ತ್ವರಿತ ಅಲರ್ಟ್ ಗಳಿಗಾಗಿ
For Daily Alerts
Breaking; 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಮೇ16: ಬೆಂಗಳೂರು ನಗರದ ನೂತನ ಆಯುಕ್ತರಾಗಿ ಸಿ. ಹೆಚ್. ಪ್ರತಾಪ್ ರೆಡ್ಡಿ ನೇಮಕ ಮಾಡಿರುವ ರಾಜ್ಯ ಸರ್ಕಾರ ಸೋಮವಾರ 5 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.
ಸೋಮವಾರ ಸಂಜೆ ಕರ್ನಾಟಕ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ, ಕೆಎಸ್ಆರ್ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.
ಕ್ರೈಂ ಮತ್ತು ಟೆಕ್ನಿಕಲ್ ಸೆಲ್ನಲ್ಲಿ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಕೆಎಸ್ಆರ್ಪಿ ಎಡಿಜಿಪಿಯಾಗಿ, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತ್ ಸಿಐಡಿಯ ಎಸ್ಪಿಯಾಗಿ ವರ್ಗಾವಣೆಯಾಗಿದ್ದಾರೆ.
Recommended Video
ಪಂಜಾಬ್
ತಂಡಕ್ಕೆ
ಲಕ್ಕಿ
ಚಾರ್ಮ್
ಈತ
!!
|
Oneindia
Kannada
Comments
English summary
Karnataka government transferred 5 IPS officers on May 16th. New police commissioner for Bengaluru city. Here are the list.
Story first published: Monday, May 16, 2022, 19:48 [IST]