ಕರ್ನಾಟಕದ ಮೊದಲ ಚರ್ಮ ಬ್ಯಾಂಕ್ ಉದ್ಘಾಟನೆ
ಬೆಂಗಳೂರು, ಮಾರ್ಚ್ 30 : ಕರ್ನಾಟಕದ ಮೊದಲ ಚರ್ಮ ಬ್ಯಾಂಕ್ ಉದ್ಘಾಟನೆಗೊಂಡಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಅವರಣದಲ್ಲಿ ಸುಮಾರು 60 ಲಕ್ಷ ರೂ.ಗಳ ವೆಚ್ಚದಲ್ಲಿ ಚರ್ಮ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ.
ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು, ಚರ್ಮ ಬ್ಯಾಂಕ್ ಉದ್ಘಾಟನೆ ಮಾಡಿದರು. ಬೆಂಗಳೂರು ವೈದ್ಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್ಐ)ಯು ರೋಟರಿ ಕ್ಲಬ್ ಮತ್ತು ಆರ್ಶೀವಾದ್ ಸ್ಪೈಸ್ ಅವರೊಂದಿಗೆ ಒಪ್ಪಂದ ಮಾಡಿಕೊಂಡು ಚರ್ಮ ಬ್ಯಾಂಕ್ ಆರಂಭಿಸಿದೆ. [ಚರ್ಮದಾನ ಅಭಿಯಾನಕ್ಕೆ ನಟ ಪ್ರೇಮ್ ರಿಂದ ಚಾಲನೆ]

ಇದು ರಾಜ್ಯದ ಮೊದಲ ಮತ್ತು ದೇಶದ ಮೂರನೇ ಚರ್ಮ ಬ್ಯಾಂಕ್ ಆಗಿದೆ. ಶೇ 25 ರಿಂದ 30ರಷ್ಟು ಸುಟ್ಟ ಗಾಯಗಳಾದಾಗ ರೋಗಿಯ ದೇಹದ ಇತರ ಭಾಗದಿಂದ ಚರ್ಮವನ್ನು ತೆಗೆದು ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಆದರೆ, ಶೇ 30ಕ್ಕಿಂತ ಹೆಚ್ಚು ಸುಟ್ಟಗಾಯಗಳಾಗಿದ್ದರೆ ಚರ್ಮ ಬ್ಯಾಂಕ್ಗಳಲ್ಲಿ ಸಂಗ್ರಹಿಸಿದ ಚರ್ಮವನ್ನು ಬಳಸಬಹುದಾಗಿದೆ. [ಬೆಂಗಳೂರಲ್ಲಿ ಹೃದಯ ಸಂಬಂಧಿ 3 ವಿಶೇಷ ಘಟಕ ಸ್ಥಾಪನೆ]
ಏನಿದು ಚರ್ಮ ಬ್ಯಾಂಕ್? : ಮೃತಪಟ್ಟ ವ್ಯಕ್ತಿಯ ಚರ್ಮವನ್ನು 6 ಗಂಟೆಗಳಲ್ಲಿ ಪಡೆದು ಬ್ಯಾಂಕ್ಗಳಲ್ಲಿ ಸಂರಕ್ಷಿಸಿ ಇಡಬೇಕು. ಚರ್ಮವನ್ನು ದಾನ ಪಡೆಯುವ ಮೊದಲು ಎಚ್ಐವಿ, ಅಲರ್ಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಚರ್ಮ ರೋಗ ಕಂಡುಬಂದರೆ ಅವರ ಚರ್ಮವನ್ನು ದಾನ ಪಡೆಯಲಾಗುವುದಿಲ್ಲ.
ದಾನವಾಗಿ ಪಡೆದ ಚರ್ಮವನ್ನು ರಕ್ತ ಸಂಗ್ರಹಣೆ ಮಾಡುವಂತೆ ಕೋಲ್ಡ್ ಸ್ಟೋರೇಜ್ಗಳಲ್ಲಿ ಸಂಗ್ರಹಣೆ ಮಾಡಲಾಗುತ್ತದೆ. ನಾನಾ ಅವಘಡಗಳಿಂದ ದೇಹವನ್ನು ಸುಟ್ಟುಕೊಂಡ ರೋಗಿಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡುವಾಗ ಇವುಗಳನ್ನು ಬಳಸಿಕೊಳ್ಳಲಾಗುತ್ತದೆ.

ಯಾರು ಚರ್ಮದಾನ ಮಾಡಬಹುದು? : ಬೆಂಗಳೂರು ನಗರದಲ್ಲಿ ಈಗಾಗಲೇ ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಗಳ ಅಂಗಾಂಗಗಳನ್ನು ದಾನ ಮಾಡಲಾಗುತ್ತಿದೆ. ಹೀಗೆ ಅಂಗಾಂಗ ದಾನ ಮಾಡುವಂತೆ ಚರ್ಮ ದಾನಕ್ಕೂ ಮೊದಲು ಹೆಸರು ನೋಂದಣಿ ಮಾಡಬೇಕು. [ಕುಡ್ಲದಲ್ಲಿ ಮಿಡಿದ ಜೀವಂತ ಹೃದಯ ಬೆಂಗಳೂರಿಗೆ]
ಕುಟುಂಬದವರು ಒಪ್ಪಿಗೆ ಕೊಟ್ಟರೆ ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಯಿಂದ ಚರ್ಮವನ್ನು ದಾನವಾಗಿ ಪಡೆಯಲಾಗುತ್ತದೆ. ಜೀವಂತ ಇರುವ ವ್ಯಕ್ತಿಯು ತಮ್ಮ ಸಂಬಂಧಿಗಳಿಗೆ ತೊಡೆ ಭಾಗದ ಚರ್ಮವನ್ನು ದಾನ ಮಾಡಬಹುದು. ಆ ಜಾಗದಲ್ಲಿ 3 ರಿಂದ 4ವಾರಗಳಲ್ಲಿ ಚರ್ಮ ಪುನಃ ಬೆಳೆಯುತ್ತದೆ. ಚರ್ಮದ ಕಸಿ ಮಾಡಲು ರಕ್ತ ಸೇರಿದಂತೆ ಯಾವುದೇ ಹೊಂದಾಣಿಕೆಯ ಅಗತ್ಯವಿಲ್ಲ.
ದೇಶದ 3ನೇ ಬ್ಯಾಂಕ್ : ಮುಂಬೈನ ರಾಷ್ಟ್ರೀಯ ಸುಟ್ಟಗಾಯಗಳ ಕೇಂದ್ರ ಮತ್ತು ಚೆನ್ನೈನ ರೈಟ್ಸ್ ಆಸ್ಪತ್ರೆಯಲ್ಲಿ ದೇಶದ ಎರಡು ಚರ್ಮ ಬ್ಯಾಂಕ್ಗಳಿವೆ. ಬೆಂಗಳೂರಿನಲ್ಲಿ ಸ್ಥಾಪನೆಯಾದ ಬ್ಯಾಂಕ್ ರಾಜ್ಯಕ್ಕೆ ಪ್ರಥಮ ಮತ್ತು ದೇಶದಲ್ಲಿ 3ನೇಯದಾಗಿದೆ. ಈ ಬ್ಯಾಂಕ್ನಲ್ಲಿ ಕೆಲಸ ನಿರ್ವಹಿಸಲು ಇಬ್ಬರು ವೈದ್ಯರು ಮುಂಬೈನಲ್ಲಿ ತರಬೇತಿ ಪಡೆದು ಬಂದಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications