Gruha Jyoti Scheme: ಗೃಹ ಜ್ಯೋತಿ ಯೋಜನೆಯಡಿ ದೇವಾಲಯಗಳಿಗೆ ಉಚಿತ ವಿದ್ಯುತ್- ರಾಜ್ಯ ಸರ್ಕಾರದ ಮಹತ್ವದ ಭರವಸೆ
ಬೆಂಗಳೂರು, ಅಕ್ಟೋಬರ್ 26: ಪ್ರತಿ ಮನೆಗೆ 200 ಯೂನಿಟ್ಗಳ ವರೆಗೆ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆ ದೇವಾಲಯಗಳಿಗೂ ವಿಸ್ತರಿಸಲಿದೆ. ಗೃಹ ಜ್ಯೋತಿ ಯೋಜನೆ ಅಡಿ ದೇವಾಲಯಗಳಿಗೆ ಉಚಿತ ವಿದ್ಯುತ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಯು ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

'ನಾವು ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮುಂದೆ ಅನುಮೋದನೆಗಾಗಿ ಶೀಘ್ರದಲ್ಲೇ ಸಲ್ಲಿಸುತ್ತೇವೆ' ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿರುವ 'ಸಿ' ವರ್ಗದ ದೇವಸ್ಥಾನಗಳಿಗೆ ಈ ಯೋಜನೆ ಅನ್ವಯವಾಗಲಿದೆ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಜ್ಯದಲ್ಲಿನ ದೇವಾಲಯಗಳನ್ನು ಅವು ಉತ್ಪಾದಿಸುವ ವಾರ್ಷಿಕ ಆದಾಯದ ಆಧಾರದ ಮೇಲೆ ವರ್ಗೀಕರಿಸಲಾಗಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಇಲಾಖೆಯ ಅಡಿಯಲ್ಲಿ 34,563 ದೇವಾಲಯಗಳಿವೆ. ಇವುಗಳಲ್ಲಿ, ಸುಮಾರು 99 ಪ್ರತಿಶತ ( 34,223 ದೇವಾಲಯಗಳು ) ವರ್ಗ 'ಸಿ' ಅಡಿಯಲ್ಲಿ ಬರುತ್ತವೆ.
201 ಪ್ರವರ್ಗ 'ಎ' ದೇವಸ್ಥಾನಗಳಿದ್ದು, ಇವುಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದೆ. 139 ಕೆಟಗರಿಯ 'ಬಿ' ದೇವಸ್ಥಾನಗಳು 5 ಲಕ್ಷದಿಂದ 25 ಲಕ್ಷ ರೂಪಾಯಿಗಳ ವರೆಗೆ ಆದಾಯ ಗಳಿಸುತ್ತವೆ. ಉಳಿದ ದೇವಸ್ಥಾನಗಳಲ್ಲಿ 5 ಲಕ್ಷಕ್ಕಿಂತ ಕಡಿಮೆ ಆದಾಯವಿದೆ.
'ಸಿ' ವರ್ಗದ ದೇವಸ್ಥಾನಗಳಿಗೆ ಉಚಿತ ವಿದ್ಯುತ್ ನೀಡುವ ಪ್ರಸ್ತಾವನೆಯು ಹೆಚ್ಚು ಉಪಯುಕ್ತವಾಗಿದೆ. ಇದು ಸಾಕಷ್ಟು ಆದಾಯವನ್ನು ಗಳಿಸದ ದೇವಸ್ಥಾನಗಳಲ್ಲಿ ಮೂಲ ಸೌಕರ್ಯಗಳನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.
20 ರಷ್ಟು ಪ್ರವರ್ಗ 'ಎ' ದೇವಸ್ಥಾನದ ಆದಾಯವನ್ನು 'ಸಿ' ವರ್ಗದ ದೇವಸ್ಥಾನಗಳೊಂದಿಗೆ ಹಂಚಿಕೊಳ್ಳುವ ಪ್ರಸ್ತಾಪವಿತ್ತು. ಆದರೆ, ಅದು ಈ ವರೆಗೂ ಕೈಗೂಡಿಲ್ಲ. ಗೃಹ ಜ್ಯೋತಿ ಯೋಜನೆಯು ರಾಜ್ಯದ ವಿವಿಧ ಭಾಗಗಳಲ್ಲಿರುವ ಸಣ್ಣ ದೇವಾಲಯಗಳಿಗೆ ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ.
ಗೃಹ ಜ್ಯೋತಿ ಯೋಜನೆಯು ಕಾಂಗ್ರೆಸ್ನ ಐದು ಭರವಸೆಗಳಲ್ಲಿ ಒಂದಾಗಿದೆ. ಇದನ್ನು ಕರ್ನಾಟಕದಲ್ಲಿ ಆಗಸ್ಟ್ 5 ರಂದು ಪ್ರಾರಂಭಿಸಲಾಯಿತು. ಇದು ರಾಜ್ಯದ ಸುಮಾರು ಎರಡು ಕೋಟಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸರ್ಕಾರ ತಿಳಿಸಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications