ಪ್ರವಾಹದ ನಷ್ಟ; ಸದನದಲ್ಲಿ ಅಂಕಿ ಅಂಶ ಬಿಚ್ಚಿಟ್ಟ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 11 : "ರಾಜ್ಯವನ್ನು ಭೀಕರ ಪ್ರವಾಹ ಕಾಡುತ್ತಿದೆ. ಪ್ರವಾಹ ಪರಿಸ್ಥಿತಿಯ ಬಗ್ಗೆ ಕನಿಷ್ಟ ಮೂರು ದಿನ ಚರ್ಚೆ ಮಾಡದೆ ಇಡೀ ಅಧಿವೇಶನವನ್ನು ಮೂರೇ ದಿನಕ್ಕೆ ಸೀಮಿತಗೊಳಿಸುವುದನ್ನು ನಾನು ಖಂಡಿಸುತ್ತೇನೆ. ಅಧಿವೇಶನವನ್ನು ಕನಿಷ್ಠ 6 ದಿನ ನಡೆಸಿ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆ ಅಧಿವೇಶನದ 2ನೇ ದಿನವಾದ ಶುಕ್ರವಾರವೂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದರು. ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಅಂಕಿ ಅಂಶಗಳ ಸಮೇತ ವಿವರವಾಗಿ ಮಾತನಾಡಿದರು.
ಕಲಾಪದಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಅರಣ್ಯ ಭೂಮಿಯಲ್ಲಿರುವ ಕೆಲವು ಹಳ್ಳಿಗಳು ಈ ಬಾರಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿವೆ. ಈಗ ಅರಣ್ಯ ಇಲಾಖೆಯವರು ಶೆಡ್ಗಳನ್ನು ಹಾಕಲು ಹಾಗೂ ಮನೆ ಕಟ್ಟಿಕೊಳ್ಳಲು ಅಲ್ಲಿನ ಜನರಿಗೆ ಅನುಮತಿ ನೀಡುತ್ತಿಲ್ಲ. ಹಾಗಾಗಿ ಸರ್ಕಾರ ಅರಣ್ಯ ಇಲಾಖೆಯ ಬಳಿ ಅರಣ್ಯ ಭೂಮಿಯನ್ನು ಪಡೆದು ಅದರ ಬದಲಾಗಿ ರೆವಿನ್ಯೂ ಭೂಮಿಯನ್ನು ನೀಡುವ ಒಪ್ಪಂದ ಮಾಡಿಕೊಳ್ಳಲಿ" ಎಂದರು.

ಕೇಂದ್ರದ ಪರಿಹಾರ
ಸಿದ್ದರಾಮಯ್ಯ, "ಕೇಂದ್ರದಿಂದ ಕೇಳುತ್ತಿರುವುದು ಭಿಕ್ಷೆ ಅಲ್ಲ. ರೂ.35,160 ಕೋಟಿ ನಷ್ಟಕ್ಕೆ NDRF ನಿಯಮ ಪ್ರಕಾರವೇ ರೂ.9891ಕೋಟಿ ಮಧ್ಯಂತರ ಪರಿಹಾರ ಕೊಡಬೇಕಿತ್ತು, ಕೊಟ್ಟಿರುವುದು ರೂ.1200 ಕೋಟಿ. ಇದನ್ನೇ ನರೇಂದ್ರ ಮೋದಿ ಅವರನ್ನು ಕೇಳಿದರೆ ಆಕಾಶ ನೋಡಿ ಉಗುಳಿದರೆ ನಿಮ್ಮ ಮುಖಕ್ಕೆ ಬೀಳುತ್ತೆ ಎಂದು ಹೇಳ್ತೀರಿ" ಎಂದು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಪ್ರತ್ಯೇಕ ಪರಿಹಾರ ಕೊಡಬೇಕು
ಸಿದ್ದರಾಮಯ್ಯ, "ಪ್ರವಾಹದಿಂದ 25%ಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ ರೂ.5 ಲಕ್ಷ, ಪೂರ್ಣ ನಾಶವಾದ ಮನೆಗಳಿಗೆ ರೂ.10 ಲಕ್ಷ ಪರಿಹಾರ ನೀಡಬೇಕು. ಪೂರ್ಣ ಮತ್ತು ಭಾಗಶ: ಮುಳುಗಡೆಯಾಗಿರುವ 1000 ಹಳ್ಳಿಗಳನ್ನು ಸ್ಥಳಾಂತರಿಬೇಕು. ಕೂಡು ಕುಟುಂಬದಲ್ಲಿರುವ ಅಣ್ಣ-ತಮ್ಮಂದಿರ ಕುಟುಂಬಗಳಿಗೆ ಪ್ರತ್ಯೇಕ ಪರಿಹಾರ ಕೊಡ್ಬೇಕು" ಎಂದು ಸರ್ಕಾರವನ್ನು ಒತ್ತಾಯಿಸಿದರು.

ಬಿಜೆಪಿ ಜನಪರ ಕಾಳಜಿಯ ಟೀಕೆ
"ಆಗಸ್ಟ್ ಮೊದಲ ವಾರದಲ್ಲಿ ನೆರೆ ಶುರುವಾಗಿತ್ತು. ರೂ. 35,160 ಕೋಟಿ ನಷ್ಟ ಎಂದು ಕೇಂದ್ರಕ್ಕೆ ವರದಿ ಸಲ್ಲಿಸಿದ್ದು ಸೆ.9ರಂದು. ರೂ. 52,000 ಕೋಟಿ ನಷ್ಟವಾಗಿದೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ.2 ತಿಂಗಳ ನಂತರ ಕೇಂದ್ರ ಸರ್ಕಾರ ರೂ. 1,200 ಕೋಟಿ ಪರಿಹಾರ ನೀಡಿದೆ. ಇದು ಬಿಜೆಪಿ ಸರ್ಕಾರದ ಜನಪರ ಕಾಳಜಿಯೇ" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಬೆಳೆಗಳಿಗೆ ಪರಿಹಾರ ನೀಡಿ
ಸಿದ್ದರಾಮಯ್ಯ, "ಕಬ್ಬು ಬೆಳೆ ನಷ್ಟವಾದವರಿಗೆ ಎನ್ಡಿಆರ್ಎಫ್ ನಿಯಮದನ್ವಯ ಹೆಕ್ಟೇರ್ಗೆ ರೂ.13,500 ಪರಿಹಾರ ನೀಡಬೇಕೆಂದಿದೆ. ಆದರೆ, 1 ಹೆಕ್ಟೇರ್ ಕಬ್ಬು ಬೆಳೆ ಬಿತ್ತನೆಗೆ ಕನಿಷ್ಠ 1 ಲಕ್ಷ ರೂ. ವೆಚ್ಚ ತಗುಲುವುದರಿಂದ ಹೆಕ್ಟೇರ್ಗೆ 1 ಲಕ್ಷದಂತೆ ಪರಿಹಾರ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ. ಇದೇ ರೀತಿ ಎಲ್ಲ ಬೆಳೆಗಳಿಗೂ ಸೂಕ್ತ ಪರಿಹಾರ ನೀಡಲಿ" ಎಂದರು.

ಖಜಾನೆ ಲೂಟಿ ಎಂದರೇನು?
"ಖಜಾನೆ ಲೂಟಿ ಆಗಿದೆ ಎಂದ್ರೇನು? ಯಾರೋ ಚೀಲ ತಕ್ಕೊಂಡು ಬಂದು ಹಣ ತುಂಬಿಸ್ಕೊಂಡು ಹೋಗೋದಾ?, ಎಂತಹ ಮಾತು?, ಆರ್ಥಿಕವಾಗಿ ಸದೃಡವಾಗಿರುವ ದೇಶದ ಕೆಲವೇ ರಾಜ್ಯಗಳಲ್ಲಿ ಕರ್ನಾಟಕ ಒಂದು. ಈ ಬಾರಿಯ ಬಜೆಟ್ ಗಾತ್ರ 2.30 ಲಕ್ಷ ಕೋಟಿ. ಹಣದ ಕೊರತೆ ಖಂಡಿತ ಇಲ್ಲ, ಜನರಿಗೆ ಸ್ಪಂದಿಸುವ ಮನಸ್ಸು ಸರ್ಕಾರಕ್ಕಿಲ್ಲ" ಎಂದು ಸಿದ್ದರಾಮಯ್ಯ ಆರೋಪಿಸಿದರು.
-
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
ಅಸ್ತಿತ್ವಕ್ಕಾಗಿ ಬಿಜೆಪಿ ಸೇರ್ಪಡೆ: ವಿರೋಧ ಪಕ್ಷಗಳ ಮೇಲೆ ಸಿದ್ದರಾಮಯ್ಯರ ಕಿಡಿ -
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ












Click it and Unblock the Notifications