ರಾಜ್ಯದ ಶಾಲಾ ಶಿಕ್ಷಕರಿಗೆ ಪಿಂಚಣಿ ಯೋಜನೆ ಕುರಿತು ಗುಡ್ ನ್ಯೂಸ್
ಬೆಂಗಳೂರು, ನವೆಂಬರ್ 20: ರಾಜ್ಯದಲ್ಲಿ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು.. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲು ಈ ವರ್ಷದಲ್ಲಿ ನೇಮಕಗೊಂಡ ಶಿಕ್ಷಕರು ಅರ್ಹರು ಎಂದು ತಿಳಿಸಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಏಪ್ರಿಲ್ 1, 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಹಳೆಯ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ ಮಾಹಿತಿಯನ್ನು ಸಿದ್ಧಪಡಿಸಿ ಕಚೇರಿಗೆ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದುವಂದಿದೆ.

ಸದರಿ ಮಾಹಿತಿಯನ್ನಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಈ ಸಂಬಂಧ ದೃಡೀಕರಣ ಪತ್ರವನ್ನು ಸಲ್ಲಿಸಲು ಸೂಚಿಸಲಾಗಿದ್ದು, ಅದರಂತೆಯೇ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ದೃಢೀಕರಿಸಲಾಗಿದೆ ಎಂದು ತಿಳಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಲ್ಲಿ ಏಪ್ರಿಲ್ 1, 2006 ಪೂರ್ವದಲ್ಲಿ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿ ಅಥವಾ ತದನಂತರ ನೇಮಕಗೊಂಡ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಮಾರ್ಚ್ 10, 2025ರ ಪತ್ರದೊಂದಿಗೆ ಸಲ್ಲಿಕೆ ಮಾಡಲಾಗಿದೆ.
ಒಟ್ಟು 2,302 ಪ್ರಾಥಮಿಕ ಶಾಲಾ ಶಿಕ್ಷಕರ ಮಾಹಿತಿಯನ್ನು ಪರಿಶೀಲನೆ ಮಾಡಲಾಗಿದೆ. ಈ ಪ್ರಾಥಮಿಕ ಶಾಲಾ ಶಿಕ್ಷಕರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಅರ್ಹರಿರಾಗಿದ್ದಾರೆ ಎಂದು ಈ ಮೂಲಕ ದೃಡೀಕರಿಸಿದೆ ಎಂದು ತಿಳಿಸಲಾಗಿದ ಎಂದು ಉಲ್ಲೇಖ ಮಾಡಲಾಗಿದೆ.
ಪೂರ್ವ ಪ್ರಾಥಮಿಕ ತರಗತಿ ಬಗ್ಗೆ ಮಾಹಿತಿ: ಇನ್ನೂ ಮತ್ತೊಂದೆಡೆ ಈ ಬಾರಿಯ ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 4,056 ಸರ್ಕಾರಿ ಶಾಲೆಗಳಲ್ಲಿ 2025-26 ಸಾಲಿನಿಂದಲೇ ಎಲ್ಕೆಜಿ, ಯುಕೆಜಿ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಪ್ರಸ್ತುತ ರಾಜ್ಯದ 2,619 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ನಡೆಯುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಈ ಪೈಕಿ 90,195 ಮಕ್ಕಳು ದಾಖಲಾಗಿದ್ದಾರೆ. ಈ ಯೋಜನೆಯನ್ನು 70 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟಾರೆ ಐದು ಸಾವಿರ ಶಾಲೆಗಳಿಗೆ ವಿಸ್ತರಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಣೆ ಮಾಡಿದ್ದರು. ಅದರಂತೆಯೇ ಹೊಸದಾಗಿ ಈ ಸಾಲಿನಿಂದಲೇ ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications