ಗ್ರಾಹಕರಿಗೆ ಕರೆಂಟ್ ಶಾಕ್, ಪ್ರತಿ ಯೂನಿಟ್ ಗೆ 48 ಪೈಸೆ ಹೆಚ್ಚಳ
ಕೆಇಆರ್ ಸಿಯು ರಾಜ್ಯದ ಎಲ್ಲಾ ಎಸ್ಕಾಂಗಳಲ್ಲಿ 48ಪೈಸೆ ವಿದ್ಯುತ್ ದರ ಹೆಚ್ಚಿಸಿದೆ. ಏಪ್ರಿಲ್ 01ರಿಂದಲೇ ಈ ಪರಿಷ್ಕರಣೆ ದರ ಅನ್ವಯವಾಗಲಿದೆ.
ಬೆಂಗಳೂರು, ಏಪ್ರಿಲ್ 11 : ರಾಜ್ಯದಲ್ಲಿ ಪ್ರತಿ ಯೂನಿಟ್ ಗೆ 48 ಪೈಸೆ ವಿದ್ಯುತ್ ದರ ಹೆಚ್ಚಿಸಿ ಮಂಗಳವಾರ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಆದೇಶ ಹೊರಡಿಸಿದೆ. ಏಪ್ರಿಲ್ 01ರಿಂದಲೇ ಈ ಪರಿಷ್ಕರಣೆ ದರ ಅನ್ವಯವಾಗಲಿದೆ.
ಮೊದಲೇ ರಾಜ್ಯದಲ್ಲಿ ಬರ ಆವರಿಸಿದ್ದರಿಂದ ಕೆಲಸವಿಲ್ಲದೆ ಬರಿಗೈಯಲ್ಲಿ ಕುಳಿತ ಜನರಿಗೆ ಇದೀಗ ವಿದ್ಯತ್ ದರ ಹೆಚ್ಚಳದಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಎಲ್ಲಾ ಎಸ್ಕಾಂಗಳು (ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಹಾಗೂ ಜೆಸ್ಕಾಂ ಕಂಪನಿ) ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಯೂನಿಟ್ ಗೆ 1.40ಪೈಸೆ ಹೆಚ್ಚಳಕ್ಕೆ ಆಗ್ರಹಿಸಲಾಗಿತ್ತು. ಆದರೆ, ಕೆಇಆರ್ ಸಿ ಪ್ರತಿ ಯೂನಿಟ್ ಗೆ 48 ಪೈಸೆ ಹೆಚ್ಚಳ ಮಾಡಿದೆ.

ರಾಜ್ಯದ ಎಲ್ಲಾ ಎಸ್ಕಾಂಗಳಲ್ಲಿ 48ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ಕೆಇಆರ್ ಸಿ ಅಧ್ಯಕ್ಷ ಎಂ. ಕೆ ಶಂಕರಲಿಂಗೇಗೌಡ ಅವರು ದರ ಹೆಚ್ಚಳ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 1ರಿಂದಲೇ ವಿದ್ಯುತ್ ದರ ಪರಿಷ್ಕರಣೆ ಮಾಡಬೇಕಿತ್ತು. ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದಿದ್ದರಿಂದ ಏಪ್ರಿಲ್ 11ರಂದು ಕೆಇಆರ್ ಸಿ ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.
ನಗರ ಪ್ರದೇಶಗಳಲ್ಲಿನ ಗೃಹ ಬಳಕೆ ಗ್ರಾಹಕರು ಬಳಸುವ ಮಾಹೆಯಾನ 30 ಯೂನಿಟ್ಗಳವರೆಗಿನ ವಿದ್ಯುಚ್ಛಕ್ತಿಗೆ ಪ್ರತಿ ಯೂನಿಟ್ಗೆ ಈಗಿರುವ ದರವಾದ 3ರು,ದಿಂದ 3.25ಕ್ಕೆ ಏರಿಸಲಾಗಿದೆ ಮತ್ತು 31ರಿಂದ 100 ಯೂನಿಟ್ಗಳವರೆಗಿನ ಬಳಕೆಗೆ ಈಗಿರುವ ಪ್ರತಿ ಯೂನಿಟ್ ದರ 4.40ಅನ್ನು 4.70ಕ್ಕೆ ಏರಿಸಲಾಗಿದೆ.
101ರಿಂದ 200 ಯೂನಿಟ್ಗಳವರೆಗಿನ ಬಳಕೆಗೆ ಈಗಿರುವ ಪ್ರತಿ ಯೂನಿಟ್ ದರವನ್ನು 5.90ದಿಂದ 6.25ಕ್ಕೆ ದರ ಏರಿಸಲಾಗಿದೆ. 200 ಯೂನಿಟ್ ಗಳನ್ನು ಮೇಲ್ಪಟ್ಟ ಬಳಕೆಗೆ ಈಗಿರುವ ಪ್ರತಿ ಯೂನಿಟ್ 6.90 ದರವನ್ನು 7.30ಕ್ಕೆ ದರ ಏರಿಸಲಾಗಿದೆ.
ಕಳೆದ ಬಾರಿ ನಗರದ ಗೃಹಬಳಕೆ ಗ್ರಾಹಕರಿಗೆ ಮೊದಲ 30 ಯೂನಿಟ್ಗೆ 30 ಪೈಸೆ, 31ರಿಂದ 100 ಯೂನಿಟ್ಗೆ 40 ಪೈಸೆ ಹೆಚ್ಚಿಸಲಾಗಿತ್ತು.
100 ಯೂನಿಟ್ಗೆ ಮೇಲ್ಪಟ್ಟ ಬಳಕೆಗೆ ಪ್ರತಿ ಹಂತದಲ್ಲಿ ತಲಾ 50 ಪೈಸೆ ಏರಿಸಲಾಗಿತ್ತು. ಗ್ರಾಮೀಣ ಗೃಹಬಳಕೆದಾರರಿಗೂ ಇಷ್ಟೇ ದರ ಹೆಚ್ಚಳವಾಗಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications