Get Updates
Get notified of breaking news, exclusive insights, and must-see stories!

ಕರ್ನಾಟಕ ರಣಾಂಗಣ : ವಿಶ್ವಾಸಮತವನ್ನು ಹೇಗೆ ನಡೆಸಲಾಗುತ್ತದೆ?

ಬೆಂಗಳೂರು, ಮೇ 18 : ಕರ್ನಾಟಕ ವಿಧಾನಸಭೆಯಲ್ಲಿ ಶನಿವಾರ, ಮೇ 19ರಂದು ಗೌಪ್ಯ ಮತದಾನಕ್ಕೆ ಅವಕಾಶ ಕೊಡಬೇಕೆಂದು ಬಿಜೆಪಿ ಮಾಡಿದ ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿರುವುದರಿಂದ ಭಾರೀ ಕೋಲಾಹಲವುಂಟಾಗಿ ವಿವಾದವೆಬ್ಬಿಸುವ ಸಾಧ್ಯತೆಯಿದೆ.

ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಧ್ವನಿಮತದ ಮೂಲಕ ಮತದಾನ ಮಾಡುವ ಸಂದರ್ಭದಲ್ಲಿ ವಿವಾದ ಸೃಷ್ಟಿಯಾಗಿತ್ತು. ದೇವೇಂದ್ರ ಫಡ್ನವೀಸ್ ಅವರ ನೇತೃತ್ವದ ಬಿಜೆಪಿ ಸರಕಾರ ವಿಶ್ವಾಸಮತ ಗೆದ್ದಿತ್ತು. ಕೆಲ ಕಾಂಗ್ರೆಸ್ ಶಾಸಕರು ರಾಜ್ಯಪಾಲರ ಮೇಲೆ ಕೈಕೂಡ ಮಾಡಿದ್ದರು.

ವಿಶ್ವಾಸಮತ ಹೇಗೆ ನಡೆಯುತ್ತದೆ?

ಸಾಮಾನ್ಯವಾಗಿ ಧ್ವನಿಮತದ ಮೂಲಕ ವಿಶ್ವಾಸಮತ ನಡೆಯುತ್ತದೆ. ಧ್ವನಿಮತದ ಮೂಲಕ ನಡೆದರೆ ವಿಶ್ವಾಸಮತದ ಪರವಾಗಿರುವವರು 'ಹೌದು' ಅಥವಾ 'ಇಲ್ಲ' ಎನ್ನುವ ಮೂಲಕ ಮತ ಚಲಾಯಿಸುತ್ತಾರೆ. ಕೈ ಎತ್ತುವ ಅಥವಾ ಚೀಟಿಯ ಮೂಲಕ ಅಥವಾ ಎಲೆಕ್ಟ್ರಾನಿಕ್ ಎಂತ್ರದ ಮೂಲಕವೂ ಮತ ಚಲಾವಣೆ ನಡೆಯುತ್ತದೆ.

Karnataka floor test : How the events will unfold

ವಿಭಾಗೀಕರಣ ಎಂದರೇನು?

ಧ್ವನಿಮತದ ಮೂಲಕ ಬಂದ ಮತಎಣಿಕೆಯ ವಿರುದ್ಧ ಯಾವ ಪಕ್ಷವಾದರೂ ಧ್ವನಿಯೆತ್ತಿದರೆ, ಬಿದ್ದ ಮತಗಳ ಸರಿಯಾದ ಲೆಕ್ಕ ತೆಗೆದುಕೊಳ್ಳಲು ವಿಭಾಗೀಕರಣ ಮಾಡಲಾಗುತ್ತದೆ. ಆಗ, ಸ್ಪಷ್ಟ ಬಹುಮತವನ್ನು ಸಾಬೀತುಪಡಿಸಬೇಕಾಗುತ್ತದೆ.

ಯಾವಾಗ ವಿಭಾಗೀಕರಣದ ಅಗತ್ಯವಿರುತ್ತದೆ?

ಇದನ್ನು ಸಾಮಾನ್ಯವಾಗಿ ಸಂಸತ್ತಿನಲ್ಲಿ ಪಾಲಿಸಲಾಗುತ್ತದೆ. ವಿಧಾನಸಭೆಗಳಲ್ಲಿ ಪಾಲಿಸಲಾಗುವುದಿಲ್ಲ. ಯಾವುದಾದರೂ ಸಾಂವಿಧಾನಿಕ ತಿದ್ದುಪಡಿಗೆ ಮತಹಾಕುವ ಸಮಯದಲ್ಲಿ ಈ ವಿಭಾಗೀಕರಣದ ಅಗತ್ಯವಿರುತ್ತದೆ.

ಈ ಪ್ರಕ್ರಿಯೆಯ ಬಗ್ಗೆ ಯಾವುದಾದರೂ ಪಕ್ಷ ಅಸಮಾಧಾನ ತೋರಿದರೆ?

ಇಂಥ ಸಂದರ್ಭ ಬಂದಾಗ ರಾಜ್ಯಪಾಲರಿಗೆ ಮನವಿ ಸಲ್ಲಿಸಬಹುದು. ಆಗ, ರಾಜ್ಯಪಾಲರು ಮತ್ತೊಮ್ಮೆ ಸದನವನ್ನು ಕರೆದು ಮತ್ತೆ ವಿಶ್ವಾಸಮತ ಯಾಚಿಸಲು ಸೂಚಿಸಬಹುದು. ರಾಜ್ಯಪಾಲರು ಸಭಾಧ್ಯಕ್ಷರಿಗೆ ಸರಿಯಾಗಿ ನಿರ್ವಹಿಸಲು ಕೆಲ ಸೂಚನೆಗಳನ್ನೂ ನೀಡಬಹುದು. ಮತ್ತೂ ಸಮಸ್ಯೆ ಬಗೆಹರಿಯದಿದ್ದರೆ ಕೋರ್ಟಿನ ಕದವನ್ನೂ ತಟ್ಟಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+