ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್: ಸಿಎಂ
ಬೆಂಗಳೂರು, ಮೇ 20: ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಬಸ್ಪಾಸನ್ನು ಸಂಪೂರ್ಣ ಉಚಿತವಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ನಂತರ ಮಾಧ್ಯಮದವರೊಂದಿಗೆ ಸಿಎಂ ಬೊಮ್ಮಾಯಿ ಮಾತನಾಡಿದರು.
ಎಸ್.ಸಿ/ಎಸ್.ಪಿ / ಟಿ. ಎಸ್.ಪಿ ಯೋಜನೆಯಡಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಿಕ್ಷಣ, ಆರೋಗ್ಯ, ಅಪೌಷ್ಟಿಕತೆ, ಮಹಿಳೆಯರ ಕಾರ್ಯಕ್ರಮಗಳು, ವಿದ್ಯಾರ್ಥಿನಿಲಯಗಳ ಕ್ಲಸ್ಟರ್ ಯೋಜನೆಗಳಿಗೆ ಆಗಸ್ಟ್ 15 ರೊಳಗೆ ಚಾಲನೆ ನೀಡಲು ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕು. ಶಾಸನಬದ್ಧವಾಗಿ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳಿಗೆ ನಿಗದಿಯಾಗಿರುವ ಅನುದಾನವನ್ನು ಈ ಸಮುದಾಯಗಳ ಅಭಿವೃದ್ಧಿಗೆಂದೇ ವೆಚ್ಚವಾಗಬೇಕು ಎಂದರು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅನುದಾನವನ್ನು ನೀಡುವುದಲ್ಲದೆ, ನಿಗಮ ಮಂಡಳಿಗಳಿಗೂ ಅನುದಾನವನ್ನು ಒದಗಿಸಲಾಗಿದೆ. ಅದನ್ನೂ ಹೆಚ್ಚಿಸಬೇಕೆಂದು ಎಲ್ಲರ ಅಭಿಪ್ರಾಯವಿದೆ. ಒಂದು ವಾರದಲ್ಲಿ ಅನುದಾನ ಹೆಚ್ಚಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

28000 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನಲ್ಲಿ 28000 ಕೋಟಿ ರೂ.ಗಳನ್ನು ನೀಡಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಗೆ 500 ಕೋಟಿ ರೂ.ಗಳನ್ನು ಹೆಚ್ಚಿಗೆ ನೀಡಲಾಗಿದೆ. ಕೃಷಿ ಇಲಾಖೆಗೆ 851 ಕೋಟಿ ರೂ.ಗಳಿದ್ದ ಅನುದಾನವನ್ನು 1061 ಕೋಟಿ ರೂ.ಗಳಿಗೆ ಏರಿಸಲಾಗಿದೆ. ತೋಟಗಾರಿಕೆ ಇಲಾಖೆಗೆ 142 ಕೋಟಿಗಳಿದ್ದ ಅನುದಾನವನ್ನು 187 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಆರೋಗ್ಯ ಇಲಾಖೆಗೆ 899 ಕೋಟಿ ರೂ.ಗಳನ್ನು ಕಳೆದ ವರ್ಷ ನೀಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 1,300 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು. ಸಹಕಾರ ಇಲಾಖೆಯಲ್ಲಿ sc st ಸಮುದಾಯದ ಜನರಿಗೆ ಸದಸ್ಯತ್ವ ನೀಡಲು 203 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಪಿಂಚಣಿಗಳ ಮೊತ್ತ ಹೆಚ್ಚಳ ಮಾಡಿದ್ದು, ಕಳೆದ ವರ್ಷ 2,900 ಕೋಟಿ ರೂ.ಗಳಿದ್ದ ಅನುದಾನವನ್ನು ಈ ಬಾರಿ 3,748 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಕೌಶಲ್ಯಾಭಿವೃದ್ಧಿಗೆ 180 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ 9,000 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಓಡಾಡಿದ ಸ್ಥಳಗಳ ಅಭಿವೃದ್ಧಿಗೆ ಹಣ
ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕರ್ನಾಟದಲ್ಲಿ ಪ್ರವಾಸ ಮಾಡಿದ್ದ ಸ್ಥಳಗಳ ಅಭಿವೃದ್ಧಿಗೆ ಒಟ್ಟು 20 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಮಲೆನಾಡು ಅಭಿವೃದ್ಧಿ ಮಂಡಳಿ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿಯ ಶಾಸಕರಿಗೆ ಒಂದು ಕೋಟಿ ರೂ.ಗಳನ್ನು ನೀಡಲಾಗುವುದು. ಹಿಂದಿನ ಸರ್ಕಾರ ಅನುದಾನ ಒದಗಿಸುವುದಾಗಿ ಘೋಷಣೆ ಮಾಡಿತ್ತು. ಅನುದಾನ ಒದಗಿಸಿ ಕ್ರಿಯಾ ಯೋಜನೆ ರೂಪಿಸಲು ಅನುಮತಿ ನೀಡಲಾಗಿದೆ ಎಂದರು.

ಅಗಸ್ಟ್ ಅಂತ್ಯದೊಳಗೆ ಅನುಷ್ಠಾನ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅಗಸ್ಟ್ ತಿಂಗಳ ಅಂತ್ಯದೊಳಗಾಗಿ ಕಡ್ಡಾಯವಾಗಿ ಅನುಷ್ಠಾನಗೊಳಿಸಿ. ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಶಾಸನಬದ್ದ ಅನುದಾನ ಆ ಸಮುದಾಯಗಳಿಗೆ ಮಾತ್ರ ಬಳಕೆಯಾಗಬೇಕು. ಇವು ಇಂದು ನಡೆದ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷರ್ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನೀಡಿದ ಸೂಚನೆಗಳು.

1600 ಕೋಟಿ ರೂ. ವಿನಿಯೋಗಿಸಲು ಸೂಚನೆ
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ನಿಗಮ ಮಂಡಳಿಗಳ ಬ್ಯಾಂಕ್ ಖಾತೆಯಲ್ಲಿರುವ 1600 ಕೋಟಿ ರೂ.ಗಳನ್ನು ಮುಂದಿನ ಮೂರು ತಿಂಗಳಲ್ಲಿ (ಗಂಗಾ ಕಲ್ಯಾಣ ಯೋಜನೆ ಹೊರತು ಪಡಿಸಿ) ಎಸ್.ಸಿ.ಎಸ್.ಪಿ ಯೋಜನೆಗಳಿಗೆ ವಿನಿಯೋಗಿಸಬೇಕು. ತಪ್ಪಿದಲ್ಲಿ ಈ ಮೊತ್ತವನ್ನು ಈ ಸಾಲಿನ ಕಾರ್ಯಕ್ರಮಗಳಿಗೆ ಮರುಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.

ಲಾಪ್ಟಾಪ್ ವಿತರಣೆಗೆ ಆದ್ಯತೆ
* ಎಸ್.ಸಿ/ಎಸ್.ಪಿ / ಟಿ. ಎಸ್.ಪಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ನೀಡಲು ಹೆಚ್ವಿನ ಆದ್ಯತೆ ನೀಡುವುದು
* ಉನ್ನತ ಶಿಕ್ಷಣ ಇಲಾಖೆಯಡಿ ಫೆಲೋಶಿಪ್ / ಲಾಪ್ ಟಾಪ್ ವಿತರಣೆಗೆ ಆದ್ಯತೆ ನೀಡುವುದು
* ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯೋಜನೆಗಳಡಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅತಿ ಹೆಚ್ಚಿನ ಆದ್ಯತೆ ನೀಡುವುದು.
* ಇಂದಿನ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಣಯಗಳಿಗೆ ಆದೇಶ ಹೊರಡಿಸುವುದು ಹಾಗೂ ಆಗಸ್ಟ್ 15 ರೊಳಗೆ ಎಲ್ಲಾ ವೈಯಕ್ತಿಕ ಯೋಜನೆಗಳಿಗೆ ಚಾಲನೆ ನೀಡುವುದು.
*ಸಮಾಜ ಕಲ್ಯಾಣ ಇಲಾಖೆಯು ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ತಲುಪುತ್ತಿರುವ ಬಗ್ಗೆ ಮೇಲ್ವಿಚಾರಣೆ ಮಾಡುವುದು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications