SSLC - PUC Exam 2026: ಪಿಯು ವಿದ್ಯಾರ್ಥಿಗಳಿಗೂ ಸಿಹಿಸುದ್ದಿ ಕೊಟ್ಟ ಶಿಕ್ಷಣ ಮಂಡಳಿ
ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳ ತಯಾರಿ, ವೇಳಾಪಟ್ಟಿ ಬಿಡುಗಡೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಮಧ್ಯೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.
2025-26 ರಿಂದ ಸಿಬಿಎಸ್ಇ ಮಾರ್ಗಸೂಚಿಗಳ ಪ್ರಕಾರ ಪರೀಕ್ಷೆ ಎದುರಿಸುವ ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಗುಡ್ ನ್ಯೂಸ್ ಇದಾಗಿದೆ. ಪರೀಕ್ಷೆಗಳಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಿದ್ದ ಕಂಪ್ಯೂಟರ್ ಬಳಕೆಯ ವಿಶೇಷ ಸೌಲಭ್ಯವನ್ನು ದ್ವಿತೀಯ ಪಿಯುಸಿ ದೃಷ್ಟಿಹೀನ ವಿದ್ಯಾರ್ಥಿಗಳಿಗೂ ವಿಸ್ತರಣೆಗೆ ನಿರ್ಧರಿಸಲಾಗಿದೆ. ಇವರು ಸಹ ಪರೀಕ್ಷೆಗಳಲ್ಲಿ ಕಂಪ್ಯೂಟರ್ಗಳನ್ನು ಬಳಸಬಹುದಾಗಿದೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ (2024-25) ಎಸ್ಎಸ್ಎಲ್ಸಿಯ ದೃಷ್ಟಿಹೀನ ಹೊಂದಿರುವ ವಿದ್ಯಾರ್ಥಿಗಳಿಗೆ ಬರಹಗಾರರ ಬದಲಿಗೆ ಲ್ಯಾಪ್ಟಾಪ್ಗಳನ್ನು ಬಳಸಲು ಅವಕಾಶ ನೀಡಲಾಗಿತ್ತು. ಆ ವರ್ಷ ಸುಮಾರು 25 ವಿದ್ಯಾರ್ಥಿಗಳು ಈ ಕಂಪ್ಯೂಟರ್ ಬಳಸಿ ಪರೀಕ್ಷೆ ಎದುರಿಸಿದ್ದರು. ಇದೀಗ ಆ ಸೌಲಭ್ಯವನ್ನು ದ್ವಿತೀಯ ಪಿಯು ಅರ್ಹ ವಿದ್ಯಾರ್ಥಿಗಳು ಪಡೆಯಲಿದ್ದಾರೆ. ಈ ನಿರ್ಧಾರವನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ವಾಗತಿಸಿದ್ದಾರೆ.
ಹೇಗಿರುತ್ತೆ ಪರೀಕ್ಷೆಗಳಲ್ಲಿ ಲ್ಯಾಪ್ಟಾಪ್ ಬಳಕೆ
ಮಂಡಳಿ ತಿಳಿಸಿರುವ ಪ್ರಕಾರ, ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ತಮ್ಮದೇ ಆದ ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ತರಬೇಕು. ಅದನ್ನು ಸರಿಯಾಗಿ ಫಾರ್ಮ್ಯಾಟ್ ಮಾಡಿಸಲಾಗುತ್ತದೆ. ಅದರಲ್ಲಿ ಇಂಟರ್ನೆಟ್ ಸಂಪರ್ಕ ಇರದಂತೆ ನೋಡಿಕೊಳ್ಳಲಾಗುತ್ತದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮತ್ತು ಕಂಪ್ಯೂಟರ್-ಸಾಕ್ಷರ ಉಪನ್ಯಾಸಕರು ಆ ಮಕ್ಕಳ ಕಂಪ್ಯೂಟರ್ ಪರಿಶೀಲಿಸುತ್ತಾರೆ.
ಈ ವಿಶೇಷ ವಿದ್ಯಾರ್ಥಿಗಳು ಪ್ರತ್ಯೇಕ ಪರೀಕ್ಷಾ ಕೊಠಡಿಗಳಲ್ಲಿ ಇಡಲಾಗುತ್ತದೆ. ಈಗಾಗಲೇ ರಾಷ್ಟ್ರೀಯ ಅಂಧರ ಸಂಘ (NAB) ಅನುಮೋದಿಸಿದ ತಂತ್ರಾಂಶದ ಸಹಾಯದಿಂದ ಉತ್ತರಗಳನ್ನು ಟೈಪ್ ಮಾಡುತ್ತಾರೆ. ಅವರಿರುವ ಕೊಠಡಿಯಲ್ಲಿ ಪ್ರಶ್ನೆಗಳನ್ನು ಗಟ್ಟಿಯಾಗಿ ಒಬ್ಬರು ಓದುತ್ತಾರೆ. ಪರೀಕ್ಷಾರ್ಥಿಯು ತಾನು ಕೇಳಿದ ಪ್ರಶ್ನೆಗಳಿಗೆ ಗೊತ್ತಿರುವ ಉತ್ತರಗಳನ್ನು ಕಂಪ್ಯೂಟರ್ನಲ್ಲಿ ಟೈಪ್ ಮಾಡುತ್ತಾನೆ. ಕಳೆದ ಬಾರಿ ಎಸ್ಎಸ್ಎಲ್ಸಿ ಅಂಧ ಮಕ್ಕಳಂತೆ ಈ ಭಾರಿ ಪಿಯು ಮಕ್ಕಳು ಉತ್ತರಗಳನ್ನು ಕಂಪ್ಯೂಟರ್ನಲ್ಲಿ ದಾಖಲಿಸಲಿದ್ದಾರೆ.
ಅಧೀಕ್ಷಕರ ಸಹಿ ಮತ್ತು ಸೀಲ್ ಕಡ್ಡಾಯ
ಪರೀಕ್ಷೆ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳು ಉತ್ತರಗಳನ್ನು ಪುಟ ಸಂಖ್ಯೆಗಳೊಂದಿಗೆ ಸರಳ ಕಾಗದದ ಮೇಲೆ ಮುದ್ರಿಸಬೇಕಾಗುತ್ತದೆ. ಆ ಪುಟಗಳಲ್ಲಿ ಕೊನೆಯ ಪುಟದಲ್ಲಿ ಕೇಂದ್ರದ ಮುಖ್ಯ ಅಧೀಕ್ಷಕರ ಸಹಿ ಮತ್ತು ಸೀಲ್ ಹಾಕಿರುತ್ತಾರೆ.
ಕೊಠಡಿ ಮೇಲ್ವಿಚಾರಕರು ಉತ್ತರ ಪುಸ್ತಕದ ಹಿಂಭಾಗದಲ್ಲಿ ವಿದ್ಯಾರ್ಥಿ ದೃಷ್ಟಿಹೀನ ಎಂದು ಬರೆಯವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಶಿಕ್ಷಣ ಮಂಡಳಿಯು ದ್ವಿತೀಯ ಪಿಯುಸಿ ದೃಷ್ಟಿಹೀನ ಮಕ್ಕಳಿಗೆ ಬೆಳಕಾಗಿದೆ.
ತಾಂತ್ರಿಕ ಸಮಸ್ಯೆ ಉಂಟಾದರೆ ಮುಂದೇನು?
ಇನ್ನೂ ಕಂಪ್ಯೂಟರ್ಗಳಲ್ಲಿ ಉತ್ತರಗಳನ್ನು ಬರೆಸಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲು ವೈದ್ಯಕೀಯ ಪ್ರಮಾಣಪತ್ರವನ್ನು ಒದಗಿಸಿ ಸಂಬಂಧಿಸಿ ಜಿಲ್ಲಾ ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪೂರ್ವ-ವಿಶ್ವವಿದ್ಯಾಲಯ) ಅವರಿಂದ ಅನುಮತಿ ಪಡೆಯಬೇಕು. ಪರೀಕ್ಷೆ ವೇಳೆ ತಾಂತ್ರಿಕ ಸಮಸ್ಯೆ ಉಂಟಾಗಿ ಕಂಪ್ಯೂಟರ್ನಲ್ಲಿ ಪರೀಕ್ಷೆ ಬರೆಯಲು ಆಗದೇ ಇದ್ದರೆ, ಲಾಗಿನ್ ಸಮಸ್ಯೆ ಆದರೆ, ಪರೀಕ್ಷಾರ್ಥಿ ನೀಡಿದ ಉತ್ತರಗಳನ್ನು ಬರಹಗಾರರು ಬರೆಯಲು ಸಹ ಅವಕಾಶ ನೀಡಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ನಿರ್ಧಾರಕ್ಕೆ ಬರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಂತಹ ವಿದ್ಯಾರ್ಥಿಗಳು ತಾವು ಪರೀಕ್ಷೆ ಬರೆಯುವಾಗ ಸೂಕ್ತ ಬರಹಗಾರರನ್ನು ಹುಡುಕುವುದು ಸಮಸ್ಯೆ ಆಗುತಿತ್ತು. ಇದರಿಂದ ಒಂದಷ್ಟು ಮಂದಿಗೆ ಬರಹಗಾರರು ಸಿಗದೇ ಸಮಸ್ಯೆ ಆಗುತ್ತಿತ್ತು. ಈ ಎಲ್ಲ ಸಮಸ್ಯೆಗಳಿಗೆ ಮಂಡಳಿಯ ನಿರ್ಧಾರ ಪರಿಹಾರ ಒದಗಿಸಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications