ಕರ್ನಾಟಕ: ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ, ವರ್ಗಾವಣೆ

ಬೆಂಗಳೂರು, ಸೆಪ್ಟೆಂಬರ್ 06 : ಕರ್ನಾಟಕ ಸರ್ಕಾರ ಹಲವು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿದೆ. ಕೆಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಶುಕ್ರವಾರ ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ವರ್ಗಾವಣೆಗೊಂಡು ಸ್ಥಳ ನಿಯೋಜನೆ ಮಾಡದ ಹಲವು ಅಧಿಕಾರಿಗಳಿಗೆ ಸ್ಥಳಗಳನ್ನು ನೀಡಿದೆ. ಕೆಲವು ಅಧಿಕಾರಿಗಳಿಗೆ ಅವರ ಇಲಾಖೆ ಜೊತೆಗೆ ಬೇರೆ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಸಿ. ಶಿಖಾ ಅವರನ್ನು ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ. ಹೆಬ್ಸಿಬಾ ರಾಣಿ ಕೊರ್ಲಪಟ್ಟಿ ಅವರನ್ನು ಬೆಂಗಳೂರು ಸ್ಮಾರ್ಟ್‌ ಸಿಟಿ ಕಾರ್ಪೊರೇಷನ್ ಎಂ. ಡಿ. ಯಾಗಿ ನೇಮಕ ಮಾಡಲಾಗಿದೆ. ಸಂಪೂರ್ಣ ಪಟ್ಟಿ ಇಲ್ಲಿದೆ.

Karnataka Government Announced Posting For IAS officer

* ಡಾ. ರಾಜಕುಮಾರ್ ಖತ್ರಿ : ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಿಕ್ಷಣ ಇಲಾಖೆ

* ಅಮ್ಲಾನ್ ಆದಿತ್ಯ ಬಿಸ್ವಾಸ್ : ಪ್ರಾದೇಶಿಕ ಆಯುಕ್ತರು ಬೆಳಗಾವಿ ವಿಭಾಗ (ಕೃಷ್ಣ ಮೇಲ್ದಂಡೆ ಯೋಜನೆ ಭೂ ಸ್ವಾಧೀನ ಆಯುಕ್ತರ ಹೆಚ್ಚುವರಿ ಹೊಣೆ)

* ಎ. ಬಿ. ಇಬ್ರಾಹಿಂ ಕಾರ್ಯದರ್ಶಿ : ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ

* ಸಿ. ಶಿಖಾ : ಬಿಎಂಟಿಸಿ ಎಂ. ಡಿ. (ಕರ್ನಾಟಕ ಮೂಲಭೂತ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕರ ಹೊಣೆಗಾರಿಗೆ)

* ಸಲ್ಮಾ ಕೆ. ಫಾಹಿಮ್ : ಎಂ. ಡಿ. ಗೋಲ್ಡ್‌ ಮೈನ್ಸ್

* ಕೆ. ಜಿ. ಶಾಂತರಾಮ್ : ಆಯುಕ್ತರು, ಕಾರ್ಮಿಕ ಇಲಾಖೆ

* ಅನಿರುದ್ಧ ಶ್ರವಣ್ : ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ

* ಹೆಬ್ಸಿಬಾ ರಾಣಿ ಕೊರ್ಲಪಟ್ಟಿ : ಎಂ. ಡಿ. ಬೆಂಗಳೂರು ಸ್ಮಾರ್ಟ್‌ ಸಿಟಿ ಕಾರ್ಪೊರೇಷನ್

* ಕೆ. ಶ್ರೀನಿವಾಸ : ಆಯುಕ್ತರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ

* ಕೆ. ಲೀಲಾವತಿ : ನಿರ್ದೇಶಕರು, ವಿಕಲಚೇತನರ ಕಲ್ಯಾಣ ಇಲಾಖೆ

* ಡಾ. ಕೆ. ಅರುಂಧತಿ ಚಂದ್ರಶೇಖರ್ : ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

* ಎಂ. ಆರ್. ರವಿಕುಮಾರ್ : ಎಂ. ಡಿ. ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ

* ಎಂ. ಬಿ. ರಾಜೇಶ್ ಗೌಡ : ಎಂ. ಡಿ. ಬೆಸ್ಕಾಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+