'ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಕಾರಣ, ಅವರಿದ್ದರೆ ಪಕ್ಷಕ್ಕೆ ಗೆಲುವಿಲ್ಲ'
ಬೆಂಗಳೂರು, ಮೇ 16 : 'ಪಕ್ಷಗಳು ಒಂದಾಗಿ ಸರ್ಕಾರ ರಚನೆ ಮಾಡಬೇಕು. ಆದರೆ, ಈ ಮನುಷ್ಯ ಸಿದ್ದರಾಮಯ್ಯ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಲು ಬಿಡುವುದಿಲ್ಲ. ಹೀನಾಯವಾಗಿ ಚಾಮುಂಡೇಶ್ವರಿ ಸೋತು ಬಂದಿದ್ದಾನೆ. ಬಾದಾಮಿಯಲ್ಲಿ ಕೆಲವೇ ಅಂತರಗಳಲ್ಲಿ ಗೆದ್ದು ಬಂದಿದ್ದಾನೆ' ಎಂದು ಕೆ.ಬಿ.ಕೋಳಿವಾಡ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಬುಧವಾರ ಬೆಂಗಳೂರಿನ ಗಾಲ್ಫ್ ಕೋರ್ಸ್ ರಸ್ತೆಯಲ್ಲಿರುವ ನಿವಾಸದಲ್ಲಿ ಕೆ.ಬಿ.ಕೋಳಿವಾಡ ಅವರು ಪತ್ರಿಕಾಗೋಷ್ಠಿ ನಡೆಸಿದರು. 'ಸಿದ್ದರಾಮಯ್ಯ ಅವರಿಗೆ ಯಾವುದೇ ಸ್ಥಾನ ಕೊಡಬೇಡಿ ಎಂದು ನಾನೇ ಖುದ್ದಾಗಿ ರಾಹುಲ್ ಗಾಂಧಿ ಅವರಿಗೆ ಹೇಳುವೆ' ಎಂದರು.
'ಲಿಂಗಾಯತ ಮತ್ತು ವೀರಶೈವ ಧರ್ಮವನ್ನು ಬೇರೆ-ಬೇರೆ ಮಾಡಿದರು. ಈಗ ಅದರ ಶಾಪ ಅನುಭವಿಸುತ್ತಿದ್ದಾನೆ. ಲಿಂಗಾಯತ ಧರ್ಮ ಪ್ರತ್ಯೇಕ ಮಾಡಬಾರದಿತ್ತು. ಪಕ್ಷದ ಸೋಲಿಗೆ ಇದು ಕೂಡ ಮುಖ್ಯವಾದ ಕಾರಣ. ಇನ್ನಾದರೂ ಸಿದ್ದರಾಮಯ್ಯ ಅವರು ಬುದ್ಧಿ ಕಲಿಯಲಿ' ಎಂದು ಹೇಳಿದರು.
ಕೆ.ಬಿ.ಕೋಳಿವಾಡ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. 59,572 ಮತಗಳನ್ನು ಪಡೆದು ಕೆಪಿಜೆಪಿಯ ಅಭ್ಯರ್ಥಿ ಆರ್.ಶಂಕರ್ ವಿರುದ್ಧ ಸೋಲು ಕಂಡಿದ್ದಾರೆ.

'ಪಕ್ಷದ ಸ್ಥಿತಿ ನಿಜಕ್ಕೂ ಬೇಸರದ ಸಂಗತಿ'
'ನಾನು ಅಪ್ಪಟ ಕಾಂಗ್ರೆಸಿಗ, ಅಧಿಕಾರದಲ್ಲಿದ್ದಾಗ ಸ್ಪೀಕರ್ ರೀತಿ ನಡೆದುಕೊಂಡಿದ್ದೇನೆ. ಕಾಂಗ್ರೆಸ್ ಈ ಸ್ಥಿತಿಯಲ್ಲಿರುವುದು ನಿಜಕ್ಕೂ ಬೇಸರದ ಸಂಗತಿ. ಕಾಂಗ್ರೆಸ್ ಈ ಪರಿಸ್ಥಿತಿಗೆ ಬರಲು ಸಿದ್ದರಾಮಯ್ಯ ಅವರೇ ಮುಖ್ಯ ಕಾರಣ. ನಾನು ಕಾಂಗ್ರೆಸ್ ಪರವಾದ ಅನೇಕ ನಿರ್ಣಯಗಳನ್ನು ತೆಗೆದುಕೊಂಡಿದ್ದೇನೆ. ಸಿದ್ದರಾಮಯ್ಯ ಅವನದ್ದು ಕಾಂಗ್ರೆಸ್ ರಕ್ತ ಅಲ್ಲ. ನನ್ನ ರಕ್ತ ಕಾಂಗ್ರೆಸ್ ನದ್ದು' ಎಂದು ಹೇಳಿದರು.

ಪಕ್ಷ ಹೀನಾಯ ಸೋಲು ಅನುಭವಿಸಿದೆ
'ಕಳೆದ ಚುನಾವಣೆಯಲ್ಲಿ ಪರಮೇಶ್ವರ ಅವರ ಸೋಲಿಗೂ ಸಿದ್ದರಾಮಯ್ಯ ಅವರೇ ಮುಖ್ಯ ಕಾರಣ. ನಾನು ರಾಹುಲ್ ಗಾಂಧಿ ಜೊತೆ ಮಾತನಾಡಿದಕ್ಕೆ ಟಿಕೆಟ್ ಸಿಕ್ಕಿತು. ಹಲವು ನಾಯಕರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಲು ಸಿದ್ದರಾಮಯ್ಯನೇ ಮುಖ್ಯ ಕಾರಣ. ಅವನು ಗೆಲ್ಲೋಕೆ ಏನೇನ್ ಬೇಕೋ ಅದನ್ನೆಲ್ಲ ಮಾಡಿಕೊಂಡ. ಈಗ ಪಕ್ಷ ಹೀನಾಯ ಸೋಲನ್ನು ಅನುಭವಿಸಿದೆ. ಇಂತಹ ಮನುಷ್ಯನಿಂದ ಕಾಂಗ್ರೆಸ್ ಗೆ ಉಪಯೋಗ ಇಲ್ಲ' ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅಧ್ಯಕ್ಷರಾಗುವುದು ಬೇಡ
'ಕೆಪಿಸಿಸಿ ಅಧ್ಯಕ್ಷರನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡುವುದು ಬೇಡ. ಪರಮೇಶ್ವರ ಅವರು ಅಥವ ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ. ಸಿದ್ದರಾಮಯ್ಯ ಅವರಿಗೆ ಯಾವುದೇ ಹುದ್ದೆ ನೀಡಬೇಡಿ ಎಂದು ನಾನು ಖುದ್ದಾಗಿ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುವೆ' ಎಂದು ಕೆ.ಬಿ.ಕೋಳಿವಾಡ ಹೇಳಿದರು.

ಜಾತಿ, ಅಧಿಕಾರ ಬೇಕು
'ಸಿದ್ದರಾಮಯ್ಯ ಅವರಿಗೆ ಜಾತಿ ಮತ್ತು ಅಧಿಕಾರ ಮಾತ್ರ ಬೇಕು. ಜಾತಿ ಬಿಟ್ಟರೇ ಸಿದ್ದರಾಮಯ್ಯನಿಗೆ ಏನೂ ಗೊತ್ತಿಲ್ಲ. ನನ್ನ ಎದುರಿಗೆ ಸಿದ್ದರಾಮಯ್ಯ ಚೋಟ. ನಾನಿದ್ರೆ ಮಾತ್ರ ಕಾಂಗ್ರೆಸ್ ಅಂತ ಸಿದ್ದರಾಮಯ್ಯ ಬೀಗುತ್ತಿದ್ದಾನೆ. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ ಮುಂದೆ ರಾಹುಲ್ ಪ್ರಧಾನಿ ಆಗಬೇಕು ಕಾಂಗ್ರೆಸ್ ಬಹುಮತ ಪಡೆಯಬೇಕು. ಸಿದ್ದರಾಮಯ್ಯ ಅವರಿಂದ ಪಕ್ಷಕ್ಕೆ ಏನೂ ಲಾಭವಿಲ್ಲ' ಎಂದರು.

ನಾಚಿಕೆ ಆಗಬೇಕು ಸಿದ್ದರಾಮಯ್ಯಗೆ
'ಜನರು ಏನು ತೀರ್ಮಾನ ಮಾಡಿದರು ಎಂದು ನೀವೆ ನೋಡಿದಿರಲ್ಲ. ಸಿದ್ದರಾಮಯ್ಯ ಮುಂದೆ ಅಧಿಕಾರಕ್ಕೆ ಬರೋದೆ ಇಲ್ಲ. ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಸಿದ್ದರಾಮಯ್ಯ ಬಿಡುವುದಿಲ್ಲ. ಸಿದ್ದರಾಮಯ್ಯ ಗೆ ಅಧಿಕಾರದ ಲಾಲಾಸೇ ತುಂಬಾನೇ ಇದೆ' ಎಂದು ಆರೋಪಿಸಿದರು.

ಶಂಕರ್ ಜೊತೆ ಮಾತನಾಡಿದ್ದೇನೆ
'ನಾನು ಸೋತಿದ ಹಿನ್ನಲೆಯಲ್ಲಿ ಈ ಮಾತುಗಳನ್ನು ಹೇಳುತ್ತಿಲ್ಲ. ಬಹಳ ನೋವಿನಿಂದ ಈ ಮಾತುಗಳನ್ನು ಹೇಳುತ್ತಿದ್ದೇನೆ. ನಾನು 5 ಸಾರಿ ಸೋತಿದ್ದೇನೆ. 5 ಭಾರಿ ಗೆದ್ದಿದ್ದೇನೆ. ಪಕ್ಷ ಬಹಳ ಮುಖ್ಯವಾಗುತ್ತದೆ. ನನಗಿಂತ 13 ವರ್ಷ ಸಿದ್ದರಾಮಯ್ಯ ಬಚ್ಚ. ನಾನು ಸ್ಪೀಕರ್ ಆಗಿದ್ದಾಗ ಸಾಕಷ್ಟು ಸಲ ಕಾಂಗ್ರೆಸ್ ಪರ ಕೆಲಸ ಮಾಡಿದ್ದೇನೆ. ಸಿದ್ದರಾಮಯ್ಯ ನಿಂದ ಕಾಂಗ್ರೆಸ್ ಗೆ ಅನುಕೂಲ ಆಗೊಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದು ಇಲ್ಲ' ಎಂದು ಸ್ಪಷ್ಟಪಡಿಸಿದರು.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications