ಕರ್ನಾಟಕ ರಣಾಂಗಣ : ವಿಶ್ವಾಸಮತವನ್ನು ಹೇಗೆ ನಡೆಸಲಾಗುತ್ತದೆ?
ಬೆಂಗಳೂರು, ಮೇ 18 : ಕರ್ನಾಟಕ ವಿಧಾನಸಭೆಯಲ್ಲಿ ಶನಿವಾರ, ಮೇ 19ರಂದು ಗೌಪ್ಯ ಮತದಾನಕ್ಕೆ ಅವಕಾಶ ಕೊಡಬೇಕೆಂದು ಬಿಜೆಪಿ ಮಾಡಿದ ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿರುವುದರಿಂದ ಭಾರೀ ಕೋಲಾಹಲವುಂಟಾಗಿ ವಿವಾದವೆಬ್ಬಿಸುವ ಸಾಧ್ಯತೆಯಿದೆ.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಧ್ವನಿಮತದ ಮೂಲಕ ಮತದಾನ ಮಾಡುವ ಸಂದರ್ಭದಲ್ಲಿ ವಿವಾದ ಸೃಷ್ಟಿಯಾಗಿತ್ತು. ದೇವೇಂದ್ರ ಫಡ್ನವೀಸ್ ಅವರ ನೇತೃತ್ವದ ಬಿಜೆಪಿ ಸರಕಾರ ವಿಶ್ವಾಸಮತ ಗೆದ್ದಿತ್ತು. ಕೆಲ ಕಾಂಗ್ರೆಸ್ ಶಾಸಕರು ರಾಜ್ಯಪಾಲರ ಮೇಲೆ ಕೈಕೂಡ ಮಾಡಿದ್ದರು.
ವಿಶ್ವಾಸಮತ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಧ್ವನಿಮತದ ಮೂಲಕ ವಿಶ್ವಾಸಮತ ನಡೆಯುತ್ತದೆ. ಧ್ವನಿಮತದ ಮೂಲಕ ನಡೆದರೆ ವಿಶ್ವಾಸಮತದ ಪರವಾಗಿರುವವರು 'ಹೌದು' ಅಥವಾ 'ಇಲ್ಲ' ಎನ್ನುವ ಮೂಲಕ ಮತ ಚಲಾಯಿಸುತ್ತಾರೆ. ಕೈ ಎತ್ತುವ ಅಥವಾ ಚೀಟಿಯ ಮೂಲಕ ಅಥವಾ ಎಲೆಕ್ಟ್ರಾನಿಕ್ ಎಂತ್ರದ ಮೂಲಕವೂ ಮತ ಚಲಾವಣೆ ನಡೆಯುತ್ತದೆ.

ವಿಭಾಗೀಕರಣ ಎಂದರೇನು?
ಧ್ವನಿಮತದ ಮೂಲಕ ಬಂದ ಮತಎಣಿಕೆಯ ವಿರುದ್ಧ ಯಾವ ಪಕ್ಷವಾದರೂ ಧ್ವನಿಯೆತ್ತಿದರೆ, ಬಿದ್ದ ಮತಗಳ ಸರಿಯಾದ ಲೆಕ್ಕ ತೆಗೆದುಕೊಳ್ಳಲು ವಿಭಾಗೀಕರಣ ಮಾಡಲಾಗುತ್ತದೆ. ಆಗ, ಸ್ಪಷ್ಟ ಬಹುಮತವನ್ನು ಸಾಬೀತುಪಡಿಸಬೇಕಾಗುತ್ತದೆ.
ಯಾವಾಗ ವಿಭಾಗೀಕರಣದ ಅಗತ್ಯವಿರುತ್ತದೆ?
ಇದನ್ನು ಸಾಮಾನ್ಯವಾಗಿ ಸಂಸತ್ತಿನಲ್ಲಿ ಪಾಲಿಸಲಾಗುತ್ತದೆ. ವಿಧಾನಸಭೆಗಳಲ್ಲಿ ಪಾಲಿಸಲಾಗುವುದಿಲ್ಲ. ಯಾವುದಾದರೂ ಸಾಂವಿಧಾನಿಕ ತಿದ್ದುಪಡಿಗೆ ಮತಹಾಕುವ ಸಮಯದಲ್ಲಿ ಈ ವಿಭಾಗೀಕರಣದ ಅಗತ್ಯವಿರುತ್ತದೆ.
ಈ ಪ್ರಕ್ರಿಯೆಯ ಬಗ್ಗೆ ಯಾವುದಾದರೂ ಪಕ್ಷ ಅಸಮಾಧಾನ ತೋರಿದರೆ?
ಇಂಥ ಸಂದರ್ಭ ಬಂದಾಗ ರಾಜ್ಯಪಾಲರಿಗೆ ಮನವಿ ಸಲ್ಲಿಸಬಹುದು. ಆಗ, ರಾಜ್ಯಪಾಲರು ಮತ್ತೊಮ್ಮೆ ಸದನವನ್ನು ಕರೆದು ಮತ್ತೆ ವಿಶ್ವಾಸಮತ ಯಾಚಿಸಲು ಸೂಚಿಸಬಹುದು. ರಾಜ್ಯಪಾಲರು ಸಭಾಧ್ಯಕ್ಷರಿಗೆ ಸರಿಯಾಗಿ ನಿರ್ವಹಿಸಲು ಕೆಲ ಸೂಚನೆಗಳನ್ನೂ ನೀಡಬಹುದು. ಮತ್ತೂ ಸಮಸ್ಯೆ ಬಗೆಹರಿಯದಿದ್ದರೆ ಕೋರ್ಟಿನ ಕದವನ್ನೂ ತಟ್ಟಬಹುದು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications