ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್
ಬೆಂಗಳೂರು: 2009ರಲ್ಲಿ ಕನ್ನಡಿಗರಿಗಾಗಿ ಮುಕ್ತ ಮಾಹಿತಿ ಒದಗಿಸುವ ಸದುದ್ದೇಶದಿಂದ ಆರಂಭವಾಗಿದ್ದ ಹೆಮ್ಮೆಯ ಜ್ಞಾನಭಂಡಾರ 'ಕಣಜ' (www.kanaja.karnataka.gov.in) ಜಾಲತಾಣ ಇದೀಗ ಸರ್ಕಾರದ ನಿರ್ಲಕ್ಷ್ಯಕ್ಕೆ ಬಲಿಯಾಗುವ ಹಂತ ತಲುಪಿದೆ. ಕಳೆದ ಮೂರು ತಿಂಗಳುಗಳಿಂದ ಈ ವೆಬ್ಸೈಟ್ ಕಾರ್ಯನಿರ್ವಹಿಸುತ್ತಿಲ್ಲ. ಕೇವಲ ಒಂದು ಸಾಮಾನ್ಯ 'ಎಸ್ಎಸ್ಎಲ್ ಸರ್ಟಿಫಿಕೇಟ್' ನವೀಕರಣ ಮಾಡದ ಸಣ್ಣ ತಾಂತ್ರಿಕ ಕಾರಣಕ್ಕಾಗಿ ಇಡೀ ಜಾಲತಾಣವೇ ಅಂತರ್ಜಾಲದಿಂದ ಕಣ್ಮರೆಯಾಗಿದೆ. ಇದು ಕನ್ನಡಿಗರ ಹಾಗೂ ಭಾಷಾಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಕಣಜ ಜಾಲತಾಣದ ಉಸ್ತುವಾರಿ ವಹಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಭಾಷೆಯ ಅನುಷ್ಠಾನದ ಪ್ರಧಾನ ಹೊಣೆ ಹೊತ್ತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ಕನಿಷ್ಠ ಕಾಳಜಿಯನ್ನೂ ತೋರಿಲ್ಲ. ಕೋಟ್ಯಂತರ ರೂಪಾಯಿಗಳನ್ನು ವಿವಿಧ ಕಾರ್ಯಕ್ರಮಗಳಿಗೆ ಸುರಿಯುವ ಸರ್ಕಾರ, ನಾಡಿನ ಜ್ಞಾನ ಸಂಪತ್ತನ್ನು ಡಿಜಿಟಲ್ ರೂಪದಲ್ಲಿ ಉಳಿಸುವ ಇಂಥದ್ದೊಂದು ಮಹತ್ವದ ತಾಣದ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ವಹಿಸಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಕಣಜದ ಮಾಜಿ ಸಮನ್ವಯಕಾರ ಹಾಗೂ ಮುಖ್ಯಮಂತ್ರಿಯವರ ಇ-ಆಡಳಿತ ವಿಭಾಗದ ಮಾಜಿ ಸಲಹೆಗಾರರಾದ ಬೇಳೂರು ಸುದರ್ಶನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೇಳೂರು ಸುದರ್ಶನ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದು, ಸರ್ಕಾರದ ಕಣ್ಣು ತೆರೆಸುವ ಪ್ರಯತ್ನ ಮಾಡಿದ್ದಾರೆ. 2010ರಲ್ಲಿ ಕಣಜ ಜಾಲತಾಣದ ಸಮನ್ವಯಕಾರನಾಗಿ ಅದನ್ನು ಅಭಿವೃದ್ಧಿಪಡಿಸಿದ ಹೆಮ್ಮೆ ಅವರಿಗಿದೆ. ನಂತರ 2019-23ರ ಅವಧಿಯಲ್ಲಿ ಮುಖ್ಯಮಂತ್ರಿಯವರ ಇ-ಆಡಳಿತ ಸಲಹೆಗಾರರಾಗಿದ್ದಾಗ ಕಣಜ ಜಾಲತಾಣವನ್ನು ಸರ್ಕಾರದ ಅಧಿಕೃತ ಸರ್ವರ್ ಮತ್ತು ಡೊಮೈನ್ಗೆ ತಂದು ಭದ್ರಪಡಿಸಿದ್ದರು. ಕೋವಿಡ್ ಲಾಕ್ಡೌನ್ನಂತಹ ಕಷ್ಟದ ದಿನಗಳಲ್ಲೂ ಅವರು ಕಣಜಕ್ಕಾಗಿ ಹಗಲಿರುಳು ಶ್ರಮಿಸಿದ್ದರು. ಆ ಶ್ರಮದ ಫಲವಾಗಿ ಸಾವಿರಾರು ಪುಟಗಳ ಮಾಹಿತಿ ಕಣಜ ಸೇರಿತ್ತು.
"ಕೋವಿಡ್ ಲಾಕ್ಡೌನ್ ಸಮಯದಲ್ಲಿ ಕಣಜದಲ್ಲಿದ್ದ 800ಕ್ಕೂ ಹೆಚ್ಚು ಅಮೂಲ್ಯ ಪುಸ್ತಕಗಳ ಸುಮಾರು 1.68 ಲಕ್ಷ ಪುಟಗಳನ್ನು ನಾನೊಬ್ಬನೇ ಕುಳಿತು ಓಸಿಆರ್ (OCR) ತಂತ್ರಜ್ಞಾನದ ಮೂಲಕ ಅಕ್ಷರ ರೂಪಕ್ಕೆ ಇಳಿಸಿ ಕಣಜಕ್ಕೆ ಕಳಿಸಿಕೊಟ್ಟಿದ್ದೆ. ಕೇವಲ ಡಿಟಿಪಿ (DTP) ಲೆಕ್ಕಾಚಾರ ಹಾಕಿದರೂ ಅದರ ಮೌಲ್ಯ ಕನಿಷ್ಠ 50 ಲಕ್ಷ ರೂಪಾಯಿಗಳಾಗುತ್ತದೆ. ಅಷ್ಟು ಕಷ್ಟಪಟ್ಟು ನೀಡಿದ ಆ ಡಿಜಿಟಲ್ ಕಡತಗಳು ಈಗ ಏನಾಗಿವೆಯೋ ಆ ತಾಯಿ ಭುವನೇಶ್ವರಿಗೇ ಗೊತ್ತು" ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಮುಕ್ತ ಜ್ಞಾನದ ತಾಣವಾಗಬೇಕಿದ್ದ ಕಣಜ, ಇದೀಗ ಶಾಶ್ವತವಾಗಿ 'ಮುಕ್ತಿ' ಹೊಂದುವ ಹಾದಿಯಲ್ಲಿದೆ ಎಂದು ಅವರು ಎಚ್ಚರಿಸಿದ್ದಾರೆ. ತಮಗೆ ಅಧಿಕೃತ ಜವಾಬ್ದಾರಿ ಇಲ್ಲದಿದ್ದಾಗಲೂ ಕಣಜದಲ್ಲಿ ದೋಷಗಳು ಕಂಡುಬಂದಾಗ ಸಾರ್ವಜನಿಕರು ತಮ್ಮನ್ನೇ ಕೇಳುತ್ತಿದ್ದರು. ಆಗಲೂ ಬೇಸರಿಸಿಕೊಳ್ಳದೆ ವೆಬ್ಸೈಟ್ ಉಳಿವಿಗೆ ಶ್ರಮಿಸಿದ್ದಾಗಿ ಅವರು ನೆನಪಿಸಿಕೊಂಡಿದ್ದಾರೆ. ಆದರೆ ಈ ಬಾರಿ ವೆಬ್ಸೈಟ್ ಸಂಪೂರ್ಣವಾಗಿ ಕೊನೆಯುಸಿರೆಳೆಯುವ ಲಕ್ಷಣಗಳು ದಟ್ಟವಾಗಿ ಕಾಣುತ್ತಿವೆ.
ಇನ್ನಾದರೂ ಸಂಬಂಧಪಟ್ಟ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು, ತಕ್ಷಣವೇ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಕಣಜ ಜಾಲತಾಣಕ್ಕೆ ಮರುಜೀವ ನೀಡಬೇಕಿದೆ. ಕನ್ನಡಿಗರ ಈ ಜ್ಞಾನನಿಧಿಯನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಒಕ್ಕೊರಲಿನಿಂದ ಸರ್ಕಾರದ ಮೇಲೆ ಒತ್ತಡ ತರಬೇಕಾದ ತುರ್ತು ಅಗತ್ಯವಿದೆ ಎಂದು ಬೇಳೂರು ಸುದರ್ಶನ ಕರೆ ನೀಡಿದ್ದಾರೆ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ














Click it and Unblock the Notifications