳದಲ್ಲಿ ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆಯಲಿದೆ. ಇಂದು ಸಂಜೆಯ ವೇಳೆಗೆ ಮೊದಲ ಪಟ್ಟಿ ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಟ್ಟಿ ಬಿಡುಗಡೆಗೆ ಮುನ್ನವೇ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ.
ಶನಿವಾರ ರಾಹುಲ್ ಗಾಂಧಿ ಅವರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು 'ಭಾನುವಾರ ಎರಡು ಸುತ್ತಿನ ಸಭೆ ನಡೆಸುತ್ತೇವೆ. ಎಲ್ಲಾ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗುತ್ತದೆ' ಎಂದು ಹೇಳಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications