Get Updates
Get notified of breaking news, exclusive insights, and must-see stories!

ಅಥಣಿಯಲ್ಲಿ ಸವದಿ ಹಣೆಯಲು ಸಾಹುಕಾರ್ ಹೊಸ ಆಟ- ಮೂವರನ್ನು ಪಕ್ಷಕ್ಕೆ ಕರೆ ತರಲು ಯಶಸ್ವಿಯಾದ ರಮೇಶ್ ಜಾರಕಿಹೊಳಿ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮತದಾನ ಪ್ರಕ್ರಿಯೆ ನಡೆಯಬೇಕಿದೆ. ಅದಾಗಲೇ ಬಿಜೆಪಿ ಆಪರೇಷನ್ ಶುರು ಮಾಡಿದೆ. ಮುಖ್ಯವಾಗಿ ಅಥಣಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯನ್ನು ಹಣೆಯಲು ಸಾಹುಕಾರ್ ಹೊಸ ಆಟ ಶುರು ಮಾಡಿದ್ದಾರೆ.

ಕಳೆದ ಒಂದು ವಾರದಿಂದ ಆಪರೇಷನ್ ಕಮಲ ನಡೆಸಿದ ಮಾಜಿ ಸಚಿವ ರಮೇಶ್‌ ರಮೇಶ್ ಜಾರಕಿಹೊಳಿ ಸವದಿ ಆಪ್ತರ ಭೇಟಿ ಮಾಡಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರೋರಾತ್ರಿ ಆಪರೇಷನ್ ನಡೆಸಿದ ರಮೇಶ್ ಜಾರಕಿಹೊಳಿ, ಧರೆಪ್ಪ ಠಕ್ಕಣ್ಣವರ್, ನಾನಾಸಾಬ ಅವತಾಡೆ, ತಮ್ಮಣ್ಣ ಪೂಜಾರಿ ಮೂವರನ್ನು ಪಕ್ಷಕ್ಕೆ ಕರೆ ತಂದಿದ್ದಾರೆ ಸಾಹುಕಾರ್ ರಮೇಶ್ ಜಾರಕಿಹೊಳಿ.

Karnataka Elections: ramesh jarkiholi managed to invite the three to the party

ಈ ಬೆಳವಣಿಗೆಯನ್ನು ನೋಡುತ್ತಿದ್ದರೆ ಇನ್ನೂ ಎರಡು ಮೂರು ದಿನಗಳಲ್ಲಿ ರಾಜಕೀಯ ಚಿತ್ರ ಬದಲಾಗುವಂತೆ ಕಾಣಿಸುತ್ತಿದೆ. ಕಳೆದ ವರ್ಷ ಆಪರೇಷನ್ ಮೂಲಕವೇ ಬಿಜೆಪಿ ಸರ್ಕಾರವನ್ನು ರಚನೆ ಮಾಡಿತ್ತು. ಆದರೀಗ ಇನ್ನೂ ಚುನಾವಣೆ ಕೂಡ ಮುಗಿದಿಲ್ಲ ಅದಾಕಗಲೇ ಆಪರೇಷನ್ ಶುರುಮಾಡಿದೆ. ಲಕ್ಷ್ಮಣ ಸವದಿಯನ್ನು ಸೋಲಿಸಲು ಪಣತೊಟ್ಟಿರುವ ಜಾರಕಿಹೊಳಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಹೀಗಾಗಿ ಸದ್ಯ ಅಥಣಿ ವಿಧಾನಸಭಾ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಇಲ್ಲಿ ಅಭ್ಯರ್ಥಿಗಳ ನಡುವಿನ ಫೈಟ್‌ಗಿಂತ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ನಡುವಿನ ಹಣಾಹಣಿ ರಾಜ್ಯದ ಗಮನ ಸೆಳೆದಿದೆ. ಅಥಣಿಯಿಂದ ಬಿಜೆಪಿ ಟಿಕೆಟ್‌ ಸಿಗದ ಹಿನ್ನೆಲೆ ಲಕ್ಷ್ಮಣ್‌ ಸವದಿ ಸ್ವಾಭಿಮಾನದ ಪ್ರಶ್ನೆ ಮುಂದಿಟ್ಟು ಬಿಜೆಪಿಗೆ ಗುಡ್‌ ಬೈ ಹೇಳಿ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಕಣಕ್ಕಿಳಿದಿರುವ ಮಹೇಶ್‌ ಕುಮಟಳ್ಳಿಗೆ ರಮೇಶ್‌ ಜಾರಕಿಹೊಳಿ ಶ್ರೀರಕ್ಷೆ ಇದ್ದು, ಇಲ್ಲಿ ಸವದಿ ವರ್ಸಸ್ ರಮೇಶ್‌ ಸಮರ ನಡೆಯವುದು ಶತಸಿದ್ಧವಾಗಿದೆ.

Karnataka Elections: ramesh jarkiholi managed to invite the three to the party

ಕಳೆದ ಉಪ ಚುನಾವಣೆಯಲ್ಲಿ ಮಹೇಶ್‌ ಕುಮಟಳ್ಳಿ ಅವರಿಗೆ ಕ್ಷೇತ್ರ ತ್ಯಾಗ ಮಾಡಿದ್ದ ಲಕ್ಷ್ಮಣ್‌ ಸವದಿ ಈ ಸಲ ಅಥಣಿಯಿಂದ ಬಿಜೆಪಿ ಟಿಕೆಟ್‌ ನಿರೀಕ್ಷೆಯಲ್ಲಿದ್ದರು. ಆದರೆ, ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿ ಮಾತ್ರ ಪಟ್ಟು ಹಿಡಿದು ಮಹೇಶ್‌ ಕುಮಟಳ್ಳಿ ಅವರಿಗೆ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡದಿದ್ದರೆ, ನನಗೆ ಗೋಕಾಕ ಟಿಕೆಟ್‌ ಬೇಡ ಎಂಬುವಷ್ಟರ ಮಟ್ಟಿಗೆ ರಮೇಶ್‌ ಜಾರಕಿಹೊಳಿ ಒತ್ತಡ ಹಾಕಿದ್ದರು.

ಇದೇ ಕಾರಣಕ್ಕೆ ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡಿ ಲಕ್ಷ್ಮಣ್‌ ಸವದಿ ಅವರಿಗೆ ಟಿಕೆಟ್‌ ನಿರಾಕರಿಸಿತ್ತು. ಇದೇ ಬೇಸರದಿಂದಾಗಿ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಜೊತೆಗೆ ಅಥಣಿಯಲ್ಲಿ ಕಾಂಗ್ರೆಸ್ ನಿಂದಲೇ ಸರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಇದನ್ನು ಮಹೇಶ್‌ ಕುಮಟಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಫೈಟ್‌ಗಿಂತ ರಮೇಶ್‌ ಜಾರಕಿಹೊಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಫೈಟ್ ಎನ್ನಬಹುದು.

ಹೀಗಾಗಿ ಅಥಣಿಯಲ್ಲಿ ಸವದಿ ಹಾಗೂ ರಮೇಶ್ ಗೆಲುವಿನ ಜಿದ್ದಾಜಿದ್ದಿ ಜೋರಾಗಿದೆ. ಸವದಿಯನ್ನು ಹಣೆಯಲು ಸಾಹುಕಾರ್ ಶಾಸಕರನ್ನು ಪಕ್ಷಕ್ಕೆ ಕರೆತಂದಿದ್ದಾರೆ.

ಒಂದು ಕಾಲದಲ್ಲಿ ಬಿಜೆಪಿಯ ಭದ್ರಕೋಟೆಯಾಗಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್ ಕಾಂಗ್ರೆಸ್‌ನತ್ತ ಮುಖ ಮಾಡುವುದರೊಂದಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿನ ಹೋರಾಟ ಕುತೂಹಲ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರು ಭಾರೀ ದಂಗೆಯನ್ನು ಸೋಲಿಸುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಕೆತ್ತಲು ಶೆಟ್ಟರ್ ಬಿಗ್ ಪ್ಲ್ಯಾನ್ ಮಾಡಿದ್ದಾರೆ. ಇಲ್ಲೂ ಲಿಂಗಾಯತ ಸಮುದಾಯವನ್ನು ಸೆಳೆಯಲು ಬಿಜೆಪಿ ಬಿಗ್ ಪ್ಲ್ಯಾನ್ ಮಾಡುತ್ತಿದೆ.

ಮುಂದೆ ಇದು ಕಾಂಗ್ರೆಸ್‌ ಹಾಗೂ ಬಿಜೆಪಿ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+