ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ: ತನಿಖೆಗೆ ಸರ್ಕಾರ ಆದೇಶ
ಬೆಂಗಳೂರು, ಮೇ 26 : ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪಗಳ ತನಿಖೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ಮುಜುರಾಯಿ ಇಲಾಖೆಯ ಆಯುಕ್ತರಿಗೆ ಆದೇಶಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನು ಒಳಗೊಂಡಂತೆ ಮೂವರನ್ನು ನೇಮಕ ಮಾಡಿ ತನಿಖೆ ನಡೆಸಿ ವರದಿಯನ್ನು ಆದಷ್ಟು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಅವರು ಸೂಚಿಸಿದ್ದಾರೆ.[ಸರ್ಕಾರ ಮತ್ತು ಮಠದ ಕಾರ್ಯವೈಖರಿಯ ವ್ಯತ್ಯಾಸ ವಿವರಿಸಿದ ರಾಘವೇಶ್ವರ ಶ್ರೀ]

ರಾಮಚಂದ್ರಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಎದುರ್ಕಳ ಈಶ್ವರ ಭಟ್ ಮತ್ತು ಜೈಕೃಷ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
22 ಬ್ಯಾಂಕ್ ಅಕೌಂಟ್ ಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರಕ್ಕೆ ತನಿಖೆ ನಡೆಸುವಂತೆ ಆದೇಶಿಸಿತ್ತು.












Click it and Unblock the Notifications