Power tariff in Karnataka : ಹೊಸ ವರ್ಷಕ್ಕೆ ಇಂಧನ ಇಲಾಖೆಯಿಂದ ಗುಡ್ ನ್ಯೂಸ್; ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ
ಬೆಂಗಳೂರು, ಡಿಸೆಂಬರ್ 29: 2023 ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಆಡಳಿತ ಹಾಗೂ ವಿರೋಧ ಪಕ್ಷಗಳು ಭರ್ಜರಿ ತಯಾರಿಯನ್ನ ನಡೆಸುತ್ತಿದ್ದು, ಇಷ್ಟು ದಿನ ಜನರಿಗೆ ಅಗತ್ಯ ವಸ್ತುಗಳು, ತೈಲ ಬೆಲೆಗಳು ಸೇರಿದಂತೆ ಎಲ್ಲಾ ವಸ್ತುಗಳ ಮೇಲೆ ಬೆಲೆ ಹೆಚ್ಚಿಗೆ ಮಾಡಲಾಗಿದ್ದು, ಇದೀಗ 2023 ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ಜನರ ಬಿಜೆಪಿಯತ್ತ ಸೆಳೆಯುವ ನಿಟ್ಟಿನಲ್ಲಿ ಹಲವಾರು ಜನಪರ ಯೋಜನೆಗಳಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿಂದೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಸಾರ್ವಜನಿಕರು ಎಷ್ಟೋ ಆಕ್ರೋಶ ವ್ಯಕ್ತಪಡಿಸಿದ್ದರೂ ಸುಮ್ಮನಿದ್ದ ರಾಜ್ಯ ಸರ್ಕಾರ, ಚುನಾವಣೆ ಹೊಸ್ತಿಲಲ್ಲಿ ಇಂಧನ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ.
— Sunil Kumar Karkala (@karkalasunil) December 29, 2022
ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ.@CMofKarnataka
ಇನ್ನೂ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಇಂಧನ ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚಕಡಿತ ಮಾಡುವ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಇನ್ನೂ ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ











Click it and Unblock the Notifications