Electricity tariff hike: ಕರ್ನಾಟಕದ ಜನರಿಗೆ ಮತ್ತೆ ವಿದ್ಯುತ್ ದರ ಏರಿಕೆ ಶಾಕ್, ಪರಿಷ್ಕರಣೆ ಪೂರ್ಣ ಮಾಹಿತಿ
ಬೆಂಗಳೂರು, ಜನವರಿ 07: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ರಾಜ್ಯದ ಐದೂ ಎಸ್ಕಾಂಗಳು ಪ್ರತಿ ಯುನಿಟ್ ದರ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಕುರಿತು ದರ ಏರಿಕೆಯ ಪ್ರಸ್ತಾವನೆಯನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ಪ್ರಸ್ತಾವನೆ ಸಲ್ಲಿಸಿವೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ರಾಜ್ಯದ ಐದೂ ಎಸ್ಕಾಂಗಳು ಪ್ರತಿ ಯುನಿಟ್ಗೆ 50ರಿಂದ 60 ಪೈಸೆಯಷ್ಟು ದರ ಏರಿಕೆ ಮಾಡಬೇಕು ಎಂದು ಒತ್ತಾಯಿಸಿವೆ.

ಯುನಿಟ್ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರ ಪ್ರತಿಯ ದಲ್ಲಿ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿತ್ತು. ಅದನ್ನು KERC ಪರಿಶೀಲನೆ ನಡೆಸಿ ಬೆಸ್ಕಾಂ ಹಾಗೂ ಗ್ರಾಹಕರು ಇಬ್ಬರಿಗೂ ಹೊರೆಯಾಗದ ರೀತಿಯಲ್ಲಿ ಸದ್ಯದಲ್ಲೇ ದರ ಪರಿಷ್ಕರಣೆ ಮಾಡಲಿದೆ. ಸರ್ಕಾರದ ಅನುಮೋದನೆ ಸಿಕ್ಕಿದರೆ ವಿದ್ಯುತ್ ಪರಿಷ್ಕೃತ ದರವು ಮುಂದಿನ ಏಪ್ರೀಲ್ 1ರಿಂದಲೇ ಅನುಷ್ಠಾನಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
ವಿದ್ಯತ್ ದರ ಏರಿಕೆಗೆ ಮನವಿ
ಸರಬರಾಜು ಕಂಪನಿ (MESCOM), ಕಲಬುರಗಿ ವಿದ್ಯುತ್ ಸರಬರಾಜು ಕಂಪನಿ (GESCOM), ಹುಬ್ಬಳ್ಳಿ ದನಿ ವಿದ್ಯುತ್ ಸರಬರಾಜು ಕಂಪನಿ (HESCOM), ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (SESC-Mysuru) ಸಹ ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ.
KERC ಮೂಲಗಳ ಪ್ರಕಾರ ನಾಲ್ಕೂ ಎಸ್ಕಾಂಗಳು ಪ್ರತಿ ಯುನಿಟ್ಗೆ 50 ರಿಂದ 60 ಪೈಸೆಯಷ್ಟು ವಿದ್ಯುತ್ ದರ ಪರಿಷ್ಕರಣೆಗೆ ಮನವಿ ಮಾಡಿವೆ ಎಂದು ತಿಳಿದು ಬಂದಿದೆ. ಈಗಾಗಲೇ ಅಗತ್ಯ ವಸ್ತುಗಳ ದರ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೆ ವಿದ್ಯುತ್ ದರ ಏರಿಕೆ ಶಾಕ್ ಹೊಡೆಯಲಿದೆ.
ಕಲ್ಲಿದ್ದಲು ಖರೀದಿ, ವಿದ್ಯುತ್ ಖರೀದಿ ಹಾಗೂ ವಿದ್ಯುತ್ ಸರಬರಾಜು ವೆಚ್ಚ ಸೇರಿ ದಂತೆ ಹಲವು ಕಾರಣಗಳಿಂದ ನಿರ್ವಹಣೆಗೆ ನಿರ್ವಹಣಾ ಕಂಪನಿಗಳಿಗೆ ಹೊರೆ ಆಗುತ್ತಿದೆ. ಹೀಗಾಗಿ ನಷ್ಟ ಸರಿತೂಗಿಸಲು 2024-25ನೇ ಸಾಲಿಗೆ ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ಅವೆಲ್ಲ ಸಂಸ್ಥೆಗಳು ಮನವಿ ಮಾಡಿವೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ










Click it and Unblock the Notifications