ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮಹದೇಶ್ವರ ಸ್ವಾಮಿ ಜಾತ್ರೆಗೆ ನಿರ್ಬಂಧ
ಚಾಮರಾಜನಗರ, ನ.18: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ಜಾತ್ರೆಗೆ ಈ ಬಾರಿ ರಾಜ್ಯ ಅರಣ್ಯ ಇಲಾಖೆಯು ಭಾರಿ ನಿರ್ಬಂಧಗಳನ್ನು ವಿಧಿಸಿದೆ. ಜಾನುವಾರು, ಎತ್ತಿನಗಾಡಿಗಳು, ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಸೇರಿದಂತೆ ಹಲವು ಆದೇಶಗಳನ್ನು ಜಾರಿಗೊಳಿಸುವುದಾಗಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬೇಲದಕುಪ್ಪೆ ದೇವಾಲಯದ ವಾರ್ಷಿಕ ಜಾತ್ರೆಯ ಕುರಿತು ಸರ್ಕಾರದಿಂದ ಸ್ಥಿತಿ ವರದಿಯನ್ನು ಕೋರಿತ್ತು. ಇದರ ನಂತರ, ರಾಜ್ಯ ಅರಣ್ಯ ಇಲಾಖೆಯು ವನ್ಯಜೀವಿಗಳನ್ನು ರಕ್ಷಿಸಲು ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸುವುದಾಗಿ ಹೇಳಿದೆ.
ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ದೇವಸ್ಥಾನವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಹುಲಿ ಆವಾಸಸ್ಥಾನವನ್ನು ರೂಪಿಸುವ ಹೆಡಿಯಾಲ ಅರಣ್ಯ ವ್ಯಾಪ್ತಿಯಲ್ಲಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ದೇವಾಲಯದಲ್ಲಿ 2020 ಮತ್ತು 2021 ರಲ್ಲಿ ಜಾತ್ರೆಯನ್ನು ನಿಷೇಧಿಸಲಾಗಿತ್ತು. ಈ ಹಿನ್ನೆಲೆ ಈ ಬಾರಿಯ ಜಾತ್ರೆ ಬಾರಿಯ ಜಾತ್ರೆ ಅದ್ಧೂರಿಯಾಗಿರಲಿದೆ ಎಂದು ಅಂದಾಜಿಸಲಾಗಿದೆ.

ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ಬೇಲದಕುಪ್ಪೆ ಜಾತ್ರೆ
ನವೆಂಬರ್ 20 ರಿಂದ 23 ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಜಾತ್ರೆಯ ಪೂರ್ವಭಾವಿಯಾಗಿ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ರಮೇಶ್ ಕುಮಾರ್ ಅವರು ಮಂಗಳವಾರ ದೇವಾಲಯದ ಸ್ಥಳವನ್ನು ಪರಿಶೀಲಿಸಿದ್ದಾರೆ. ಜೊತೆಗೆ ದೇವಾಲಯದ ಟ್ರಸ್ಟಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಪ್ರತಿವರ್ಷ ಜಾತ್ರೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಜನ ಸೇರುತ್ತಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸುವವರು ಹೆಚ್ಚಿನವರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜಾತ್ರೆ ಸಮಯದಲ್ಲಿ ಬೆಂಗಳೂರು, ಮಂಡ್ಯ ಮುಂತಾದ ಕಡೆಯಿಂದ ಜನರು ಸೇರುತ್ತಾರೆ.

ಅರಣ್ಯದೊಳಗೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧ
''ಧ್ವನಿವರ್ಧಕಗಳು ಮತ್ತು ಜನರೇಟರ್ಗಳ ಬಳಕೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ. ಖಾಸಗಿ ವಾಹನಗಳನ್ನೂ ಅರಣ್ಯದೊಳಗೆ ಬಿಡುವುದಿಲ್ಲ. ಖಾಸಗಿ ವಾಹನಗಳನ್ನು ಅರಣ್ಯದ ಹೊರವಲಯದಲ್ಲಿ ನಿಲ್ಲಿಸಿ ದೇವಸ್ಥಾನಕ್ಕೆ ಬಿಡುತ್ತೇವೆ. ಈ ಸಂಬಂಧ ಎನ್ಟಿಸಿಎಗೆ ಸ್ಥಿತಿ ವರದಿ ಸಲ್ಲಿಸುತ್ತೇನೆ. ಜಾತ್ರೆಯ ಸಮಯವು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಇರುತ್ತದೆ" ಎಂದು ನಿರ್ದೇಶಕ ರಮೇಶ್ ಕುಮಾರ್ ಹೇಳಿದ್ದಾರೆ.
2016ರ ನವೆಂಬರ್ನಲ್ಲಿ ದೇವಸ್ಥಾನದ ಜಾತ್ರೆ ವೇಳೆ ಖಾಸಗಿ ವಾಹನಗಳನ್ನು ನಿಷೇಧಿಸಿದ್ದರೂ ಎಚ್.ಡಿ.ಕೋಟೆಯ ಅಂದಿನ ಶಾಸಕ ದಿವಂಗತ ಚಿಕ್ಕಮಾದು ಎಸ್ ಅವರು ನೂರಾರು ಬೆಂಬಲಿಗರೊಂದಿಗೆ ಅರಣ್ಯ ಪ್ರವೇಶಿಸಿ ಖಾಸಗಿ ವಾಹನಗಳ ಬಳಕೆಗೆ ಪ್ರಚೋದನೆ ನೀಡಿದ್ದರು.

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜಾತ್ರೆಯ ಕುರಿತ ವರದಿಗೆ ಎನ್ಟಿಸಿಎಆದೇಶ
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಬಂಡೀಪುರದೊಳಗಿನ ವಾರ್ಷಿಕ ದೇವಾಲಯದ ಜಾತ್ರೆಯ ಬಗ್ಗೆ ವಾಸ್ತವ ಸ್ಥಿತಿಯ ವರದಿಯನ್ನು ಒದಗಿಸುವಂತೆ ನವೆಂಬರ್ 11 ರಂದು ಸರ್ಕಾರಕ್ಕೆ ಸೂಚಿಸಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದೇವಸ್ಥಾನದ ಜಾತ್ರೆಯನ್ನು ನಡೆಸುವುದರಿಂದ ಆಗುವ ಪರಿಣಾಮಗಳ ಕುರಿತು ವನ್ಯಜೀವಿ ಸಂರಕ್ಷಣಾಧಿಕಾರಿ ಗಿರಿಧರ್ ಕುಲಕರ್ಣಿ ಅವರು ಅಕ್ಟೋಬರ್ನಲ್ಲಿ ಎನ್ಟಿಸಿಎಗೆ ವಿವರವಾದ ಪತ್ರವನ್ನು ಬರೆದಿದ್ದರು. ಇದರ ನಂತರ ಈ ಬೆಳವಣಿಗೆ ನಡೆದಿದೆ.
"ವಾರ್ಷಿಕ ಜಾತ್ರೆಯಲ್ಲಿ ಎತ್ತಿನ ಗಾಡಿಗಳು ಮತ್ತು ದ್ವಿಚಕ್ರ ವಾಹನಗಳು, ಆಟೋರಿಕ್ಷಾಗಳು, ಜೀಪುಗಳು, ಕಾರುಗಳು, ಟ್ರಾಕ್ಟರ್ಗಳು, ಲಾರಿಗಳು, ಬಸ್ಗಳು ಸೇರಿದಂತೆ ಖಾಸಗಿ ವಾಹನಗಳು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುತ್ತಾರೆ. ಜನಸಂದಣಿಯನ್ನು ನಿಯಂತ್ರಿಸುವುದು ಅರಣ್ಯ ಮತ್ತು ಇತರ ಇಲಾಖೆಗಳಿಗೆ ತುಂಬಾ ಕಷ್ಟಕರವಾಗಿದೆ" ಎಂದು ಕುಲಕರ್ಣಿ ಎನ್ಟಿಸಿಎಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅರಣ್ಯದಲ್ಲಿ ವಾಹನ ಚಾಲನೆ, ಹಾರ್ನ್ ಮಾಡುವುದು ಅಪಾಯಕಾರಿ
''ವಾರ್ಷಿಕ ಜಾತ್ರೆಗೆ ಬರುವ ಜನರು ಆಹಾರ ತಯಾರಿಸಲು ಬೃಹತ್ ಪಾತ್ರೆಗಳು, ನೀರಿನ ಕ್ಯಾನ್ಗಳು ಮತ್ತು ಗ್ಯಾಸ್ ಸಿಲಿಂಡರ್ಗಳನ್ನು ಟ್ರ್ಯಾಕ್ಟರ್/ವಾಹನಗಳಲ್ಲಿ ತರುತ್ತಾರೆ. ಯಾತ್ರಾರ್ಥಿಗಳ ದೊಡ್ಡ ಗುಂಪುಗಳು, ಜಾನುವಾರುಗಳು, ವಾಹನಗಳ ಪ್ರವೇಶ ಮತ್ತು ಸಂಪನ್ಮೂಲ ಬಳಕೆ ಮತ್ತು ಅಂಗಡಿಗಳನ್ನು ಇಡಲು ಸಸ್ಯಗಳನ್ನು ತೆರವುಗೊಳಿಸುವುದು ಸೇರಿ ಪರಿಸರವನ್ನು ಹಾನಿಗೊಳಿಸಿದೆ" ಎಂದಿದ್ದಾರೆ.
ಜಾತ್ರೆಗಾಗಿ ನೂರಾರು ಅಂಗಡಿಗಳು ಮತ್ತು ಆಹಾರ ಮಳಿಗೆಗಳನ್ನು ಸ್ಥಾಪಿಸಲಾಗುತ್ತದೆ. ಟ್ರಾಕ್ಟರ್ಗಳನ್ನು ಪ್ರದರ್ಶನಕ್ಕೆ ಇಡಲಾಗುತ್ತದೆ. ವಾರ್ಷಿಕ ಕಾರ್ಯಕ್ರಮದಲ್ಲಿ ಸುಮಾರು 15,000 ವಾಹನಗಳು ಮತ್ತು ಸಾವಿರ ಜಾನುವಾರುಗಳನ್ನು ಕಾಣಬಹುದು. ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಪ್ರದೇಶದಲ್ಲಿ ವಾಹನಗಳ ಚಲನೆ ಮತ್ತು ಹಾರ್ನ್ ಮಾಡುವ ಮೂಲಕ ಗದ್ದಲದ ಚಟುವಟಿಕೆಗಳ ಕೇಂದ್ರವಾಗಿದೆ ಎಂದು ವನ್ಯಜೀವಿ ಸಂರಕ್ಷಣಾಕಾರರು ತಿಳಿಸಿದ್ದಾರೆ.
ಪ್ರಮುಖವಾಗಿ ಜಾತ್ರೆಯ ಸಮಯದಲ್ಲಿ ಜನರು ಬಳಸಿ ಉಳಿದ ಆಹಾರ ಪದಾರ್ಥಗಳು ಕಾಡು ಪ್ರಾಣಿಗಳನ್ನು ಆಕರ್ಷಿಸುತ್ತವೆ. ಅವು ಬೇಯಿಸಿದ ಆಹಾರಕ್ಕೆ ಅಭ್ಯಾಸವಾಗುತ್ತವೆ. ಹೀಗಾಗಿ ಅದನ್ನು ಹುಡುಕಲು ಊರುಗಳಿಗೆ ನುಗ್ಗಬಹುದು ಎಂಬ ಅತಂಕವನ್ನು ಹೊರಹಾಕಿದ್ದಾರೆ
(ಮಾಹಿತಿ ಕೃಪೆ- ದಿ ಇಂಡಿಯನ್ ಎಕ್ಸ್ಪ್ರೆಸ್)
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications