ಕರ್ನಾಟಕದಲ್ಲಿ ಒಮ್ಮೆ ಶಾಸಕರಾದವರಿಗೆ ಸಿಗುವ ದುಡ್ಡೆಷ್ಟು ? ಇಲ್ಲಿದೆ ಮಾಹಿತಿ!
ಕರ್ನಾಟಕದಲ್ಲಿ ಒಮ್ಮೆ ಶಾಸಕರಾದರೆ ಅವರಿಗೆ ಹಾಗೂ ಅವರ ಅವಲಂಬಿತ ಕುಟುಂಬಕ್ಕೆ ಸರ್ಕಾರಕ್ಕೆ ಎಷ್ಟು ಹಣ ಸಿಗುತ್ತದೆ ಅಥವಾ ಮಾಜಿ ಶಾಸಕರು ಮತ್ತು ದಿವಂಗತ ಮಾಜಿ ಶಾಸಕರ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನ ಮತ್ತು ವೈದ್ಯಕೀಯ ಭತ್ಯೆ (ಹಣ) ಎಷ್ಟು ಸಿಗುತ್ತದೆ ಎನ್ನುವ ವಿವರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮಾಹಿತಿ ಹಕ್ಕು ಅಧಿನಿಯಮ 2005ರಡಿಯಲ್ಲಿ ಕೋರಿರುವ ಮಾಹಿತಿಗೆ ಸಂಬಂಧಿಸಿದಂತೆ ಹಂಚಿಕೊಂಡಿರುವ ಮಾಹಿತಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕ ವಿಧಾನಸಭೆ ವಿಧಾನ ಸಭೆ ಸಚಿವಾಲಯದಿಂದ ಈ ಮಾಹಿತಿ ಹಂಚಿಕೊಳ್ಳಲಾಗಿದೆ ಎನ್ನುವ ಬರಹವಿರುವ ಪೋಸ್ಟ್ ಸೋಷಿಯಲ್ ಜನ ಹಂಚಿಕೊಳ್ಳುತ್ತಿದ್ದಾರೆ.

ಮಾಹಿತಿ ಹಕ್ಕು ಅಧಿನಿಯಮ 2005ರಡಿ ಉಲ್ಲೇಖಿತ ಅರ್ಜಿಯಲ್ಲಿ ಕೋರಿರುವಂತ ಮಾಜಿ ಶಾಸಕರು ಮತ್ತು ದಿವಂಗತ ಮಾಜಿ ಶಾಸಕರ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನ ಮತ್ತು ವೈದ್ಯಕೀಯ ಭತ್ಯೆಯನ್ನು ಈ ಕೆಳಕಂಡ ಕೋಷ್ಠಕದಲ್ಲಿ ವಿವರಿಸಿರುವಂತೆ ಪಾವತಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ಮಾಜಿ ಶಾಸಕರು ಮತ್ತು ದಿವಂಗತ ಮಾಜಿ ಶಾಸಕರ & ಕುಟುಂಬದವರಿಗೆ ಇರುವ ಸೌಲಭ್ಯಗಳು
ನಿವೃತ್ತಿ ವೇತನ ಪ್ರತಿ ತಿಂಗಳು: 75.000.00
ಪ್ರತಿ ಹೆಚ್ಚುವರಿ ಅವಧಿಗೆ ಪ್ರತಿ ತಿಂಗಳು: 20.000.00
ವೈದ್ಯಕೀಯ ಭತ್ಯ ಪ್ರತಿ ತಿಂಗಳು: 20.000.00
ಕುಟುಂಬ ನಿವೃತ್ತಿ ವೇತನ ಪ್ರತಿ ತಿಂಗಳು: 37.500.00
ಪ್ರತಿ ಹೆಚ್ಚುವರಿ ಅವಧಿಗೆ ಪ್ರತಿ ತಿಂಗಳು: 10.000.00
ವೈದ್ಯಕೀಯ ಭತ್ಯೆ ಪ್ರತಿ ತಿಂಗಳು: 10.000.00
ಮಾಜಿ ಶಾಸಕರಿಗೆ ರೈಲ್ವೆ/ ವಿಮಾನ ಪ್ರಯಾಣ ಭತ್ಯೆ ವಾರ್ಷಿಕ: 2.00.000.00
ಮಾಜಿ ಶಾಸಕರಿಗೆ ವೈದ್ಯಕೀಯ ವೆಚ್ಚ ಮರುಪಾವತಿ ಸೌಲಭ್ಯವನ್ನು ಒದಗಿಸಲಾಗಿರುತ್ತದೆ.
ಇಷ್ಟೆಲ್ಲಾ ಯಾಕೆ ?
ಇನ್ನು ಒಮ್ಮೆ ಶಾಸಕರಾದವರಿಗೆ ಹಾಗೂ ಅವರ ಕುಟುಂಬದವರಿಗೆ ಇಷ್ಟೆಲ್ಲಾ ಹಣವನ್ನು ಯಾವ ಕಾರಣಕ್ಕೆ ಖರ್ಚು ಮಾಡಬೇಕು ಎನ್ನುವ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಬಡವರ ದುಡ್ಡನ್ನು ಅಥವಾ ತೆರಿಗೆದಾರರ ದುಡ್ಡನ್ನು ಈ ರೀತಿ ಖರ್ಚು ಮಾಡುವುದು ಎಷ್ಟು ಸರಿ ಎಂದು ಜನ ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. ಮಾಹಿತಿ ಹಕ್ಕು ಅಧಿನಿಯಮ / ಆರ್ಟಿಐನ ಅಡಿಯಲ್ಲಿ ಈ ಮಾಹಿತಿಯನ್ನು ಕೇಳಲಾಗಿದ್ದು. ಜನ ಈ ಬಗ್ಗೆ ಚರ್ಚೆ ಮಾಡುವುದಕ್ಕೆ ಶುರು ಮಾಡಿದ್ದಾರೆ.
ಅಲ್ಲದೇ ಗ್ಯಾರಂಟಿ ಯೋಜನೆಗೆ ಸರ್ಕಾರ ಹಣ ಹೊಂದಾಣಿಕೆ ಮಾಡುವುದಕ್ಕೆ ಸರ್ಕಸ್ ಮಾಡುತ್ತಿದೆ. ಈ ರೀತಿ ಇರುವಾಗ ಇಷ್ಟೊಂದು ಹಣವನ್ನು ಒಂದು ಬಾರಿ ಶಾಸಕರಾದವರಿಗೆ ಕೊಡುವುದಾದರೂ ಯಾಕೆ. ಈ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಹಲವರು ಆಗ್ರಹಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications