Sugar Production: ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆ ಕುಂಠಿತ
ಕರ್ನಾಟಕದಲ್ಲಿ ಕಬ್ಬು ಬೆಳೆಯ ಕಡಿಮೆ ಉತ್ಪಾದನೆ ಸಕ್ಕರೆ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಈ ತಿಂಗಳಲ್ಲಿ ಪ್ರಾರಂಭವಾದ 2023-24 ರ ಸಕ್ಕರೆ ಋತುವಿನಲ್ಲಿ ರಾಜ್ಯದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ 42.30 ಪ್ರತಿಶತಕ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಇಡೀ ದೇಶದಲ್ಲಿ ಕರ್ನಾಟಕ ಅತಿ ಹೆಚ್ಚು ಸಕ್ಕರೆ ಉತ್ಪಾದನೆ ಮಾಡುವ ಮೂರನೇ ರಾಜ್ಯವಾಗಿದೆ. ಪೂರ್ತಿಯಾದ 2022-23 ಋತುವಿನಲ್ಲಿ (ಅಕ್ಟೋಬರ್-ಸೆಪ್ಟೆಂಬರ್) ರಾಜ್ಯದಲ್ಲಿ ಸಕ್ಕರೆ ಉತ್ಪಾದನೆಯು 59.81 ಲಕ್ಷ ಟನ್ಗಳಷ್ಟಿತ್ತು. ಈ ಬಾರಿ ಅದು 42.30 ಶೇಕಡಾ ಕಡಿಮೆಯಾಗಲಿದ್ದು 34.51 ಲಕ್ಷ ಟನ್ಗಳಿಗೆ ಕುಸಿಯುತ್ತದೆ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರದ ಅಂದಾಜಿನ ಪ್ರಕಾರ, ಕರ್ನಾಟಕದಲ್ಲಿ ಕಬ್ಬು ಉತ್ಪಾದನೆಯು ಹಿಂದಿನ ಋತುವಿನಲ್ಲಿ 705 ಲಕ್ಷ ಟನ್ಗಳಿಗೆ ಹೋಲಿಸಿದರೆ 2023-24 ರಲ್ಲಿ 520 ಲಕ್ಷ ಟನ್ಗಳಿಗೆ ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ.
ಕಬ್ಬಿಬ ಲಭ್ಯತೆ ಈ ಅವಧಿಯಲ್ಲಿ 603.55 ಲಕ್ಷ ಟನ್ ಇದ್ದರೆ, 442 ಲಕ್ಷ ಟನ್ಗೆ ಲಭ್ಯತೆ ಕಡಿಮೆಯಾಗಿದೆ. ಪರಿಣಾಮವಾಗಿ, ರಾಜ್ಯದಲ್ಲಿ ಒಟ್ಟು ಸಕ್ಕರೆ ಉತ್ಪಾದನೆಯು 2023-24ರಲ್ಲಿ 34.51 ಲಕ್ಷ ಟನ್ಗಳಾಗಲಿದೆ ಎಂದು ಅಂದಾಜಿಸಲಾಗಿದೆ, ಹಿಂದಿನ ಋತುವಿನಲ್ಲಿ 59.81 ಲಕ್ಷ ಟನ್ಗಳಷ್ಟು ಉತ್ಪಾದನೆಯಾಗಿತ್ತು.
2022-23ರಲ್ಲಿ 9.91 ಪ್ರತಿಶತದಷ್ಟು ಸಕ್ಕರೆ ಚೇತರಿಕೆಯು ಈ ಋತುವಿನಲ್ಲಿ 8 ಪ್ರತಿಶತದಷ್ಟು ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ. ಆದರೂ, ಕರ್ನಾಟಕದಲ್ಲಿ ಎಥೆನಾಲ್ ಉತ್ಪಾದನೆಯು 2023-24 ರಲ್ಲಿ 40 ಕೋಟಿ ಲೀಟರ್ಗೆ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ, ಹಿಂದಿನ ಋತುವಿನಲ್ಲಿ ಎಥೆನಾಲ್ ಉತ್ಪಾದನೆ 35 ಕೋಟಿ ಲೀಟರ್ಗಳಷ್ಟಿತ್ತು. ರಾಜ್ಯದಲ್ಲಿ ಸುಮಾರು 77 ಆಪರೇಟಿಂಗ್ ಮಿಲ್ಗಳಿದ್ದು, ಅವುಗಳಲ್ಲಿ 34 ಡಿಸ್ಟಿಲರಿಗಳನ್ನು ಜೋಡಿಸಿವೆ.
ಮಳೆ ಕೊರತೆ ಕಾರಣ?
ರಾಜ್ಯದಲ್ಲಿ ಮಳೆ ಕೊರತೆಯಾಗಿದ್ದು ಕೃಷಿಗೆ ನೀರಿನ ಕೊರತೆ ಉಂಟಾಗಿದೆ. ಮಂಡ್ಯ, ಚಾಮರಾಜನಗರ, ಮೈಸೂರು, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಬೀದರ್ ಜಿಲ್ಲೆಗಳಲ್ಲಿ ಪ್ರಮುಖವಾಗಿ ಕಬ್ಬು ಬೆಳೆಯಲಾಗುತ್ತದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವುದು ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕಬ್ಬು ಬೆಳೆ ಮೇಲೆ ಪರಿಣಾಮ ಬೀರಿದೆ. ಮುಂದಿನ ದಿನಗಳಲ್ಲಿ ಕಬ್ಬು ಇಳುವರಿ ಮತ್ತಷ್ಟು ಕಡಿಮೆಯಾಗುವ ಆತಂಕ ಎದುರಾಗಿದೆ.
ಬಾಗಲಕೋಟೆ, ಬಿಜಾಪುರ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕೂಡ ಮಳೆ ಕಡಿಮೆಯಾಗಿದ್ದು ಕಬ್ಬು ಕೃಷಿ ಮೇಲೆ ಪರಿಣಾಮ ಬೀರಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications