ಆಪರೇಷನ್ ಕಮಲಕ್ಕೆ ಯಡಿಯೂರಪ್ಪರಿಂದಲೇ ಯತ್ನ!
ಬೆಂಗಳೂರು, ಮೇ 19: ಅಪರೇಷನ್ ಕಮಲ ಬಳಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರನ್ನು ಬಿಜೆಪಿಯವರು ಸೆಳೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಎಸ್ ಉಗ್ರಪ್ಪ ಅವರು ಸರಣಿ ಆಡಿಯೋ ಕ್ಲಿಪ್ಪಿಂಗ್ ಗಳನ್ನು ಹೊರಹಾಕುತ್ತಿದ್ದಾರೆ.
ಸದನದಲ್ಲಿ ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆಗೆ ಸಿದ್ದರಾಗುತ್ತಿರುವ ಹೊತ್ತಿಗೆ ಯಡಿಯೂರಪ್ಪ ಅವರ ವಿರುದ್ಧ ದೊಡ್ಡ ಬಾಂಬ್ ಹಾಕಲಾಗಿದೆ. ಹಿರೇಕೆರೂರಿನ ಕಾಂಗ್ರೆಸ್ ಶಾಸಕ, ನಟ ಬಿ.ಸಿ ಪಾಟೀಲ್ ಅವರನ್ನು ಬಿಜೆಪಿಗೆ ಸೆಳೆಯಲು ಖುದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೇ ಯತ್ನಿಸಿದರು ಎಂದು ಆರೋಪಿಸಲಾಗಿದೆ.
ಬಿಗ್ ಬ್ರೇಕಿಂಗ್ ಸುದ್ದಿ : ರಾಜೀನಾಮೆಗೆ ಯಡಿಯೂರಪ್ಪ ಸಿದ್ಧತೆ?
ಇದಕ್ಕೆ ಸಾಕ್ಷಿಯೆಂಬಂತೆ ಆಡಿಯೋ ಕ್ಲಿಪ್ಪಿಂಗ್ ಬಿಡುಗಡೆ ಮಾಡಲಾಗಿದೆ.ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಗೆ ಸಚಿವ ಸ್ಥಾನದ ಆಮಿಷ ಒಡ್ಡಿ ಯಡಿಯೂರಪ್ಪ ಸಿಕ್ಕಿ ಬಿದ್ದಿದ್ದಾರೆ. ಅದರ ಆಡಿಯೋ ಕ್ಲಿಪ್ ಮತ್ತು ವಿವರ ಇಲ್ಲಿದೆ.

ಬಿಎಸ್ ವೈ ಆಪ್ತ (ಬಿ.ಸಿ. ಪಾಟೀಲರಿಗೆ): ಸಾರ್ ಒಂದುನಿಮಿಷ ಸಾಹೇಬರು ಮಾತನಾಡುತ್ತಾರೆ
ಬಿಎಸ್ ವೈ: ಹಲೋ...ಹಲೋ..
ಬಿ.ಸಿ.ಪಾಟೀಲ್: ಅಣ್ಣಾ ಕಂಗ್ರಾಜುಲೇಶನ್ ... ಹೇಳಿ... ನಮಸ್ಕಾರ...
ಬಿಎಸ್ ವೈ: ಹಲೋ... ಹಲೋ...ಎಲ್ಲಿದ್ದೀಯಪ್ಪಾ...?
ಬಿ.ಸಿ. ಪಾಟೀಲ್: ಅಣ್ಣಾ ನಾವು ಕೊಚ್ಚಿನ್ ಗೆ ಹೋಗುತ್ತಿದ್ದೇವೆ.... ಕೊಚ್ಚಿನ್ ಗೆ ಹೋಗುತ್ತಿದ್ದೇವೆ...ಬಸ್ ನಲ್ಲಿದ್ದೇನೆ.
ಬಿಎಸ್ ವೈ: ಹೋಗಬಾರದಿತ್ತು..! ಬಾರಯ್ಯ ನೀನು...ನಿನಗೇನು ಹೆಲ್ಪ್ ಬೇಕೋ ಮಾಡುತ್ತೇನೆ! ಮಂತ್ರಿಯಾಗುವಂತೆ ಬಾ... ನಿನಗೇನು ಬೇಕೋ ಅದನ್ನು ಮಾಡುತ್ತೇನೆ.
ಬಿ.ಸಿ. ಪಾಟೀಲ್: ಆಯಿತು ಅಣ್ಣಾ...ನೀವು ಮೊದಲೇ ಒಂದೂ ಚೂರು ಹೇಳಿದ್ದರೇ...
ಬಿ.ಎಸ್. ವೈ: ಟೈಮ್ ಕರೆಕ್ಟಾಗಿ ತಾನೇ ಹೇಳಬೇಕು!
ಬಿ.ಸಿ. ಪಾಟೀಲ್: ಹೌದು...
ಬಿ.ಎಸ್. ವೈ: ನೀನು ಹೋಗಬೇಡ... ಬಂದು ಬಿಡು...
ಬಿ.ಸಿ. ಪಾಟೀಲ್: ಬಸ್ ನಲ್ಲಿ ಇದೀವಿ ಈಗ..
ಬಿ.ಎಸ್. ವೈ: ಮನೆವ್ರು... ಏನಾದರು ಒಂದು ಕಾರಣ ಹೇಳಿಕೊಂಡು ವಾಪಾಸ್ ಬಾ!
ಬಿ.ಸಿ. ಪಾಟೀಲ್: ನನ್ನ ಪೊಸಿಶನ್ ಏನ್ ಅಂತಾ?
ಬಿ.ಎಸ್. ವೈ: ಯು ವಿಲ್ ಬಿಕಂ ದ ಮಿನಿಸ್ಟರ್ ದಟ್ಸ್ ಆಲ್!
ಬಿ.ಸಿ. ಪಾಟೀಲ್: ಓ.ಕೆ. ಓ.ಕೆ. ಅಣ್ಣಾ... ನನ್ನ ಜತೆ ಇಬ್ಬರು ಮೂವರು ಇದ್ದಾರೆ!
ಬಿ.ಎಸ್. ವೈ: ನನ್ನ ಮೇಲೆ ವಿಶ್ವಾಸವಿದೆ ತಾನೇ...? ಕರೆದು ಕೊಂಡು ಬಾ...!
ಬಿ.ಸಿ. ಪಾಟೀಲ್ : ಖಂಡಿತ... ಖಂಡಿತ...!
ಬಿ.ಎಸ್. ವೈ: ಹಾಗಾದರೆ ಹೋಗ ಕೂಡದು ನೀನು ವಾಪಾಸ್ ಬಾ...!
ಬಿ.ಸಿ. ಪಾಟೀಲ್ : ಆಯ್ತಣ್ಣಾ...ಆಯ್ತಣ್ಣಾ...!
ಬಿ.ಎಸ್. ವೈ: ಒಂದು ಸಾರ್ತಿ ನೀನು ಕೊಚ್ಚಿನ್ ಗೆ ಹೋದರೆ ನೀನು ಸಿಗಲ್ಲ. ಅದು ಸಿಗದೇ ಇರುವ ವಿಷಯ
ಬಿ.ಸಿ. ಪಾಟೀಲ್: ಆಯ್ತಣ್ಣಾ... ಆಯ್ತಣ್ಣಾ...
ಬಿ.ಎಸ್. ವೈ: ಈಗೇನು ಮಾಡ್ತೀಯಾ... ಹೇಳು!
ಬಿ.ಸಿ. ಪಾಟೀಲ್: ತಾವು ಈಗ ಹೇಳಿದ್ದೀರಿ... ನಾನು ಐದು ನಿಮಿಷದಲ್ಲಿ ಹೇಳ್ತೀನೀ ಅಣ್ಣಾ...!
ಬಿ.ಎಸ್. ವೈ: ಶ್ರೀರಾಮುಲುಗೆ ಫೋನ್ ಮಾಡಿ ಹೇಳು...!
ಬಿ.ಸಿ. ಪಾಟೀಲ್: ಆಯ್ತಣ್ಣಾ... ಆಯ್ತಣ್ಣಾ....!!
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications