ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಚುನಾವಣೆ ಫಲಿತಾಂಶ : ಸಿದ್ದರಾಮಯ್ಯ ಬೆಂಗಳೂರಿನಲ್ಲಿದ್ದಾರೆ!

|
Google Oneindia Kannada News

ಬೆಂಗಳೂರು, ಮೇ 15 : ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿದ್ದು, ಫಲಿತಾಂಶವನ್ನು ವೀಕ್ಷಿಸುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ, ತವರು ಜಿಲ್ಲೆ ಮೈಸೂರಿಗೆ ಹೋಗದೆ ಬೆಂಗಳೂರಿನಲ್ಲಿಯೇ ಇದ್ದಾರೆ.

LIVE: ಕರ್ನಾಟಕ ಫಲಿತಾಂಶ: ಮತ ಎಣಿಕೆಗೆ ಕ್ಷಣಗಣನೆLIVE: ಕರ್ನಾಟಕ ಫಲಿತಾಂಶ: ಮತ ಎಣಿಕೆಗೆ ಕ್ಷಣಗಣನೆ

Karnataka elections results 2018 : Siddaramaiah in Bengaluru

ಸಿದ್ದರಾಮಯ್ಯ ಅವರು ಮೈಸೂರಿಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ, ಅದನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿಯೇ ಫಲಿತಾಂಶವನ್ನು ವೀಕ್ಷಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಯ ನಂತರ ಅವರು ಮೈಸೂರಿಗೆ ಹೋಗುವ ಕುರಿತು ತೀರ್ಮಾನವನ್ನು ತೆಗೆದುಕೊಳ್ಳಲಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಗೆದ್ದೇ ಗೆಲ್ಲುತ್ತೀನಿ : ಸಿದ್ದರಾಮಯ್ಯಚಾಮುಂಡೇಶ್ವರಿಯಲ್ಲಿ ಗೆದ್ದೇ ಗೆಲ್ಲುತ್ತೀನಿ : ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಪಕ್ಷವನ್ನು ಗೆಲ್ಲಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಉಡುಗೊರೆ ನೀಡುವ ಜೊತೆಗೆ, ಎರಡೂ ಕ್ಷೇತ್ರದಲ್ಲಿ ಅವರು ಗೆಲ್ಲುವುದು ಸವಾಲಾಗಿದೆ.

ಜನರು ಈಗಾಗಲೇ ತಮ್ಮ ತೀರ್ಪನ್ನು ನೀಡಿದ್ದು, 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ.

'ಕಾಂಗ್ರೆಸ್ 120ಕ್ಕಿಂತ ಅಧಿಕ ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರಕ್ಕೆ ಬರಲಿದೆ' ಎಂದು ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ.

English summary
Karnataka Election Results 2018 Live Updates in Kannada : Find all the latest updates, photos, videos, winners and losers details with respect to Karnataka Assembly Elections 2018. Chief Minister Siddaramaiah in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X