ಯಡಿಯೂರಪ್ಪ ಆಸೆಗೆ ಎಳ್ಳುನೀರು ಬಿಡಲಿದೆಯೇ ಸಿದ್ದರಾಮಯ್ಯ ವಾದ?
Recommended Video
ಬೆಂಗಳೂರು, ಜುಲೈ 18: ಕಲಾಪವು ಭೋಜನ ವಿರಾಮಕ್ಕೆ ತೆರಳುವ ಮುನ್ನ ಸಿದ್ದರಾಮಯ್ಯ ಅವರ ಪ್ರಬಲವಾದ ಒತ್ತಾಯವೊಂದನ್ನು ಸ್ಪೀಕರ್ ರಮೇಶ್ ಕುಮಾರ್ ಅವರ ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಕಲಾಪದಲ್ಲಿ ಮಂಡಿಸಿದ ವಾದ ಯಡಿಯೂರಪ್ಪ ಅವರ ಸಿಎಂ ಆಗುವ ಆಸೆಗೆ ಎಳ್ಳು-ನೀರು ಬಿಡಲಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಅತೃಪ್ತ ಶಾಸಕರ ಪ್ರಕರಣ ಇತ್ಯರ್ಥವಾಗುವವರೆಗೂ ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ತಡೆಹಿಡಿಯಬೇಕು ಎಂದು ಸಿದ್ದರಾಮಯ್ಯ ಅವರು ಪಕ್ಷಾಂತರ ಕಾಯ್ದೆಯ ಕೆಲವು ನಿಯಮಗಳನ್ನು ಉಲ್ಲೇಖಿಸಿ ಸಶಕ್ತವಾಗಿಯೇ ವಾದ ಮಂಡಿಸಿದರು.
'ಶಾಸಕಾಂಗ ಪಕ್ಷದ ನಾಯಕನಾಗಿ ಶಾಸಕರಿಗೆ ವ್ಹಿಪ್ ನೀಡುವುದು ಸಂವಿಧಾನ ನನಗೆ (ಶಾಸಕಾಂಗ ಪಕ್ಷದ ನಾಯಕ) ಹಾಗೂ ಎಲ್ಲ ರಾಜಕೀಯ ಪಕ್ಷಕ್ಕೆ ನೀಡಿರುವ ಹಕ್ಕು' ಎಂದ ಸಿದ್ದರಾಮಯ್ಯ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಶಾಸಕರನ್ನು ಸದನಕ್ಕೆ ಬರುವಂತೆ ಅಥವಾ ಬಾರದಂತೆ ಒತ್ತಾಯ ಹೇರುವಂತಿಲ್ಲ ಎಂದಾಗಿದೆ. ಹೀಗಿದ್ದಾಗ ನಾವು ನೀಡಿನ ವ್ಹಿಪ್ ಅನ್ನು ಸ್ವೀಕರಿಸದಿರಲು ಶಾಸಕರ ಮೇಲೆ ಸುಪ್ರೀಂ ತೀರ್ಪು ಪ್ರಭಾವ ಬೀರುತ್ತಿದೆ ಎಂದು ಸಿದ್ದರಾಮಯ್ಯ ವಾದಿಸಿದರು.

'ಶಾಸಕರ ಪ್ರಕರಣ ಇತ್ಯರ್ಥದ ನಂತರ ವಿಶ್ವಾಸಮತ ಪ್ರಕ್ರಿಯೆ'
ಶಾಸಕರ ಪ್ರಕರಣ ಮೊದಲಿಗೆ ಇತ್ಯರ್ಥವಾಗಲಿ ಅಥವಾ ಅವರು ಸದನಕ್ಕೆ ಹಾಜರಾಗಿ ತಮ್ಮ ನಿರ್ಣಯ ಪ್ರಕಟಿಸಲಿ ಆ ನಂತರ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಕೈಗೆತ್ತಿಕೊಳ್ಳೋಣ. ಕಾನೂನು ಬದ್ಧವಾಗಿ ಸ್ಥಾಪಿತವಾದ ಸರ್ಕಾರವನ್ನು ವಿಧಾನಸಭೆಯ ಸದಸ್ಯರ ಅನುಪಸ್ಥಿತಿಯಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸುವುದು ಅಸಾಂವಿಧಾನಿಕ ಎಂದು ಸಿದ್ದರಾಮಯ್ಯ ವಾದ ಮಂಡಿಸಿದರು.

ಅತೃಪ್ತ ಶಾಸಕರು ಯಾರ ಪರವಾದರೂ ಮತ ಚಲಾಯಿಸಲಿ
ಅತೃಪ್ತ ಶಾಸಕರು ವ್ಹಿಪ್ ಸ್ವೀಕರಿಸಿ ಸದನಕ್ಕೆ ಹಾಜರಾಗಿ ಸರ್ಕಾರದ ವಿರುದ್ಧದ ಅವಿಶ್ವಾಸ ಗೊತ್ತುವಳಿ ಪರವಾಗಿ ಅಥವಾ ವಿರುದ್ಧವಾಗಿಯಾದರೂ ಮತ ಚಲಾಯಿಸಲಿ ಎಂಬುದು ಸಿದ್ದರಾಮಯ್ಯ ಅವರ ವಾದದ ಸಾರ. ಸಿದ್ದರಾಮಯ್ಯ ಅವರು ಸುದೀರ್ಘವಾಗಿ ತಮ್ಮ ವಾದವನ್ನು ಸ್ಪೀಕರ್ ಮುಂದೆ ಮಂಡಿಸಿದರು. ಸಿದ್ದರಾಮಯ್ಯ ಅವರು ಮಾತನಾಡುವಾಗ ಹಲವು ಬಾರಿ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ ಘಟನೆ ಸಹ ನಡೆಯಿತು.

'ಪಕ್ಷಕ್ಕೆ ನೀಡಲಾಗಿರುವ ಹಕ್ಕಿನ ಉಲ್ಲಂಘನೆ ಆಗಿದೆ'
ಶಾಸಕರು ಒಟ್ಟಾಗಿ ರಾಜೀನಾಮೆ ನೀಡಿದ್ದಾರೆ, ಒಂದೇ ವಾಹನದಲ್ಲಿ ಪ್ರಯಾಣಿಸಿದ್ದಾರೆ ಇವರ ಈ ವರ್ತನೆ ಕಾನೂನು ಬದ್ಧವಾಗಿ ಸ್ಥಾಪಿತವಾದ ಸರ್ಕಾರವನ್ನು ಕೆಡವುವ ಕುಟಿಲತೆಯನ್ನು ಸಾಬೀತುಪಡಿಸುತ್ತಿದೆ. ಇದೆಲ್ಲವೂ ಪಕ್ಷದ ವಿರುದ್ಧ ಚಟುವಟಿಕೆ ಇದನ್ನು ನಿಯಂತ್ರಿಸಲೆಂದೇ ಸಂವಿಧಾನವು 10 ನೇ ಷೆಡ್ಯೂಲ್ನಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಇದೆ. ಇಂದಿನ ಪರಿಸ್ಥಿತಿಯಲ್ಲಿ ಅದನ್ನು ನಾವು ಪ್ರಯೋಗಿಸುವ ಅವಕಾಶ ಇಲ್ಲದಾಗಿದೆ. ಇದು ಪಕ್ಷದ ಹಕ್ಕು ಉಲ್ಲಂಘನೆ ಎಂದು ಸಿದ್ದರಾಮಯ್ಯ ವಾದಿಸಿದರು.

'ನಮ್ಮ ಕಡೆಯ ವಾದ ಸುಪ್ರೀಂನಲ್ಲಿ ಮಂಡನೆ ಆಗಿಲ್ಲ'
ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆಯ ಬಗ್ಗೆಯೂ ಸದನದ ಗಮನ ಸೆಳೆದ ಸಿದ್ದರಾಮಯ್ಯ, ಹತ್ತು ಅತೃಪ್ತ ಶಾಸಕರು ಸುಪ್ರೀಂಕೋರ್ಟ್ನಲ್ಲಿ ಹಾಕಿಕೊಂಡಿದ್ದ ಅರ್ಜಿಯ ವಿಚಾರಣೆಯಲ್ಲಿ ಮುಖ್ಯಮಂತ್ರಿ ಅವರನ್ನು ಹಾಗೂ ಸ್ಪೀಕರ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಯಿತು. ಆದರೆ ಶಾಸಕಾಂಗ ಪಕ್ಷದ ನಾಯಕ ಅಥವಾ ಪಕ್ಷಕ್ಕೆ ಪ್ರತಿವಾದಿ ಸ್ಥಾನ ನೀಡಿಲ್ಲ. ಹಾಗಾಗಿ ನಮ್ಮ ವಾದವನ್ನು ಅಥವಾ ನಮ್ಮ ಕಡೆಯ ನ್ಯಾಯ ನಮಗೆ ದೊರೆತಿಲ್ಲವಾದ್ದರಿಂದ ಈ ಪ್ರಕರಣ ಇತ್ಯರ್ಥವಾಗಿಲ್ಲವೆಂದು ಈಗ ಭಾವಿಸುವಂತಿಲ್ಲವೆಂಬ ಅರ್ಥದಲ್ಲಿ ಸಿದ್ದರಾಮಯ್ಯ ಮಾತನಾಡಿದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications