ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಆಯ್ಕೆ ಸಿಂಧುತ್ವದ ಅರ್ಜಿ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು ನ.10. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಚುನಾವಣೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯವೋ, ಇಲ್ಲವೇ? ಈ ಕುರಿತು ಹೈಕೋರ್ಟ್ ಬುಧವಾರ ವಾದ ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ.
ನಿರ್ಮಾಪಕರಾದ ಸಾ.ರಾ.ಗೋವಿಂದು, ಜಯಸಿಂಹ ಮುಸುರಿ, ಕೆ.ಎಂ.ವೀರೇಶ್ ಮತ್ತಿತರರು ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು.
ಮೊದಲಿಗೆ ಅರ್ಜಿ ವಿಚಾರಣೆಗೆ ಸ್ವೀಕಾರಾರ್ಹವೇ, ಇಲ್ಲವೇ ಎಂಬ ಬಗ್ಗೆ ಮೊದಲು ನಿರ್ಧರಿಸಲಾಗುವುದು, ಆನಂತರ ಅರ್ಜಿ ಸ್ವೀಕಾರಾರ್ಹವಾದರೆ ಬಳಿಕ ಮೂಲ ಕೇಸ್ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ಅಕ್ರಮಗಳ ಆರೋಪ: ಕಳೆದ ಮೇ 28ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಚುನಾವಣೆಗೆ ನಡೆದಿದೆ. ವಾಣಿಜ್ಯ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಾ.ಮಾ.ಹರೀಶ್ 781 ಮತಗಳನ್ನು ಪಡೆದ ಅಧ್ಯಕ್ಷ ರಾಗಿ ಆಯ್ಕೆಯಾಗಿದ್ದರು, ಅಭ್ಯರ್ಥಿ ಸಾ.ರಾ.ಗೋವಿಂದು 371 ಮತಗಳನ್ನು ಗಳಿಸಿದ್ದರು. ಇಡೀ ಚುನಾವಣೆಯನ್ನು ಕಾನೂನುಬಾಹಿರವಾಗಿ ನಡೆಸಲಾಗಿದೆ. ಜೊತೆಗೆ ಅಕ್ರಮಗಳನ್ನು ಎಸಗಲಾಗಿದೆ, ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ದೂರಿದರು.
ಅಲ್ಲದೆ, ಮತದಾರರ ಪಟ್ಟಿಯನ್ನು ಸರಿಯಾಗಿ ಪ್ರಕಟಿಸಿಲ್ಲ, ಮತದಾನಕ್ಕೆ ಬಂದವರ ಬಳಿ ನಿಯಮದಂತೆ ಸಹಿ ಹಾಕಿಸಿಕೊಳ್ಳಬೇಕು, ಅದರಲ್ಲೂಅಕ್ರಮ ಎಸೆಗಲಾಗಿದೆ. ಮತದಾನಕ್ಕೆ ಬಂದವರ ಗುರುತಿನ ಚೀಟಿಗಳನ್ನೇ ಪರಿಶೀಲಿಸಿಲ್ಲ. ಇಡೀ ಚುನಾವಣಾ ಪ್ರಕ್ರಿಯೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೈಲಾಗೆ ವಿರುದ್ಧವಾಗಿ ನಡೆಸಲಾಗಿದೆ ಎಂದು ಹೇಳಿದರು.
ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಆಗಸ್ಟ್ ನಲ್ಲಿ, ಅರ್ಜಿ ಇತ್ಯರ್ಥವಾಗುವವರೆಗೆ ಕೆಎಫ್ ಸಿಸಿ ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಮಧ್ಯಂತರ ಆದೇಶ ಹೊರಡಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications