Get Updates
Get notified of breaking news, exclusive insights, and must-see stories!

BPL Card: ಎರಡು ರೀತಿಯ ಬಿಪಿಎಲ್ ಕಾರ್ಡ್ ಹಂಚಿಕೆ ಮಾಡಲು ಚಿಂತನೆ: ವಿವರ ಇಲ್ಲಿದೆ

2017ರಿಂದ ಸಲ್ಲಿಕೆಯಾಗಿರುವ ಬಿಪಿಎಲ್ ಕಾರ್ಡ್ ಅರ್ಜಿಗಳನ್ನು ಪರಿಶೀಲಿಸಿ, ಕಾರ್ಡ್ ಹಂಚಿಕೆ ಮಾಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ಎರಡು ಗುಂಪುಗಳಾಗಿ ವಿಭಜಿಸುವ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿಗಳನ್ನು ಎರಡು ಗುಂಪುಗಳಾಗಿ ವಿಭಜಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಸಚಿವ ಮುನಿಯಪ್ಪ ಹೇಳಿದ್ದಾರೆ. ಒಂದು ರೀತಿಯ ಬಿಪಿಎಲ್ ಕಾರ್ಡ್‌ನಲ್ಲಿ ವೈದ್ಯಕೀಯ ಮತ್ತು ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಅವಕಾಶ ನೀಡಿದರೆ ಮತ್ತೊಂದು ರೀತಿಯ ಬಿಪಿಎಲ್ ಕಾರ್ಡ್‌ನಲ್ಲಿ ಪಡಿತರದ ಜೊತೆಗೆ ವೈದ್ಯಕೀಯ ಪ್ರಯೋಜನಗಳನ್ನು ಪಡೆಯಬಹುದು.

 Karnataka Government Considering Splitting BPL Cards Into 2 Categories: K H Muniyappa

ಈಗಾಗಲೇ ಆಂಧ್ರಪ್ರದೇಶದಲ್ಲಿ ಈ ರೀತಿ ಮಾಡಲಾಗಿದೆ ಎಂದು ಹೇಳಿದರು. ಅಲ್ಲಿ ಬಿಪಿಎಲ್‌ ಕಾರ್ಡ್‌ನಲ್ಲಿ ಎರಡು ಗುಂಪುಗಳನ್ನಾಗಿ ಮಾಡಲಾಗಿದೆ. ಒಂದು ವರ್ಗಕ್ಕೆ ಈ ಕಾರ್ಡ್‌ನಲ್ಲಿ ಆಹಾರ ಧಾನ್ಯಗಳು ಸಿಗುವುದಿಲ್ಲ ಆದರೆ ವೈದ್ಯಕೀಯ, ಮೀಸಲಾತಿ ಮತ್ತು ಆದಾಯ ಪ್ರಮಾಣಪತ್ರಗಳಂತಹ ಇತರ ಪ್ರಯೋಜನಗಳನ್ನು ಪಡೆಯಲು ಕಾರ್ಡ್ ಬಳಸುತ್ತಾರೆ. ಮತ್ತೊಂದು ವರ್ಗದ ಪಡಿತರ ಚೀಟಿಗೆ ಆಹಾರ ಧಾನ್ಯಗಳು ಮತ್ತು ಇತರ ಪ್ರಯೋಜನಗಳು ದೊರೆಯಲಿದೆ ಎಂದು ಮುನಿಯಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಿಎಂ ಜೊತೆ ಚರ್ಚೆ ಬಳಿಕ ನಿರ್ಧಾರ

"ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ನಂತರ, ನಿಖರವಾದ ಸಂಖ್ಯೆಗಳನ್ನು ತಿಳಿಯಲು ಎರಡೂ ಗುಂಪುಗಳನ್ನು ಗುರುತಿಸಲು ನಾವು ಮನೆ-ಮನೆಗೆ ಸಮೀಕ್ಷೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಸಮೀಕ್ಷೆಗೆ ಕಾಲಮಿತಿ ಇರುವುದಿಲ್ಲ, ಆದರೆ ಶೀಘ್ರದಲ್ಲೇ ಇದನ್ನು ಜಾರಿಗೆ ತರಲಾಗುತ್ತದೆ" ಎಂದು ಹೇಳಿದ್ದಾರೆ.

2017 ರಿಂದ ರಾಜ್ಯವು 3.90 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಅರ್ಜಿಗಳನ್ನು ಸ್ವೀಕರಿಸಿದ್ದು, ಬಿಪಿಎಲ್ ಕಾರ್ಡ್‌ಗಳನ್ನು ಎರಡು ಗುಂಪುಗಳಾಗಿ ವಿಭಜಿಸುವ ಪ್ರಾಯೋಗಿಕ ಪ್ರಯೋಗ ಈ ಭಾಗದಿಂದಲೇ ಪ್ರಾರಂಭವಾಗಲಿದೆ ಎಂದು ಸಚಿವರು ಹೇಳಿದರು.

ರೈತರ ಜೊತೆ ಶೀಘ್ರದಲ್ಲೇ ಸಮಾಲೋಚನೆ

ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಖರೀದಿಸಬಹುದಾದ ಭತ್ತದ ತಳಿಗಳನ್ನು ಬೆಳೆಯಲು ರೈತರನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ರಾಜ್ಯದ ವಿವಿಧ ರೈತರ ಗುಂಪುಗಳೊಂದಿಗೆ ಶೀಘ್ರದಲ್ಲೇ ಸಮಾಲೋಚನೆ ನಡೆಸಲಿದೆ ಎಂದು ಮುನಿಯಪ್ಪ ಹೇಳಿದರು.

"ನಮ್ಮ ರಾಜ್ಯದಲ್ಲಿ ಈ ಹಲವು ತಳಿಗಳನ್ನು ಬೆಳೆಯುವುದಿಲ್ಲ. ಈ ಭತ್ತ ಇಲ್ಲೇ ಬೆಳೆದರೆ, ಸಾರಿಗೆ ವೆಚ್ಚದ ದೃಷ್ಟಿಯಿಂದ ಇದು ನಮಗೆ ಸಾಕಷ್ಟು ಹಣವನ್ನು ಉಳಿಸುತ್ತದೆ ಮತ್ತು ಅದೇ ಸಮಯದಲ್ಲಿ ಇದು ಸ್ಥಳೀಯ ರೈತರಿಗೂ ಸಹಾಯ ಮಾಡುತ್ತದೆ," ಎಂದು ಅವರು ಹೇಳಿದರು.

ರಾಜ್ಯದಲ್ಲಿ ಅಕ್ಕಿ ಮತ್ತು ರಾಗಿಯನ್ನು ಖರೀದಿಸಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಟೆಂಡರ್ ಕರೆಯಲಿದೆ ಎಂದು ಅವರು ಹೇಳಿದರು. "ನಾವು 2 ಕೆಜಿ ರಾಗಿಯನ್ನು ನೀಡಲು ಯೋಜಿಸಿದ್ದೇವೆ, ಇದಕ್ಕಾಗಿ ಪಿಡಿಎಸ್ ಯೋಜನೆಯಡಿ ರಾಜ್ಯದ 14 ಜಿಲ್ಲೆಗಳಲ್ಲಿ ಸರಬರಾಜು ಮಾಡಲು ನಮಗೆ 6 ಲಕ್ಷ ಟನ್ ಅಗತ್ಯವಿದೆ" ಎಂದು ಸಚಿವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+