ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸಲು ಕೆಲ ಕ್ರಮಗಳು ಇಲ್ಲಿವೆ
ಈ ಬಾರಿಯ ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸುವ ದಿಸೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ಸೇವಾ ಇಲಾಖೆಯು ದೀಪಾವಳಿ ಆಚರಿಸುವ ಸಾರ್ವಜನಿಕರಿಗೆ ಕೆಲ ಕ್ರಮಗಳನ್ನು ಸೂಚಿಸಿದೆ.
ಬೆಂಗಳೂರು, ಅಕ್ಟೋಬರ್. 27 : ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಅಲ್ಲಿ ಪಟಾಕಿ ಸ್ಪೋಟಗೊಂಡು ಅಷ್ಟು ಜನ ಸಾವನ್ನೊಪ್ಪಿದರು. ಇಲ್ಲಿ ಪಟಾಕಿ ಹಚ್ಚಲು ಹೋಗಿ ಕಣ್ಣು ಕಳೆದುಕೊಂಡರು. ಹೀಗೆ ಪಟಾಕಿಯಿಂದಾಗುವ ಅನಾಹುತಗಳನ್ನು ತಡೆಯಲು ಸಾರ್ವಜನಿಕರಿಗೆ ಕೆಲ ಉಪಯುಕ್ತ ಮಾಹಿತಿಗಳನ್ನು ನೀಡಲು ರಾಜ್ಯ ಅಗ್ನಿ ಶಾಮಕ ದಳ ಮುಂದಾಗಿದೆ.
ಈ ಬಾರಿಯ ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸುವ ದಿಸೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ಸೇವಾ ಇಲಾಖೆಯು ದೀಪಾವಳಿ ಆಚರಿಸುವ ಸಾರ್ವಜನಿಕರಿಗೆ ಕೆಲ ಕ್ರಮಗಳನ್ನು ಸೂಚಿಸಿದೆ. ಸುರಕ್ಷಿತ ಕ್ರಮಗಳು ಯಾವುವು ಎಂಬುವುದನ್ನು ತಿಳಿಯಲು ಮುಂದೆ ಓದಿ...

* ಮಕ್ಕಳಿಗೆ ದೊಡ್ಡವರ ಸಮ್ಮುಖದಲ್ಲಿ ಪಟಾಕಿ ತಿಳಿಸತಕ್ಕದ್ದು.
* ತೆರೆದ ಪ್ರದೇಶದಲ್ಲಿ ಪಟಾಕಿ ಹಚ್ಚುವುದು ಸುಕ್ಷಿತ, ಯಾವುದೇ ಸಂದರ್ಭದಲ್ಲಿ ಮನೆಯೊಳಗೆ ಪಟಾಕಿ ಹಚ್ಚಬಾರದು.
* ಆದಷ್ಟು ಮಟ್ಟಿಗೆ ಶರೀರಕ್ಕೆ ಹೊಂದಿಕ್ಕೊಳ್ಳುವಂತ ಬಟ್ಟೆಗಳನ್ನು ಧರಿಸತಕ್ಕದ್ದು, ದೊಗಲೆ ಬಟ್ಟೆ ಧರಿಸಬಾರದು.
* ಸುರ-ಸುರ ಬತ್ತಿ ಇತ್ಯಾದಿ ಪಟಾಕಿಗಳನ್ನು ಶರೀರದಿಂದ ಆದಷ್ಟು ದೂರ ಹಿಡಿಯಬೇಕು.
* ಪಟಾಕಿ ಹಚ್ಚುವಾಗ ಅದರ ಮೇಲೆ ಬಾಗಬಾರದು. ಆದಷ್ಟು ಮಟ್ಟಿಗೆ ಪಕ್ಕದಿಂದ ಹಚ್ಚತಕ್ಕದ್ದು.
* ಯಾವುದೇ ಪಾತ್ರೆಗಳಲ್ಲಿ ಒಳಗೆ ಪಟಾಕಿಗಳನ್ನು ಇಟ್ಟು ಹಚ್ಚಬಾರದು.
* ಪಟಾಕಿಗಳನ್ನು ಜೇಬಿನಲ್ಲಿ ಇಟ್ಟುಕೊಳ್ಳಬಾರದು.
* ಯಾವುದೇ ಸಂದರ್ಭದಲ್ಲಿ ಪಟಾಕಿಗಳನ್ನು ಬೆಂಕಿ ಅಥವಾ ಉಷ್ಣತೆ ಹೆಚ್ಚಿರುವ ಸ್ಥಳಗಳಲ್ಲಿ ಇಡಬಾರದು. ಹಾಗೂ ಪಟಾಕಿ ಪೊಟ್ಟಣಗಳನ್ನು ತೆರೆಯಬಾರದು.
* ಹಚ್ಚಲಾಗಿರುವ ಪಟಾಕಿ ಸಿಡಿಯದಿದ್ದರೆ ಅದನ್ನು ಪನಃ ಪರೀಕ್ಷಿಸಲು ಪ್ರಯತ್ನಿಸಬಾರದು.
* ರಾಕೆಟ್ ಪಟಾಕಿಗಳನ್ನು ಬಳಸುವುದನ್ನು ಪೂರ್ಣವಾಗಿ ತಪ್ಪಿಸುವುದು ತಪ್ಪಿಸುವುದು ಉತ್ತಮ.
* ಪಟಾಕಿ ಹಚ್ಚುವಾಗ ಪಕ್ಕದಲ್ಲಿ ನೀರು ಇಟ್ಟುಕೊಳ್ಳುವುದು ಸುರಕ್ಷಿತ. ಅಕಸ್ಮಿಕವಾಗಿ ಸುಟ್ಟ ಗಾಯಗಳಾದರೆ ಕೂಡಲೇ ತಣ್ಣಿರನ್ನು ಸುರಿಯತಕ್ಕದ್ದು.
* ಪಟಾಕಿ ಹಚ್ಚುವಾಗ ಮಕ್ಕಳು, ವಯಸ್ಸಾದವರು, ಖಾಯಿಲೆ ಇರುವವರು ಹಾಗೂ ಪ್ರಾಣಿಗಳನ್ನು ಗಮನಿಸಿ, ಅವರಿಗೆ ಆಗುವ ತೊಂದರೆಗಳನ್ನು ತಪ್ಪಿಸಿ. ಸಾಧ್ಯವಾದಷ್ಟು ಹೆಚ್ಚು ಶಬ್ದ ಬರುವ ಪಟಾಕಿಗಳನ್ನು ಆಸ್ಪತ್ರೆ ಮತ್ತು ಇತರೆ ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿಗಳನ್ನು ಹಚ್ಚುವುದನ್ನು ತಪ್ಪಿಸಿ.
2016 ನೇ ಸಾಲಿನ ದೀಪಾವಳಿ ಹಬ್ಬವನ್ನು ಆಚರಿಸಲು @KarFireDept ಯಿಂದ ಸುರಕ್ಷಿತ ಕ್ರಮಗಳು @DGP_FIRE @MNReddi_IPS @DIGP_Fire @Director_FIRE @BlrCityPolice pic.twitter.com/WTLvYBdhwH
— Karnataka Fire Dept (@KarFireDept) October 27, 2016
ಈ ರೀತಿ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿಗಳನ್ನು ನೀಡುವುದರ ಜತೆಗೆ ಸುರಕ್ಷತೆ ಕ್ರಮಗಳನ್ನು ನೀಡುತ್ತಿರುವ ಈ ಇಲಾಖೆಗೆ ನಮ್ಮ ನಿಮ್ಮೆಲ್ಲರ ಪರವಾಗಿ ಒಂದು ಸೆಲ್ಯೂಟ್....ಈ ಇಲಾಖೆ ತಿಳಿಸಿರುವ ಸುರಕ್ಷತೆ ಕ್ರಮಗಳನ್ನು ಎಲ್ಲರೂ ಪಾಲಿಸಿ ಆಗುವ ಅನಾಹುತಗಳನ್ನು ದೂರವಿಡೋಣ...
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications