ಮಧುಗಿರಿ ಏಕಶಿಲಾ ಬೆಟ್ಟ ಹಾಗೂ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ
ರಾಜ್ಯದ ಎರಡು ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ರೋಪ್ ವೇ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ಸಾರ್ವಜನಿಕರನ್ನು ಆಕರ್ಷಿಸುವ ಹಾಗೂ ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ಸರ್ಕಾರ ರೋಪ್ ವೇಗೆ ಅನುಮೋದನೆ ನೀಡಿದೆ.
ಹೌದು.. ಕೊಪ್ಪಳದ ಗಂಗಾವತಿ ತಾಲೂಕಿನ ಚಿಕ್ಕರಾಂಪೂರ ಗ್ರಾಮದ ಅಂಜನಾದ್ರಿ ಬೆಟ್ಟ ಹಾಗೂ ತುಮಕೂರಿನ ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಕಾಮಗಾರಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಇದರ ನಿರ್ಮಾಣ ಕಾರ್ಯಕ್ಕಾಗಿ ಶೀರ್ಘವೇ ಟೆಂಡರ್ ಕರೆಯುವ ಸಾಧ್ಯತೆ ಇದೆ.

ಮಧುಗಿರಿ ಏಕಶಿಲಾ ಬೆಟ್ಟ ರೋಪ್ ವೇ
ತುಮಕೂರಿನ ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಯೋಜನೆಗೆ ಒಂತ್ತು ಎಕರೆ ಜಾಗ ಮೀಡಲು ಇಡಲಾಗಿದೆ. 50 ಕೋಟಿ ರೂಪಾಯಿಯಲ್ಲಿ ಈ ರೋಪ್ ವೇ ನಿರ್ಮಾಣಗೊಳ್ಳಲಿದೆ. ಹಂತ ಹಂತವಾಗಿ ಸರ್ಕಾರ ಹಣ ಬಿಡುಗಡೆ ಮಾಡಲಿದೆ. ಇದಕ್ಕಾಗಿ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದೆ.
ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ
ಇನ್ನೂ ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಿದ ಕಾರಣ ಈಗಾಗಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರ ನೇತೃತ್ವದಲ್ಲಿ ಕೇಂದ್ರ ಆರ್ಐಟಿಇಎಸ್ ಸಂಸ್ಥೆಯ ಪ್ರತಿನಿಧಿಗಳು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ರೋಪ್ ವೇ ಮೂಲಕ 800 ಭಕ್ತಾಧಿಗಳು ಒಂದು ಗಂಟೆಯಲ್ಲಿ ಅಂಜನಾದ್ರಿ ಬೆಟ್ಟಕ್ಕೆ ತಲುಪಬಹುದು. ಇದು ಸುಮಾರು 450 ಮೀ. ಉದ್ದದ ರೋಪ್ ವೇ ಆಗಿದೆ.

ಅಂಜನಾದ್ರಿ ಬೆಟ್ಟ ಕೇವಲ ಧಾರ್ಮಿಕ ತಾಣವಷ್ಟೇ ಅಲ್ಲ. ದೇಶ ಮತ್ತು ವಿದೇಶಗಳಿಂದ ಕೋಟ್ಯಾಂತರ ಜನ ಇಲ್ಲಿ ಬರುತ್ತಾರೆ. ಪ್ರತಿ ಶನಿವಾರ, ಭಾನುವಾರ, ಅಮಾವಾಸ್ಯೆ, ಹುಣ್ಣಿಮೆ, ಹನುಮ ಜಯಂತಿ, ಹನುಮಮಾಲಾ ವಿಸರ್ಜನೆ ಹೀಗೆ ವಿಶೇಷ ದಿನಗಳಲ್ಲಿ ಜನಸಂದಣಿ ಇರುತ್ತದೆ. ಜನಸಂದಣಿ ಹೆಚ್ಚಾದಂತೆ ಭಕ್ತರು ಬೆಟ್ಟದ ಮೆಟ್ಟಿಲುಗಳ ಮೇಲೆ ಒಂದೊಂದು ಹೆಜ್ಜೆ ಇಡಲು ಪರದಾಡುವ ಸ್ಥಿತಿ ಇರುತ್ತದೆ.
ಅಂಜನಾದ್ರಿ ಪ್ರಖ್ಯಾತಿ ಪಡೆದ ಬಳಿಕ ದೇವಸ್ಥಾನಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಈ ಬೆಟ್ಟಕ್ಕೆ ಎತ್ತರದ 575 ಮೆಟ್ಟಿಲುಗಳಿದ್ದು ವಯಸ್ಸಾದವರು, ಮಕ್ಕಳು, ಗಂಭೀರ ಕಾಯಿಲೆಗಳು ಇರುವವರು ಮೆಟ್ಟಿಲು ಹತ್ತುವುದು ತುಂಬಾ ಕಷ್ಟ. ಅಲ್ಲದೆ ಬೆಟ್ಟ ಏರುವಾಗಲೇ ಕಳೆದ ಏಳೆಂಟು ವರ್ಷಗಳಲ್ಲಿ ಸಾಕಷ್ಟು ಜನ ಮೃತಪಟ್ಟಿದ್ದಾರೆ. ಹೀಗಾಗಿ ರೋಪ್ ವೇ ಆದರೆ ಬೆಟ್ಟಕ್ಕೆ ಹೋಗುವ ದಾರಿ ಸುಗಮವಾಗಲಿದೆ.
ಈ ಬಗ್ಗೆ ಮಾತನಾಡಿದ ಗಾಲಿ ಜನಾರ್ಧನ ರೆಡ್ಡಿ, 'ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಮಾತುಕತೆ ನಡೆಸಿ, ರೋಪ್ ವೇ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದೆನು. ಮನವಿಗೆ ಅವರು ಸ್ಪಂದಿಸಿದ್ದಾರೆ. ರೋಪ್ ವೇ ನಿರ್ಮಾಣ ಮಾಡಲು ಒಪ್ಪಿಗೆ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಅನುಮೋದನೆ ನೀಡಿದೆ. ಸ್ಥಳ ಪರಿಶೀಲನಾ ವರದಿ ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಕಾಮಗಾರಿ ಶುರುವಾಗಲಿದೆ. ಇದು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ' ಎಂದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications