ಕರ್ನಾಟಕದ ಮೊದಲ ಚರ್ಮ ಬ್ಯಾಂಕ್ ಉದ್ಘಾಟನೆ
ಬೆಂಗಳೂರು, ಮಾರ್ಚ್ 30 : ಕರ್ನಾಟಕದ ಮೊದಲ ಚರ್ಮ ಬ್ಯಾಂಕ್ ಉದ್ಘಾಟನೆಗೊಂಡಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಅವರಣದಲ್ಲಿ ಸುಮಾರು 60 ಲಕ್ಷ ರೂ.ಗಳ ವೆಚ್ಚದಲ್ಲಿ ಚರ್ಮ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ.
ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು, ಚರ್ಮ ಬ್ಯಾಂಕ್ ಉದ್ಘಾಟನೆ ಮಾಡಿದರು. ಬೆಂಗಳೂರು ವೈದ್ಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್ಐ)ಯು ರೋಟರಿ ಕ್ಲಬ್ ಮತ್ತು ಆರ್ಶೀವಾದ್ ಸ್ಪೈಸ್ ಅವರೊಂದಿಗೆ ಒಪ್ಪಂದ ಮಾಡಿಕೊಂಡು ಚರ್ಮ ಬ್ಯಾಂಕ್ ಆರಂಭಿಸಿದೆ. [ಚರ್ಮದಾನ ಅಭಿಯಾನಕ್ಕೆ ನಟ ಪ್ರೇಮ್ ರಿಂದ ಚಾಲನೆ]

ಇದು ರಾಜ್ಯದ ಮೊದಲ ಮತ್ತು ದೇಶದ ಮೂರನೇ ಚರ್ಮ ಬ್ಯಾಂಕ್ ಆಗಿದೆ. ಶೇ 25 ರಿಂದ 30ರಷ್ಟು ಸುಟ್ಟ ಗಾಯಗಳಾದಾಗ ರೋಗಿಯ ದೇಹದ ಇತರ ಭಾಗದಿಂದ ಚರ್ಮವನ್ನು ತೆಗೆದು ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಆದರೆ, ಶೇ 30ಕ್ಕಿಂತ ಹೆಚ್ಚು ಸುಟ್ಟಗಾಯಗಳಾಗಿದ್ದರೆ ಚರ್ಮ ಬ್ಯಾಂಕ್ಗಳಲ್ಲಿ ಸಂಗ್ರಹಿಸಿದ ಚರ್ಮವನ್ನು ಬಳಸಬಹುದಾಗಿದೆ. [ಬೆಂಗಳೂರಲ್ಲಿ ಹೃದಯ ಸಂಬಂಧಿ 3 ವಿಶೇಷ ಘಟಕ ಸ್ಥಾಪನೆ]
ಏನಿದು ಚರ್ಮ ಬ್ಯಾಂಕ್? : ಮೃತಪಟ್ಟ ವ್ಯಕ್ತಿಯ ಚರ್ಮವನ್ನು 6 ಗಂಟೆಗಳಲ್ಲಿ ಪಡೆದು ಬ್ಯಾಂಕ್ಗಳಲ್ಲಿ ಸಂರಕ್ಷಿಸಿ ಇಡಬೇಕು. ಚರ್ಮವನ್ನು ದಾನ ಪಡೆಯುವ ಮೊದಲು ಎಚ್ಐವಿ, ಅಲರ್ಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಚರ್ಮ ರೋಗ ಕಂಡುಬಂದರೆ ಅವರ ಚರ್ಮವನ್ನು ದಾನ ಪಡೆಯಲಾಗುವುದಿಲ್ಲ.
ದಾನವಾಗಿ ಪಡೆದ ಚರ್ಮವನ್ನು ರಕ್ತ ಸಂಗ್ರಹಣೆ ಮಾಡುವಂತೆ ಕೋಲ್ಡ್ ಸ್ಟೋರೇಜ್ಗಳಲ್ಲಿ ಸಂಗ್ರಹಣೆ ಮಾಡಲಾಗುತ್ತದೆ. ನಾನಾ ಅವಘಡಗಳಿಂದ ದೇಹವನ್ನು ಸುಟ್ಟುಕೊಂಡ ರೋಗಿಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡುವಾಗ ಇವುಗಳನ್ನು ಬಳಸಿಕೊಳ್ಳಲಾಗುತ್ತದೆ.

ಯಾರು ಚರ್ಮದಾನ ಮಾಡಬಹುದು? : ಬೆಂಗಳೂರು ನಗರದಲ್ಲಿ ಈಗಾಗಲೇ ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಗಳ ಅಂಗಾಂಗಗಳನ್ನು ದಾನ ಮಾಡಲಾಗುತ್ತಿದೆ. ಹೀಗೆ ಅಂಗಾಂಗ ದಾನ ಮಾಡುವಂತೆ ಚರ್ಮ ದಾನಕ್ಕೂ ಮೊದಲು ಹೆಸರು ನೋಂದಣಿ ಮಾಡಬೇಕು. [ಕುಡ್ಲದಲ್ಲಿ ಮಿಡಿದ ಜೀವಂತ ಹೃದಯ ಬೆಂಗಳೂರಿಗೆ]
ಕುಟುಂಬದವರು ಒಪ್ಪಿಗೆ ಕೊಟ್ಟರೆ ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಯಿಂದ ಚರ್ಮವನ್ನು ದಾನವಾಗಿ ಪಡೆಯಲಾಗುತ್ತದೆ. ಜೀವಂತ ಇರುವ ವ್ಯಕ್ತಿಯು ತಮ್ಮ ಸಂಬಂಧಿಗಳಿಗೆ ತೊಡೆ ಭಾಗದ ಚರ್ಮವನ್ನು ದಾನ ಮಾಡಬಹುದು. ಆ ಜಾಗದಲ್ಲಿ 3 ರಿಂದ 4ವಾರಗಳಲ್ಲಿ ಚರ್ಮ ಪುನಃ ಬೆಳೆಯುತ್ತದೆ. ಚರ್ಮದ ಕಸಿ ಮಾಡಲು ರಕ್ತ ಸೇರಿದಂತೆ ಯಾವುದೇ ಹೊಂದಾಣಿಕೆಯ ಅಗತ್ಯವಿಲ್ಲ.
ದೇಶದ 3ನೇ ಬ್ಯಾಂಕ್ : ಮುಂಬೈನ ರಾಷ್ಟ್ರೀಯ ಸುಟ್ಟಗಾಯಗಳ ಕೇಂದ್ರ ಮತ್ತು ಚೆನ್ನೈನ ರೈಟ್ಸ್ ಆಸ್ಪತ್ರೆಯಲ್ಲಿ ದೇಶದ ಎರಡು ಚರ್ಮ ಬ್ಯಾಂಕ್ಗಳಿವೆ. ಬೆಂಗಳೂರಿನಲ್ಲಿ ಸ್ಥಾಪನೆಯಾದ ಬ್ಯಾಂಕ್ ರಾಜ್ಯಕ್ಕೆ ಪ್ರಥಮ ಮತ್ತು ದೇಶದಲ್ಲಿ 3ನೇಯದಾಗಿದೆ. ಈ ಬ್ಯಾಂಕ್ನಲ್ಲಿ ಕೆಲಸ ನಿರ್ವಹಿಸಲು ಇಬ್ಬರು ವೈದ್ಯರು ಮುಂಬೈನಲ್ಲಿ ತರಬೇತಿ ಪಡೆದು ಬಂದಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications