S.M. Krishna: ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ...
ಕರ್ನಾಟಕದ ಮುಖ್ಯಮಂತ್ರಿ ಆಗಿ, ಕರ್ನಾಟಕ ರಾಜ್ಯದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನ ಮಾಡಿ. ಜಾಗತಿಕ ಮಟ್ಟದಲ್ಲಿ ಕನ್ನಡ ನಾಡು ಗುರುತಿಸಿಕೊಳ್ಳಲು ಕೊಡುಗೆ ನೀಡಿದ್ದ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ತುರ್ತು ನಿಗಾ ಘಟಕ ಅಂದ್ರೆ ಐಸಿಯು ಸೇರಿದ್ದಾರೆ. 92 ವರ್ಷ ವಯಸ್ಸಿನ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ಏನಾಯ್ತು? ಈಗ ಹೇಗಿದೆ ಅವರ ಆರೋಗ್ಯ? ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ? ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಕಾಂಗ್ರೆಸ್ ಪಕ್ಷದಿಂದ ಬೆಳೆದು ಬಂದಿದ್ದರೂ, ಕರ್ನಾಟಕದ ರಾಜಕೀಯ ಬದಲಾವಣೆ ಗಾಳಿಗೆ ಸಿಲುಕಿ ಕೆಲವು ವರ್ಷಗಳ ಹಿಂದಷ್ಟೇ ಬಿಜೆಪಿ ಸೇರಿದ್ದರು. ಬಿಜೆಪಿ ಪಕ್ಷದಲ್ಲಿ ಉನ್ನತ ಗೌರವ ಪಡೆದಿರುವ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು, ಕೇಂದ್ರ ನಾಯಕರಿಗೆ ಕೂಡ ಹತ್ತಿರವಾಗಿದ್ದಾರೆ. ಹೀಗಿದ್ದಾಗ ವಯೋ ಸಹಜ ಆರೋಗ್ಯ ಸಮಸ್ಯೆಗಳ ಕಾರಣ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಮತ್ತೆ ಐಸಿಯುಗೆ ಸೇರಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡಿದೆ. ಹಾಗಾದ್ರೆ ಈಗ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ಹೇಗಿದೆ? ಮುಂದೆ ಓದಿ.

ಇತ್ತೀಚಿಗೆ ಡಿಸ್ಚಾರ್ಜ್ ಆಗಿ ಬಂದಿದ್ದರು
4 ತಿಂಗಳಿಂದ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಅವರು ಐಸಿಯುಗೆ ಸೇರಿ ಚಿಕಿತ್ಸೆ ಪಡೆದು ಗುಣಮುಖರಾಗಿ, ಕಳೆದ ಬುಧವಾರ ಡಿಸ್ಚಾರ್ಜ್ ಆಗಿದ್ದರು. ಆದರೆ ಇದೀಗ ಮತ್ತೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಐಸಿಯು ಸೇರಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದು ಈ ಬಗ್ಗೆ ರಾಜಕೀಯ ನಾಯಕರು & ಬೆಂಬಲಿಗರು ಮಾಹಿತಿ ಪಡೆಯುತ್ತಿದ್ದಾರೆ. ಹಾಗೇ ಅಭಿಮಾನಿಗಳು ಮಾಜಿ ಸಿಎಂ ಆರೋಗ್ಯ ಸ್ಥಿತಿ ಬಗ್ಗೆ ಆತಂಕಗೊಂಡಿದ್ದು, ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications