"ಕರ್ನಾಟಕದಲ್ಲಿ ಪ್ರವಾಹ: ಮೋದಿ 1000 ಕೋಟಿ ರೂ ಬಿಡುಗಡೆ ಮಾಡಲಿ"
ಬೆಂಗಳೂರು, ಆಗಸ್ಟ್ 08: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಕೃಷ್ಣ ನದಿಯ ನೆರೆ ಹಾವಳಿಯಿಂದ ಉತ್ತರ ಕರ್ನಾಟಕದ ಜಿಲ್ಲೆಗಳು ಸೇರಿ ಇದುವರೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ಗಂಭೀರ ಆತಂಕದ ಪರಿಸ್ಥಿತಿ ಉಂಟಾಗಿದೆ. ಸುಮಾರು 36 ತಾಲೂಕುಗಳ 240 ಕ್ಕೂ ಅಧಿಕ ಗ್ರಾಮಗಳು ಜಲಾವೃತವಾಗಿವೆ. ಮಳೆಯ ಆರ್ಭಟ ಮುಂದುವರೆಯುವ ಮುನ್ಸೂಚನೆ ಸಿಕ್ಕಿದ್ದು, ಪ್ರವಾಹವು ಮತ್ತಷ್ಟು ಹೆಚ್ಚಾಗುವ ಸಂಭವ ವಿರುವುದರಿಂದ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆಯಿದೆ. ಆದ್ದರಿಂದ, ತಕ್ಷಣ ಕೇಂದ್ರ ಸರಕಾರ ಕೂಡಲೇ ಒಂದು ಸಾವಿರ ಕೊಟಿ ರೂ.ಗಳ ನೆರವನ್ನು ನೀಡಬೇಕೆಂದು ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಪ್ರಧಾನ ಮಂತ್ರಿಗಳನ್ನು ಒತ್ತಾಯಿಸುತ್ತದೆ.
ಪ್ರಾಥಮಿಕ ಮಾಹಿತಿಯಂತೆ ಲಕ್ಷಾಂತರ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ನದಿ ಪಾತ್ರಗಳಲ್ಲಿನ ಮತ್ತು ಇತರೆಡೆಯ 2.50 ಲಕ್ಷಕ್ಕೂ ಅಧಿಕ ಎಕರೆ ಪ್ರದೇಶದ ಬೆಳೆಯು ಹಾನಿಯಾಗಿದೆ. ನಿರಾಶ್ರಿತರ ಸಂಖ್ಯೆಯು ಬೆಳೆಯುತ್ತಲೇ ಇದೆ. ಇದುವರೆಗೆ ಸುಮಾರು 11 ಕ್ಕೂ ಹೆಚ್ಚು ನಾಗರೀಕರು ಸಾವಿಗೀಡಾಗಿದ್ದಾರೆ. ನೂರಾರು ಜಾನುವಾರುಗಳು ಪ್ರವಾಹಕ್ಕೆ ಸಿಲುಕಿ ಕಾಣೆಯಾಗಿವೆ.
ಲಕ್ಷಾಂತರ ನಿರಾಶ್ರಿತರಿಗೆ ಎಲ್ಲೆಡೆ ನೆರವು ಕೇಂದ್ರಗಳನ್ನು ತೆರೆಯಬೇಕಿದೆ. ಸಾವಿರಾರು ವಾಸದ ಮನೆಗಳು, ನೂರಾರು ಸರಕಾರಿ ಕಟ್ಟಡಗಳು, ಸಾರ್ವಜನಿಕ ರಸ್ತೆ, ನೂರಾರು ಸೇತುವೆಗಳು ಹಾನಿಗೀಡಾಗಿವೆ.

ಪ್ರವಾಹಕ್ಕೆ ಸಿಲುಕಿದ ಸಾವಿರಾರು ಜನತೆ ಮತ್ತು ಜಾನುವಾರುಗಳನ್ನು ರಕ್ಷಿಸಿದ ರಕ್ಷಣ ಸಿಬ್ಬಂದಿ ಮತ್ತು ನಾಗರೀಕರನ್ನು ಸಿಪಿಐ(ಎಂ) ಅಭಿನಂದಿಸಿದೆ. ರಾಜ್ಯದ ಜನತೆ ಹಾನಿಗೀಡಾದ ಕುಟುಂಬಗಳ ರಕ್ಷಣೆಗೆ ಮುಂದಾಗುವಂತೆ ಕರೆ ನೀಡಿದೆ.
ಮುಖ್ಯಮಂತ್ರಿಗಳು ಸಮರ್ಪಕ ಕಾರ್ಯ ನಿರ್ವಹಣೆಗೆ ಕ್ರಮವಹಿಸಲಿ:
ರಾಜ್ಯ ಸರ್ಕಾರದ ಇದುವರೆಗಿನ ಪರಿಹಾರದ ಕ್ರಮ ಅಸಮರ್ಪಕವಾಗಿದೆ. ತೆರೆದಿರುವ ಗಂಜಿ ಕೇಂದ್ರಗಳು ಸಾಲದಾಗಿವೆ. ಜಾನುವಾರುಗಳಿಗೆ ಮೇವು ಒದಗಿಸಬೇಕು ಮತ್ತು ನೆರೆ ಹಾವಳಿಗೀಡಾದ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಬೇಕು. ಅದೇರೀತಿ ರಾಜ್ಯದಲ್ಲದ ಹಾನಿಯನ್ನು ಅಂದಾಜು ಮಾಡಲು ತುರ್ತು ಕ್ರಮ ವಹಿಸಬೇಕು ಮತ್ತು ಜಿಲ್ಲೆಗಳಿಗೆ ಕೂಡಲೇ ಅಗತ್ಯ ಹಣಕಾಸಿನ ನೆರವನ್ನು ಒದಗಿಸುವಂತೆ ಹಾಗೂ ಪ್ರವಾಹ ನಿರ್ವಹಣೆಯ ಕೆಲಸವನ್ನು ಆಧ್ಯತೆಯ ಮೇರೆಗೆ ನಿರ್ವಹಿಸುವಂತೆ ಅಧಿಕಾರಿ ವರ್ಗದ ಮೇಲೆ ರಾಜ್ಯ ಸರ್ಕಾರ ಒತ್ತಡ ಹಾಕಬೇಕೆಂದು ಸಿಪಿಐ(ಎಂ) ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications