ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್-ಜೆಡಿಎಸ್ ನಡುವೆ ಮ್ಯಾಚ್ ಫಿಕ್ಸಿಂಗ್ ನಡೆದಿದೆ : ಸಿ.ಟಿ.ರವಿ

|
Google Oneindia Kannada News

ಬೆಂಗಳೂರು, ಜುಲೈ 18 : "ಕಾಂಗ್ರೆಸ್-ಜೆಡಿಎಸ್‌ ಪಕ್ಷಗಳಿಗೆ ವಿಶ್ವಾಸ ಕಳೆದುಕೊಳ್ಳುವ ಆತಂಕವಿದೆ. ಆದ್ದರಿಂದ, ಕಲಾಪವನ್ನು ಎಳೆದಾಡುವ ಪ್ರಯತ್ನ ನಡೆದಿದೆ. ಇದು ಮ್ಯಾಚ್ ಫಿಕ್ಸಿಂಗ್‌ನಂತೆ ಕಾಣುತ್ತಿದೆ," ಎಂದು ಬಿಜೆಪಿ ಶಾಸಕ ಸಿ. ಟಿ. ರವಿ ಆರೋಪ ಮಾಡಿದರು.

ಗುರುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹುಮತವನ್ನು ಕಳೆದುಕೊಂಡಿದೆ. ಸದನದಲ್ಲಿ ಅವರ ಸದಸ್ಯರ ಸಂಖ್ಯೆ 98 ಮಾತ್ರ," ಎಂದು ಹೇಳಿದರು.

ವಿಶ್ವಾಸಮತ ಯಾಚನೆ ವಿಳಂಬ, ಬಿಜೆಪಿ ಶಾಸಕ ಮಾಧುಸ್ವಾಮಿ ಆಕ್ಷೇಪವಿಶ್ವಾಸಮತ ಯಾಚನೆ ವಿಳಂಬ, ಬಿಜೆಪಿ ಶಾಸಕ ಮಾಧುಸ್ವಾಮಿ ಆಕ್ಷೇಪ

"ವಿಶ್ವಾಸಮತವನ್ನು ಮುಂದೂಡುವ ಪ್ರಯತ್ನ ನಡೆದಿದೆ. ಕಳೆದ 15 ದಿನದಿಂದ ಅವರು ಸರ್ಕಸ್ ಮಾಡುತ್ತಿದ್ದಾರೆ. ಪಾಯಿಂಟ್ ಆಫ್ ಆರ್ಡರ್‌ ಅಡಿ ಚರ್ಚೆಗೆ ಹೆಚ್ಚು ಅವಕಾಶ ನೀಡಲಾಗಿದೆ. ಇಂತಹ ಚರ್ಚೆಯನ್ನು ನಾನು ನೋಡಿಯೇ ಇಲ್ಲ," ಎಂದರು.

ವಿಶ್ವಾಸಮತ ಯಾಚನೆ LIVE: ಈಗ ವಿಶ್ವಾಸಮತ ಪಡೆದುಕೊಳ್ಳುವುದು ಸರಿಯಲ್ಲ: ಸಿದ್ದರಾಮಯ್ಯವಿಶ್ವಾಸಮತ ಯಾಚನೆ LIVE: ಈಗ ವಿಶ್ವಾಸಮತ ಪಡೆದುಕೊಳ್ಳುವುದು ಸರಿಯಲ್ಲ: ಸಿದ್ದರಾಮಯ್ಯ

Karnataka floor test : Match fixing between Congress JDS alleges CT Ravi

"ಸರ್ಕಾರಕ್ಕೆ ಬಹುಮತವಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ರಾಜ್ಯಪಾಲರು, ಸುಪ್ರೀಂಕೋರ್ಟ್‌ ಕಲಾಪವನ್ನು ನೋಡುತ್ತಿದ್ದಾರೆ. ನಾವು ಕೂಡ ಎಲ್ಲವನ್ನು ನೋಡಿ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತೇವೆ," ಎಂದು ತಿಳಿಸಿದರು.

ಹೋಟೆಲಿಗೆ ಹಾಜರ್, ಸದನಕ್ಕೆ ಚಕ್ಕರ್, ಇದು ವಿಶ್ವಾಸಮತ ಹಾಜರಿ ಪುಸ್ತಕ!ಹೋಟೆಲಿಗೆ ಹಾಜರ್, ಸದನಕ್ಕೆ ಚಕ್ಕರ್, ಇದು ವಿಶ್ವಾಸಮತ ಹಾಜರಿ ಪುಸ್ತಕ!

ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿಶ್ವಾಸಮತದ ಮೇಲೆ ನಿರ್ಣಯ ಮಂಡನೆ ಮಾಡಿ ಕೆಲವು ಹೊತ್ತು ಮಾತನಾಡಿದರು. ಬಳಿಕ ಸಿದ್ದರಾಮಯ್ಯ, ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಶಾಸಕರು ಮಾತನಾಡುತ್ತಿದ್ದು, ಚರ್ಚೆ ನಡೆಯುತ್ತದಲೇ ಇದೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕರ ರಾಜೀನಾಮೆ, ಪಕ್ಷಾಂತರ ನಿಷೇಧ ಕಾಯ್ದೆಯ ಮೂಲ ಆಶಯ, ಶಾಸಕಾಂಗ ಪಕ್ಷದ ನಾಯಕರಿಗೆ ತಮ್ಮ ಪಕ್ಷದ ಸದಸ್ಯರಿಗೆ ವಿಪ್ ನೀಡಲು ಇರುವ ಅವಕಾಶ ಸೇರಿದಂತೆ ಹಲವು ವಿಚಾರ ಪ್ರಸ್ತಾಪಿಸಿದರು.

ಬಿಜೆಪಿ ಸದಸ್ಯರಾದ ಮಾಧುಸ್ವಾಮಿ, ಬಸವರಾಜ್ ಬೊಮ್ಮಾಯಿ, ಕೆ. ಜಿ. ಬೋಪಯ್ಯ ಮುಂತಾದ ಸದಸ್ಯರು ಕಾಂಗ್ರೆಸ್‌ ಸದಸ್ಯರ ಚರ್ಚೆಗೆ ಆಕ್ಷೇಪ ವ್ಯಕ್ತಪಡಿಸುತ್ತಲೇ ಇದ್ದಾರೆ. ವಿಧಾನಸಭೆಯಲ್ಲಿ ವಿಶ್ವಾಸಮತದ ಮೇಲೆ ಚರ್ಚೆ ಸಾಗಿದೆ.

English summary
Congress and JD(S) government has no majority. It's match fixing game so they expending assembly session floor test discussion alleged C.T.Ravi Karnataka BJP general secretary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X