ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆ: ಕರ್ನಾಟಕಕ್ಕೆ 2ನೇ ಸ್ಥಾನ
ಬೆಂಗಳೂರು. ನವೆಂಬರ್ 12 : ರಾಜ್ಯದಲ್ಲಿ ಬಡ, ಹಿಂದುಳಿದ ಮತ್ತು ಮಧ್ಯಮವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಅತ್ಯುತ್ತಮವಾಗಿ ಜಾರಿಯಾಗಿದ್ದು, ಈ ವರೆಗೆ 1052 ಜನೌಷಧ ಮಳಿಗೆಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಇಡೀ ದೇಶದಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಕಾರ್ನೋನ್ಮುಖವಾಗಿದೆ. ಇದರ ಜೊತೆ ರಾಜ್ಯದಲ್ಲಿ ಹೊಸದಾಗಿ ಮತ್ತೆ 500 ಮಳಿಗೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಬಿಪಿಪಿಐಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ವರ್ಷದ ಫೆಬ್ರವರಿ ನಂತರ ಸುಮಾರು 300 ಮಳಿಗೆಗಳನ್ನು ತೆರೆಯಲಾಗಿದ್ದು, ಬೇಡಿಕೆಗಳಿಗೆ ಅನುಗುಣವಾಗಿ ಮಳಿಗೆ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಜನೌಷಧಿ ಮಳಿಗೆಗಳು ಅತ್ತುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ಪ್ರಸ್ತಾವನೆ ಸಲ್ಲಿಸಿರುವುದನ್ನು ಹೊರತುಪಡಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 200 ಔಷಧ ಮಳಿಗೆಗಳಿವೆ. ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಿಂದಲೂ ಜನೌಷಧಿ ಮಳಿಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆಯಲು ಒತ್ತಡವಿದೆ. ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಎಂಬ ಗ್ರಾಮದಲ್ಲೂ ಜನೌಷಧಿ ಮಳಿಗೆ ತೆರೆದಿರುವುದು ವಿಶೇಷವಾಗಿದ್ದು, ಬೇಡಿಕೆಗೆ ಅನುಗುಣವಾಗಿ ಹೊಸ ಮಳಿಗೆಗಳಿಗೆ ಮಂಜೂರಾತಿ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಜನರಿಕ್ ಔಷಧಿಗಳು ಬ್ರಾಂಡೆಡ್ ಆಗಿದ್ದು, ಮಾರುಕಟ್ಟೆಗಿಂತ ಶೇ.50 ರಿಂದ 80ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿವೆ. ಎನ್.ಎ.ಬಿ.ಎಲ್ ಪ್ರಯೋಗಾಲಯದಲ್ಲಿ ಜನೌಷಧಿ ಮಳಿಗೆಗಳನ್ನು ಪರೀಕ್ಷಿಸಿ ಸಾರ್ವಜನಿಕ ಉಪಯೋಗಕ್ಕೆ ಜನೌಷಧಿ ಕೇಂದ್ರಗಳಲ್ಲಿ ದೊರೆಯುವಂತೆ ಮಾಡಲಾಗುತ್ತಿದೆ. ಒಟ್ಟು 1451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು, ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಗಳು ಸಹ ಇಲ್ಲಿ ದೊರೆಯುತ್ತಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸಲು ಉದ್ದೇಶ ಹೊಂದಿರುವ ಫಾರ್ಮಸಿ ಪದವಿಧರರಿಂದ ಮಳಿಗೆಗಳನ್ನು ತೆರೆಯಲು ಹೆಚ್ಚಿನ ಬೇಡಿಕೆ ಬರುತ್ತಿದೆ. ಸ್ವಾಯತ್ತ ಸಂಸ್ಥೆಗಳಿಗೆ 120 ಚದರ ಅಡಿ ಸ್ಥಳವನ್ನು ಉಚಿತವಾಗಿ ನೀಡಲಾಗುತ್ತಿದೆ. ಬ್ಯೂರೋ ಆಫ್ ಫಾರ್ಮಸಿ ಪಬ್ಲಿಕ್ ಸೆಕ್ಟರ್ ಯೂನಿಟ್ಸ್ ಆಫ್ ಇಂಡಿಯಾ [ಬಿಪಿಪಿಐ] ಪ್ರತಿಯೊಂದು ಜನೌಷಧಿ ಮಳಿಗೆ ಪ್ರಾರಂಭಿಸಲು ಜನೌಷಧಿ ಮಳಿಗೆ ತೆರೆಯುವ ಪ್ರತಿ ಮಳಿಗೆಗೆ ಬಿಪಿಪಿಐಯಿಂದ ಮಾಸಿಕ ಖರೀದಿಗಾಗಿ ವಹಿವಾಟಿಗೆ ತಕ್ಕಂತೆ ಮಾಸಿಕ ಶೇ 15 ರಂತೆ ಮಾಸಿಕ 15,000 ರೂ ಗಳನ್ನು ಮೀರದಂತೆ ಒಟ್ಟಾರೆ ರೂ 2.50 ಲಕ್ಷಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications