ಕರ್ನಾಟಕ ಅರಣ್ಯ ಇಲಾಖೆ: 'ಗರುಡಾಕ್ಷಿ' ಆನ್ಲೈನ್ FIR ವ್ಯವಸ್ಥೆ ಆರಂಭ, ಏನಿದು?
ಬೆಂಗಳೂರು, ಜನವರಿ 06: ಪ್ರಾಣಿ ಸಂಕುಲ ಕಾಪಾಡಲು, ನಾಡನ್ನು ಸುರಕ್ಷಿತವಾಗಿಡಲು ಶ್ರಮಿಸುವ ಕರ್ನಾಟಕ ಅರಣ್ಯ ಇಲಾಖೆಗೆ ಮಹತ್ವದ ಹೆಜ್ಜೆ ಇಟ್ಟಿದೆ. ಇದೇ ಜನವರಿ 7 ರಂದು ವಿನೂತನವಾದ "ಗರುಡಾಕ್ಷಿ" ಆನ್ಲೈನ್ ಎಫ್ಐಆರ್ ವ್ಯವಸ್ಥೆಯನ್ನು ಪ್ರಾರಂಭಿಸಲು ಮುಂದಾಗಿದೆ. ಈ ಮೂಲಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ತೀರ್ಮಾನಿಸಿದೆ.
ಬೆಂಗಳೂರಿನ ವಿಧಾನಸೌಧದ ಸಭಾಂಗಣದಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ನಾಳೆ ಜನವರಿ 7 ರಂದು ಮಂಗಳವಾರ ವಿನೂತನ "ಗರುಡಾಕ್ಷಿ" ಆನ್ಲೈನ್ ಎಫ್ಐಆರ್ ವ್ಯವಸ್ಥೆ ಲೋಕಾರ್ಪಣೆ ಮಾಡಲಿದ್ದಾರೆ. ಆರಂಭಿಕ ಹಂತದಲ್ಲಿ ಇದನ್ನು ಪ್ರಾಯೋಗಿಕವಾಗಿ ನಿರ್ವಹಿಸಲು ತೀರ್ಮಾನಿಸಲಾಗಿದೆ ಎಂದು 'ಇಂಡಿಯಾ ಟುಡೆ' ವರದಿ ಮಾಡಿದೆ.

ಗರುಡಾಕ್ಷಿ: ಏನೆಲ್ಲ ಪ್ರಯೋಜನ
ರಾಜ್ಯದ ಅರಣ್ಯ ಹಾಗೂ ವನ್ಯಜೀವಿ ಕುರಿತು ಅಪರಾಧ ಚಟುವಟಿಕೆಯನ್ನು ಸರಳಗೊಳಿಸಲು, ಎಫ್ಐಆರ್ ದಾಖಲಾತಿಯನ್ನು ಡಿಜಿಟಲೀಕರಣಗೊಳಿಸಲು ಹಾಗೂ ಸರ್ಕಾರ ಅಪರಾಧವಾಗದಂತೆ ತಡೆಯಲು, ಜನರಿಗೆ ತ್ವರಿತವಾಗಿ ಎಫ್ಐಆರ್ ದಾಖಲಿಸಲು ಅನುಕೂಲವಾಗುವಂತೆ ಈ 'ಗರುಡಾಕ್ಷಿ' ಪೋರ್ಟಲ್ ಜಾರಿಗೆ ತರಲಾಗುವುದು.
ಅರಣ್ಯ ಅಪರಾಧಗಳಿಗೆ ಸಂಬಂಧಿಸಿದ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲು ಈ ಗರುಡಾಕ್ಷಿ ಆನ್ಲೈನ್ ವ್ಯವಸ್ಥೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೋರ್ಟಲ್ ಅಪರಾಧ ಎದುರಿಸಲು ಸರ್ಕಾರಕ್ಕೆ ಉತ್ತೇಜನ ನೀಡಲಿದೆ ಎಂದು ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ.

'ಗರುಡಾಕ್ಷಿ' ತಂತ್ರಾಂಶವನ್ನು ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ (WTI) ಸಹಯೋದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಇಡ ಅರಣ್ಯ ಅಪರಾಧ ಪ್ರಕರಣಗಳನ್ನು ಆನ್ಲೈನ್ನಲ್ಲಿ ನಿರ್ವಹಣೆ ಮಾಡಬಹುದಾಗಿದೆ. ಈ ತಂತ್ರಾಂಶದಿಂದ ಆನ್ಲೈನ್ ನಿರ್ವಹಣೆ ಮತ್ತಷ್ಟು ಸರಳವಾಗಲಿದೆ.
ಈ ಹಿಂದೆ ಸಚಿವ ಈಶ್ವರ್ ಖಂಡ್ರೆ ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಎಫ್ಐಆರ್ ಡಿಜಿಟಲ್ ಮಾಡಲು ಸೂಚನೆ, ಸಲನೆ ನೀಡಿದ್ದರು. ಅದರ ಭಾಗವಾಗಿ ಈ ಗರುಡಾಕ್ಷಿ ತಂತ್ರಾಂಶ ರೂಪಗೊಂಡು, ಇದೀಗ ಕಾರ್ಯಾರಂಭಿಸಲು ಸಿದ್ಧಗೊಂಡಿದೆ.
ಗರುಡಾಕ್ಷಿ ಹೊಸ ವ್ಯವಸ್ಥೆಯನ್ನು ಅರಣ್ಯ ಇಲಾಖೆಯ 05 ಅರಣ್ಯ ವಿಭಾಗಗಳಾದ ಬೆಂಗಳೂರು ನಗರ, ಬೆಂಗಳೂರು ಅರಣ್ಯ ಗಸ್ತು, ಭದ್ರಾವತಿ, ಸಿರ್ಸಿ ಮತ್ತು ಮಲೈ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಮಾತ್ರವೇ ಪ್ರಾಯೋಗಿಕ ಆರಂಭಿಸಲು ತೀರ್ಮಾನಿಸಲಾಗಿದೆ. ಅದರ ಸಾಧಕ, ಬಾಧಕ ನೋಡಿಕೊಂಡು ಎಲ್ಲೆಡೆ ವಿಭಾಗಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಇಲಾಖೆ ಮಾಹಿತಿ ನೀಡುವುದು.
ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸಹಾಯ
ಅರಣ್ಯ ಅಧಿಕಾರಿ ಸಿಬ್ಬಂದಿಯು ಇಲಾಖೆ ವ್ಯಾಪ್ತಿಯಡಿ ಅತಿಕ್ರಮ ನಿಭಾಯಿಸಲು, ಉಪಗ್ರಹ ಚಿತ್ರಣ, ಎಐ ಸಂಯೋಜನೆ, ತ್ವರಿತ ಎಫ್ಐಆರ್ ದಾಖಲಿಸುವುದು ಸೇರಿದಂತೆ ಕೆಲವು ಉಪಯೋಗಗಳಿಗಾಗಿ ನೂತನ ವಿಧಾನವನ್ನು ಪ್ರಾರಂಭಿಸಿದೆ. ಮರ ಕಡಿತ, ಪ್ರಾಣಿ, ಅರಣ್ಯ ಸಂರಕ್ಷಣೆಯ ವಿಷಯಗಳಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಈ ಗರುಡಾಕ್ಷಿ ಸಹಾಯಕ್ಕೆ ಬರಲಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications