Sugar Production: ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆ ಕುಂಠಿತ
ಕರ್ನಾಟಕದಲ್ಲಿ ಕಬ್ಬು ಬೆಳೆಯ ಕಡಿಮೆ ಉತ್ಪಾದನೆ ಸಕ್ಕರೆ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಈ ತಿಂಗಳಲ್ಲಿ ಪ್ರಾರಂಭವಾದ 2023-24 ರ ಸಕ್ಕರೆ ಋತುವಿನಲ್ಲಿ ರಾಜ್ಯದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ 42.30 ಪ್ರತಿಶತಕ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಇಡೀ ದೇಶದಲ್ಲಿ ಕರ್ನಾಟಕ ಅತಿ ಹೆಚ್ಚು ಸಕ್ಕರೆ ಉತ್ಪಾದನೆ ಮಾಡುವ ಮೂರನೇ ರಾಜ್ಯವಾಗಿದೆ. ಪೂರ್ತಿಯಾದ 2022-23 ಋತುವಿನಲ್ಲಿ (ಅಕ್ಟೋಬರ್-ಸೆಪ್ಟೆಂಬರ್) ರಾಜ್ಯದಲ್ಲಿ ಸಕ್ಕರೆ ಉತ್ಪಾದನೆಯು 59.81 ಲಕ್ಷ ಟನ್ಗಳಷ್ಟಿತ್ತು. ಈ ಬಾರಿ ಅದು 42.30 ಶೇಕಡಾ ಕಡಿಮೆಯಾಗಲಿದ್ದು 34.51 ಲಕ್ಷ ಟನ್ಗಳಿಗೆ ಕುಸಿಯುತ್ತದೆ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರದ ಅಂದಾಜಿನ ಪ್ರಕಾರ, ಕರ್ನಾಟಕದಲ್ಲಿ ಕಬ್ಬು ಉತ್ಪಾದನೆಯು ಹಿಂದಿನ ಋತುವಿನಲ್ಲಿ 705 ಲಕ್ಷ ಟನ್ಗಳಿಗೆ ಹೋಲಿಸಿದರೆ 2023-24 ರಲ್ಲಿ 520 ಲಕ್ಷ ಟನ್ಗಳಿಗೆ ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ.
ಕಬ್ಬಿಬ ಲಭ್ಯತೆ ಈ ಅವಧಿಯಲ್ಲಿ 603.55 ಲಕ್ಷ ಟನ್ ಇದ್ದರೆ, 442 ಲಕ್ಷ ಟನ್ಗೆ ಲಭ್ಯತೆ ಕಡಿಮೆಯಾಗಿದೆ. ಪರಿಣಾಮವಾಗಿ, ರಾಜ್ಯದಲ್ಲಿ ಒಟ್ಟು ಸಕ್ಕರೆ ಉತ್ಪಾದನೆಯು 2023-24ರಲ್ಲಿ 34.51 ಲಕ್ಷ ಟನ್ಗಳಾಗಲಿದೆ ಎಂದು ಅಂದಾಜಿಸಲಾಗಿದೆ, ಹಿಂದಿನ ಋತುವಿನಲ್ಲಿ 59.81 ಲಕ್ಷ ಟನ್ಗಳಷ್ಟು ಉತ್ಪಾದನೆಯಾಗಿತ್ತು.
2022-23ರಲ್ಲಿ 9.91 ಪ್ರತಿಶತದಷ್ಟು ಸಕ್ಕರೆ ಚೇತರಿಕೆಯು ಈ ಋತುವಿನಲ್ಲಿ 8 ಪ್ರತಿಶತದಷ್ಟು ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ. ಆದರೂ, ಕರ್ನಾಟಕದಲ್ಲಿ ಎಥೆನಾಲ್ ಉತ್ಪಾದನೆಯು 2023-24 ರಲ್ಲಿ 40 ಕೋಟಿ ಲೀಟರ್ಗೆ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ, ಹಿಂದಿನ ಋತುವಿನಲ್ಲಿ ಎಥೆನಾಲ್ ಉತ್ಪಾದನೆ 35 ಕೋಟಿ ಲೀಟರ್ಗಳಷ್ಟಿತ್ತು. ರಾಜ್ಯದಲ್ಲಿ ಸುಮಾರು 77 ಆಪರೇಟಿಂಗ್ ಮಿಲ್ಗಳಿದ್ದು, ಅವುಗಳಲ್ಲಿ 34 ಡಿಸ್ಟಿಲರಿಗಳನ್ನು ಜೋಡಿಸಿವೆ.
ಮಳೆ ಕೊರತೆ ಕಾರಣ?
ರಾಜ್ಯದಲ್ಲಿ ಮಳೆ ಕೊರತೆಯಾಗಿದ್ದು ಕೃಷಿಗೆ ನೀರಿನ ಕೊರತೆ ಉಂಟಾಗಿದೆ. ಮಂಡ್ಯ, ಚಾಮರಾಜನಗರ, ಮೈಸೂರು, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಬೀದರ್ ಜಿಲ್ಲೆಗಳಲ್ಲಿ ಪ್ರಮುಖವಾಗಿ ಕಬ್ಬು ಬೆಳೆಯಲಾಗುತ್ತದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವುದು ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕಬ್ಬು ಬೆಳೆ ಮೇಲೆ ಪರಿಣಾಮ ಬೀರಿದೆ. ಮುಂದಿನ ದಿನಗಳಲ್ಲಿ ಕಬ್ಬು ಇಳುವರಿ ಮತ್ತಷ್ಟು ಕಡಿಮೆಯಾಗುವ ಆತಂಕ ಎದುರಾಗಿದೆ.
ಬಾಗಲಕೋಟೆ, ಬಿಜಾಪುರ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕೂಡ ಮಳೆ ಕಡಿಮೆಯಾಗಿದ್ದು ಕಬ್ಬು ಕೃಷಿ ಮೇಲೆ ಪರಿಣಾಮ ಬೀರಿದೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications