ಸರಕಾರಕ್ಕೆ ನಾಡಧ್ವಜ ಸಮಿತಿಯಿಂದ ವರದಿ ಸಲ್ಲಿಕೆ, ಅಧಿವೇಶನದಲ್ಲಿ ಚರ್ಚೆ
ಬೆಂಗಳೂರು, ಫೆಬ್ರವರಿ 6: ನಾಡಧ್ವಜ ಸಮಿತಿ ಇಂದು ಸರಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ಪ್ರತ್ಯೇಕ ಕರ್ನಾಟಕ ನಾಡಧ್ವಜಕ್ಕೆ ಸಂಬಂಧಿಸಿದಂತೆ ಸಮಿತಿಯು ವರದಿ ಸಲ್ಲಿಸಿದ್ದು ವಿಧಾನಸಭೆಯಲ್ಲಿ ಮುಂದಿನ ವಾರ ಈ ಸಂಬಂಧ ಚರ್ಚೆ ನಡೆಯಲಿದೆ.
ಕಳೆದ ವರ್ಷದ ಜೂನ್ ನಲ್ಲಿ ಕರ್ನಾಟಕದ ಪ್ರತ್ಯೇಕ ನಾಡಧ್ವಜ ವಿಚಾರ ರಾಷ್ಟ್ರದಾದ್ಯಂತ ವಿವಾದಕ್ಕೆ ಕಾರಣವಾಗಿತ್ತು. ಈ ಸಂದರ್ಭ ಪ್ರತ್ಯೇಕ ನಾಡಧ್ವಜದ ವಿಚಾರಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಸರಕಾರ 9 ಸದಸ್ಯರ ಸಮಿತಿ ರಚಿಸಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಈ ಸಮಿತಿ ರಚನೆ ಮಾಡಲಾಗಿತ್ತು.
ಕೆಂಪು, ಹಳದಿ ವರ್ಣದ ಧ್ವಜ ಈಗಾಗಲೇ 'ಕನ್ನಡ ಧ್ವಜ'ವಾಗಿ ಅನಧಿಕೃತವಾಗಿ ಬಳಕೆಯಲ್ಲಿದೆ. ಆದರೆ ಈಗ ರಾಜ್ಯಕ್ಕೆ ಪ್ರತ್ಯೇಕ ಅಧಿಕೃತ ಧ್ವಜ ರೂಪಿಸಿ ಕಾನೂನಿನ ಮಾನ್ಯತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿ, ಈ ಸಂಬಂಧ ವರದಿ ನೀಡಲು ಸಮಿತಿ ರಚನೆ ಮಾಡಲಾಗಿತ್ತು.

ನಂತರ ಸಮಿತಿಯು ಸರಣಿ ಸಭೆಗಳನ್ನು ನಡೆಸಿ ಬಳಿಕ ನಾಡಧ್ವಜದ ವಿನ್ಯಾಸವನ್ನು ಅಂತಿಮಗೊಳಿಸಿತ್ತು. ಇದೀಗ ಈ ಸಂಬಂಧ ಸರಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಧ್ವಜದ ವಿನ್ಯಾಸ ಮತ್ತು ಧ್ವಜಕ್ಕೆ ಕಾನೂನಿನ ಮಾನ್ಯತೆ ನೀಡುವ ಕುರಿತು ವರದಿಯಲ್ಲಿ ಉಲ್ಲೇಖಗಳಿವೆ.
ಈ ಸಮಿತಿಯ ವರದಿಯ ಅನ್ವಯ ಸರ್ಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart











Click it and Unblock the Notifications