ನೆರೆ ಪೀಡಿತ ರಾಯಚೂರು, ಬಾಗಲಕೋಟೆ ತಲುಪಿದ ಇನ್ಫಿ ನೆರವು
Recommended Video
ಬೆಂಗಳೂರು, ಆಗಸ್ಟ್ 08: ಇನ್ಫೋಸಿಸ್ನ ಅಂಗಸಂಸ್ಥೆಯಾಗಿರುವ ಸ್ವಯಂ ಸೇವಾ ಸಂಸ್ಥೆಯಾದ ಇನ್ಫೋಸಿಸ್ ಫೌಂಡೇಶನ್ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಗಳಿಗೆ 10 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದೆ. ಇದಾದ ಬೆನ್ನಲ್ಲೇ ಪರಿಹಾರ ಕಾರ್ಯಕ್ಕೆ ತ್ವರಿತಗತಿ ಚಾಲನೆಯನ್ನು ಸ್ಥಾಪಕಿ ಸುಧಾಮೂರ್ತಿ ನೀಡಿದ್ದಾರೆ.
ಈಗಾಗಲೇ ರಾಯಚೂರು, ಬಾಗಲಕೋಟೆ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಫೌಂಡೇಶನ್ ಪರಿಹಾರ ಕಾರ್ಯಗಳನ್ನು ಆರಂಭಿಸಿದ್ದು, ಉಳಿದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತನ್ನ ಜಾಲಗಳು ಮತ್ತು ಸ್ವಯಂಸೇವಕರೊಂದಿಗೆ ಹಂತಹಂತವಾಗಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಿದೆ. ಕುಡಿಯುವ ನೀರು, ಆಹಾರ ಉತ್ಪನ್ನಗಳು, ಬಟ್ಟೆ ಮತ್ತು ವೈದ್ಯಕೀಯ ಕಿಟ್ಗಳು ಸೇರಿದಂತೆ ಪ್ರವಾಹಪೀಡಿತ ಪ್ರದೇಶಗಳ ಜನರ ಅಗತ್ಯ ವಸ್ತುಗಳನ್ನು ವಿತರಣೆ ಕಾರ್ಯವನ್ನು ಫೌಂಡೇಶನ್ ಈಗಾಗಲೇ ಆರಂಭಿಸಿದೆ.
ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಅನಾಹುತಗಳು ಸಂಭವಿಸಿದ್ದು, ರಸ್ತೆ, ರೈಲು ಸಂಪರ್ಕಕ್ಕೆ ಅಡಚಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಫೌಂಡೇಶನ್ ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿಗಳನ್ನು ಕಲೆ ಹಾಕುತ್ತಿದ್ದು, ಅಗತ್ಯ ಇರುವೆಡೆ ಪರಿಹಾರ ಕಾರ್ಯಾಚರಣೆಯನ್ನು ವಿಸ್ತರಿಸಲಿದೆ.

ಇನ್ಫೋಸಿಸ್ ಫೌಂಡೇಶನ್ ಪ್ರಕೃತಿ ವಿಕೋಪಗಳಿಗೆ ತುತ್ತಾದ ಜನರಿಗೆ ನೆರವಾಗುತ್ತಾ ಬಂದಿದೆ. ಇತ್ತೀಚೆಗೆ ಒಡಿಶಾದಲ್ಲಿ ಸೈಕ್ಲೋನ್ನಿಂದ ಉಂಟಾದ ಅನಾಹುತಗಳಿಗೆ ತುತ್ತಾದ ಜನರಿಗೆ ಫೌಂಡೇಶನ್ ನೆರವಾಗಿತ್ತು. ಇದಲ್ಲದೇ, ಕಳೆದ ವರ್ಷ ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆ, ಅಸ್ಸಾಂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ನೆರವಿನ ಹಸ್ತ ಚಾಚಿತ್ತು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications