ಕರ್ನಾಟಕ ಅರಣ್ಯ ಇಲಾಖೆ: 'ಗರುಡಾಕ್ಷಿ' ಆನ್ಲೈನ್ FIR ವ್ಯವಸ್ಥೆ ಆರಂಭ, ಏನಿದು?
ಬೆಂಗಳೂರು, ಜನವರಿ 06: ಪ್ರಾಣಿ ಸಂಕುಲ ಕಾಪಾಡಲು, ನಾಡನ್ನು ಸುರಕ್ಷಿತವಾಗಿಡಲು ಶ್ರಮಿಸುವ ಕರ್ನಾಟಕ ಅರಣ್ಯ ಇಲಾಖೆಗೆ ಮಹತ್ವದ ಹೆಜ್ಜೆ ಇಟ್ಟಿದೆ. ಇದೇ ಜನವರಿ 7 ರಂದು ವಿನೂತನವಾದ "ಗರುಡಾಕ್ಷಿ" ಆನ್ಲೈನ್ ಎಫ್ಐಆರ್ ವ್ಯವಸ್ಥೆಯನ್ನು ಪ್ರಾರಂಭಿಸಲು ಮುಂದಾಗಿದೆ. ಈ ಮೂಲಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ತೀರ್ಮಾನಿಸಿದೆ.
ಬೆಂಗಳೂರಿನ ವಿಧಾನಸೌಧದ ಸಭಾಂಗಣದಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ನಾಳೆ ಜನವರಿ 7 ರಂದು ಮಂಗಳವಾರ ವಿನೂತನ "ಗರುಡಾಕ್ಷಿ" ಆನ್ಲೈನ್ ಎಫ್ಐಆರ್ ವ್ಯವಸ್ಥೆ ಲೋಕಾರ್ಪಣೆ ಮಾಡಲಿದ್ದಾರೆ. ಆರಂಭಿಕ ಹಂತದಲ್ಲಿ ಇದನ್ನು ಪ್ರಾಯೋಗಿಕವಾಗಿ ನಿರ್ವಹಿಸಲು ತೀರ್ಮಾನಿಸಲಾಗಿದೆ ಎಂದು 'ಇಂಡಿಯಾ ಟುಡೆ' ವರದಿ ಮಾಡಿದೆ.

ಗರುಡಾಕ್ಷಿ: ಏನೆಲ್ಲ ಪ್ರಯೋಜನ
ರಾಜ್ಯದ ಅರಣ್ಯ ಹಾಗೂ ವನ್ಯಜೀವಿ ಕುರಿತು ಅಪರಾಧ ಚಟುವಟಿಕೆಯನ್ನು ಸರಳಗೊಳಿಸಲು, ಎಫ್ಐಆರ್ ದಾಖಲಾತಿಯನ್ನು ಡಿಜಿಟಲೀಕರಣಗೊಳಿಸಲು ಹಾಗೂ ಸರ್ಕಾರ ಅಪರಾಧವಾಗದಂತೆ ತಡೆಯಲು, ಜನರಿಗೆ ತ್ವರಿತವಾಗಿ ಎಫ್ಐಆರ್ ದಾಖಲಿಸಲು ಅನುಕೂಲವಾಗುವಂತೆ ಈ 'ಗರುಡಾಕ್ಷಿ' ಪೋರ್ಟಲ್ ಜಾರಿಗೆ ತರಲಾಗುವುದು.
ಅರಣ್ಯ ಅಪರಾಧಗಳಿಗೆ ಸಂಬಂಧಿಸಿದ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲು ಈ ಗರುಡಾಕ್ಷಿ ಆನ್ಲೈನ್ ವ್ಯವಸ್ಥೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೋರ್ಟಲ್ ಅಪರಾಧ ಎದುರಿಸಲು ಸರ್ಕಾರಕ್ಕೆ ಉತ್ತೇಜನ ನೀಡಲಿದೆ ಎಂದು ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ.

'ಗರುಡಾಕ್ಷಿ' ತಂತ್ರಾಂಶವನ್ನು ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ (WTI) ಸಹಯೋದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಇಡ ಅರಣ್ಯ ಅಪರಾಧ ಪ್ರಕರಣಗಳನ್ನು ಆನ್ಲೈನ್ನಲ್ಲಿ ನಿರ್ವಹಣೆ ಮಾಡಬಹುದಾಗಿದೆ. ಈ ತಂತ್ರಾಂಶದಿಂದ ಆನ್ಲೈನ್ ನಿರ್ವಹಣೆ ಮತ್ತಷ್ಟು ಸರಳವಾಗಲಿದೆ.
ಈ ಹಿಂದೆ ಸಚಿವ ಈಶ್ವರ್ ಖಂಡ್ರೆ ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಎಫ್ಐಆರ್ ಡಿಜಿಟಲ್ ಮಾಡಲು ಸೂಚನೆ, ಸಲನೆ ನೀಡಿದ್ದರು. ಅದರ ಭಾಗವಾಗಿ ಈ ಗರುಡಾಕ್ಷಿ ತಂತ್ರಾಂಶ ರೂಪಗೊಂಡು, ಇದೀಗ ಕಾರ್ಯಾರಂಭಿಸಲು ಸಿದ್ಧಗೊಂಡಿದೆ.
ಗರುಡಾಕ್ಷಿ ಹೊಸ ವ್ಯವಸ್ಥೆಯನ್ನು ಅರಣ್ಯ ಇಲಾಖೆಯ 05 ಅರಣ್ಯ ವಿಭಾಗಗಳಾದ ಬೆಂಗಳೂರು ನಗರ, ಬೆಂಗಳೂರು ಅರಣ್ಯ ಗಸ್ತು, ಭದ್ರಾವತಿ, ಸಿರ್ಸಿ ಮತ್ತು ಮಲೈ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಮಾತ್ರವೇ ಪ್ರಾಯೋಗಿಕ ಆರಂಭಿಸಲು ತೀರ್ಮಾನಿಸಲಾಗಿದೆ. ಅದರ ಸಾಧಕ, ಬಾಧಕ ನೋಡಿಕೊಂಡು ಎಲ್ಲೆಡೆ ವಿಭಾಗಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಇಲಾಖೆ ಮಾಹಿತಿ ನೀಡುವುದು.
ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸಹಾಯ
ಅರಣ್ಯ ಅಧಿಕಾರಿ ಸಿಬ್ಬಂದಿಯು ಇಲಾಖೆ ವ್ಯಾಪ್ತಿಯಡಿ ಅತಿಕ್ರಮ ನಿಭಾಯಿಸಲು, ಉಪಗ್ರಹ ಚಿತ್ರಣ, ಎಐ ಸಂಯೋಜನೆ, ತ್ವರಿತ ಎಫ್ಐಆರ್ ದಾಖಲಿಸುವುದು ಸೇರಿದಂತೆ ಕೆಲವು ಉಪಯೋಗಗಳಿಗಾಗಿ ನೂತನ ವಿಧಾನವನ್ನು ಪ್ರಾರಂಭಿಸಿದೆ. ಮರ ಕಡಿತ, ಪ್ರಾಣಿ, ಅರಣ್ಯ ಸಂರಕ್ಷಣೆಯ ವಿಷಯಗಳಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಈ ಗರುಡಾಕ್ಷಿ ಸಹಾಯಕ್ಕೆ ಬರಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications