Breaking: ಅರಣ್ಯ ಸಚಿವ ಉಮೇಶ್ ಕತ್ತಿ ವಿಧಿವಶ
ಬೆಂಗಳೂರು, ಸೆಪ್ಟೆಂಬರ್ 7: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.
Recommended Video

ಮಂಗಳವಾರ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್ ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರ ಬುಧವಾರದ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಗುರುವಾರ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ: ಬುಧವಾರ ಬೆಳಗ್ಗೆಯೇ ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ. ತದನಂತರ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
9 ಬಾರಿ ಸ್ಪರ್ಧಿಸಿ 8 ಬಾರಿ ಗೆದ್ದಿದ್ದ ಕತ್ತಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿದ್ದರು. 9 ಸಲ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದರು. 1985ರಲ್ಲಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿದ್ದಾರೆ.
ಬೆಳಗಾವಿಯ ಕೆಎಲ್ಇ ಸೊಸೈಟಿಯ ಲಿಂಗರಾಜ್ ಕಾಲೇಜಿನಲ್ಲಿ ಪಿಯುಸಿ ತನಕ ವ್ಯಾಸಂಗ ಮಾಡಿರುವ ಅವರು ಹುಕ್ಕೇರಿ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಜನತಾ ಪಕ್ಷದಿಂದ ಚುನಾವಣಾ ಕಣಕ್ಕಿಳಿದರು. ಮೊದಲ ಪ್ರಯತ್ನದಲ್ಲೇ ಗೆಲುವು ಕಂಡಿದ್ದರು.
1989ರಲ್ಲಿ ಜನತಾದಳಕ್ಕೆ ಬಂದು ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದರು. 1994ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸಿದರು. 1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ನಿಂದ ಸ್ಪರ್ಧಿಸಿ 4ನೇ ಬಾರಿಯೂ ಗೆದ್ದಿದ್ದರು. 2004ರಲ್ಲಿ ಕಾಂಗ್ರೆಸ್ಗೆ ಬಂದ ಉಮೇಶ್ ಕತ್ತಿ ಚುನಾವಣೆಯಲ್ಲಿ ಸೋಲು ಕಂಡರು.
2008ರಲ್ಲಿ ಜೆಡಿಎಸ್ ಸೇರಿದರು, ಗೆಲುವು ಕಂಡರು. ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದರು. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 6ನೇ ಗೆಲುವು ಸಾಧಿಸಿದರು. 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು.
ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಉಮೇಶ್ ಕತ್ತಿ ಅವರದ್ದು. 2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದರು, ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಿಕ್ಕಿತು. ಬಳಿಕ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದರು. ಅರಣ್ಯ ಇಲಾಖೆ ಖಾತೆ ಸಚಿವರಾಗಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications