ಮುಸ್ಲಿಮರಿಗೆ ಸರ್ಕಾರಿ ಟೆಂಡರ್ಗಳಲ್ಲಿ 4% ಮೀಸಲಾತಿ ತರಲು ಮುಂದಾದ ಸಿದ್ದರಾಮಯ್ಯ ಸರ್ಕಾರ
ಈಗಾಗಲೇ ವಕ್ಫ್ ಬೋರ್ಡ್ ವಿವಾದ, ಮುಡಾ ಪ್ರಕರಣ, ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪಗಳು ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟುಮಾಡಿವೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು, ಗುತ್ತಿಗೆ ನೀಡುವಲ್ಲಿ ಕೂಡ ಮುಸ್ಲಿಮರಿಗೆ ಮೀಸಲಾತಿ ಕೊಡುವ ಬಗ್ಗೆ ಯೋಚಿಸುತ್ತಿದೆ ಎಂದು ವರದಿಯಾಗಿದೆ.
ಸಿವಿಲ್ ಕಾಮಗಾರಿಗಳ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4 ಪ್ರತಿಶತ ಮೀಸಲಾತಿ ಕೊಡಲು ಚಿಂತಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಸದ್ಯ ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಗಳಲ್ಲಿ 43 ಪ್ರತಿಶತ ಮೀಸಲಾತಿ ನೀಡಲಾಗುತ್ತಿದೆ. ಎಸ್ಸಿ/ಎಸ್ಟಿ ಗುತ್ತಿಗೆದಾರರಿಗೆ 24% ರಷ್ಟು ಮೀಸಲಾತಿ ಇದ್ದರೆ, ಪ್ರವರ್ಗ-1 ಕ್ಕೆ 4 ಪ್ರತಿಶತ ಮೀಸಲಾತಿ ಇದೆ. 2ಎ ಪ್ರವರ್ಗಕ್ಕೆ 15% ಮೀಸಲಾತಿ ಇದೆ.

ಸದ್ಯ ಪ್ರಸ್ತಾವನೆಯನ್ನು ಮಾತ್ರ ಸಲ್ಲಿಸಿದ್ದು ಈ ಬಗ್ಗೆ ಇನ್ನೂ ಸರ್ಕಾರ ನಿರ್ಧಾರ ಮಾಡಬೇಕಾಗಿದೆ. ಪ್ರವರ್ಗ - 2ಬಿ ಅಡಿಯಲ್ಲಿ ಮುಸ್ಲಿಮರಿಗೆ 4 ಪ್ರತಿಶತ ಮೀಸಲಾತಿಯನ್ನು ನೀಡಲು ಯೋಚಿಸಲಾಗಿದೆ ಎನ್ನಲಾಗಿದ್ದು, ಇದರಿಂದ ಗುತ್ತಿಗೆಯಲ್ಲಿ ಮೀಸಲಾಯಿ 47 ಪ್ರತಿಶತಕ್ಕೆ ಏರಿಕೆಯಾಗಲಿದೆ.
ಸರ್ಕಾರದ ವಿರುದ್ಧ ಆಕ್ರೋಶ
ಗುತ್ತಿಗೆದಾರರಿಗೆ ಮೀಸಲಾತಿಯನ್ನು ವಿಸ್ತರಿಸುವ ಸರ್ಕಾರದ ನಿರ್ಧಾರಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಮುಖ್ಯವಾಗಿ ಒಕ್ಕಲಿಗ ಸಮುದಾಯ ಮತ್ತು ಲಿಂಗಾಯತ ಸಮುದಾಯದಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಈ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿದೆ ಎಂದು ಡಿಎಚ್ ವರದಿ ಮಾಡಿದೆ.
ಈ ಬಗ್ಗೆ ಬಿಜೆಪಿ ನಾಯಕ ಅಮಿತ್ ಮಾಳವೀಯ ಪ್ರತಿಕ್ರಿಯೆ ನೀಡಿದ್ದು, ಮುಸ್ಲಿಮರಿಗೆ ಮೀಸಲಾತಿ ನೀಡಲು ಎಸ್ಸಿ, ಎಸ್ಟಿ ಅಥವಾ ಒಬಿಸಿ ಯಾರ ಕೋಟಾವನ್ನು ಕಡಿತ ಮಾಡಲಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ತೆಲಂಗಾಣದಲ್ಲೂ ಮುಸ್ಲಿಮರಿಗೆ 4% ಮೀಸಲಾತಿ ನೀಡಲಾಗಿದೆ, ಇದು ಸಂವಿಧಾನ ವಿರೋಧಿ ಎಂದು ಹೇಳಿದ್ದಾರೆ.
ಯದುವೀರ್ ಒಡೆಯರ್ ವಿರೋಧ
ಸರ್ಕಾರದ ಈ ಪ್ರಸ್ತಾವನೆಗೆ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವ ಮೂಲಕ ಸಾರ್ವಜನಿಕರ ನಂಬಿಕೆ ಮತ್ತು ಏಕತೆಯನ್ನು ಕುಗ್ಗಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಕರ್ನಾಟಕ ಸರ್ಕಾರದ ಟೆಂಡರ್ಗಳಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ಪರಿಚಯಿಸುವ ಪ್ರಸ್ತಾಪ ನನಗೆ ಆಘಾತ ಉಂಟುಮಾಡಿದೆ. . ನಮ್ಮ ಆಡಳಿತವು ನಿಲ್ಲಬೇಕಾದ ಸಮಾನತೆ ಮತ್ತು ಅರ್ಹತೆಯ ತಳಹದಿಯನ್ನೇ ಹಾಳುಮಾಡಿ, ಸಮಾಜವನ್ನು ಧಾರ್ಮಿಕ ನೆಲೆಯಲ್ಲಿ ವಿಭಜಿಸುವತ್ತ ಸಾಗುತ್ತಿರುವುದು ಒಂದು ಅಪಾಯಕಾರಿ ಹೆಜ್ಜೆಯಾಗಿದೆ. ರ್ಕಾರಿ ಗುತ್ತಿಗೆಗಳನ್ನು ಅರ್ಹತೆ, ಸಾಮರ್ಥ್ಯ ಮತ್ತು ಬದ್ಧತೆಯ ಆಧಾರದ ಮೇಲೆ ನೀಡಬೇಕೆ ಹೊರತು ಧಾರ್ಮಿಕ ಸಂಬಂಧಗಳ ಮೇಲೆ ಅಲ್ಲ." ಎಂದು ಹೇಳಿದ್ದಾರೆ.
ಮತ-ಬ್ಯಾಂಕ್ ರಾಜಕೀಯಕ್ಕಿಂತ ಅರ್ಹತೆ ಮತ್ತು ಪಾರದರ್ಶಕತೆಗೆ ಆದ್ಯತೆ ನೀಡುವ ನಾಯಕತ್ವಕ್ಕೆ ಕರ್ನಾಟಕ ಸರ್ಕಾರ ಒತ್ತು ನೀಡಬೇಕು. ಈ ಧಾರ್ಮಿಕ ಸಂಘರ್ಷದ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
-
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications