ಹೊಸ ಮನೆ ಕಟ್ಟುವವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್
ಈಗಾಗಲೇ ದುಬಾರಿ ದುನಿಯಾದಲ್ಲಿ ಬದುಕು ನಡೆಸುವುದು ಕಷ್ಟ ಎಂಬ ಕೂಗು ಜನಸಾಮಾನ್ಯರಿಂದ ಕೇಳಿಬರುತ್ತಿದೆ. ಇದರ ನಡುವೆಯೂ ಅದೆಷ್ಟೋ ಮಂದಿ ಒಂದು ಸ್ವಂತ ಮನೆ ಕಟ್ಟಿಕೊಳ್ಳಬೇಕು ಎಂಬ ಕನಸಿನಲ್ಲೇ ದಿನ ದೂಡುತ್ತಿದ್ದಾರೆ. ಈಗ ರಾಜ್ಯ ಸರ್ಕಾರವು ಮನೆಯ ಕನಸು ಕಾಣುತ್ತಿದ್ದವರಿಗೆ ಆಘಾತ ನೀಡಲು ಮುಂದಾಗಿದೆ.
ಹೌದು, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಹಲವು ವಿಷಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಪ್ರಮುಖವಾಗಿ ಕಟ್ಟಡ ನಿರ್ಮಾಣಕ್ಕೆ ಬಳಸುವ ಕಲ್ಲು ಹಾಗೂ ಗಣಿಗಾರಿಕೆ ಕಲ್ಲಿನ ರಾಯಲ್ಟಿ ಹೆಚ್ಚಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಮೂಲಕ ಕಟ್ಟಡ ನಿರ್ಮಾಣ ವಲಯದ ಮೇಲೆ ಬೆಲೆ ಏರಿಕೆ ಚಾಟಿ ಬೀಸಲು ಮುಂದಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆಯೂ ಸುದೀರ್ಘ ಚರ್ಚೆಯಾಗಿದೆ. ಈ ವೇಳೆ ಇದರ ರಾಯಲ್ಟಿ ಪರಿಷ್ಕರಣೆ ಮಾಡಲು ಕೂಡ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ಮೂಲಕ ಸರ್ಕಾರಕ್ಕೆ ಆದಾಯ ಹರಿವು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಸದ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ತೊಡಕಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗಬೇಕಿರುವ ಕಾರಣ ಈ ತೆರಿಗೆ ಪ್ರಮಾಣ ಹೆಚ್ಚಿಸಲಾಗುತ್ತಿದೆ ಎಂದು ಕಾರಣ ನೀಡಿದ್ದಾರೆ.
ಅದರಂತೆ ಕಟ್ಟಡ ನಿರ್ಮಾಣಕ್ಕೆ ಬಳಕೆಯಾಗುವ ಕಲ್ಲು ಹಾಗೂ ಮೈನಿಂಗ್ ಕಲ್ಲಿನ ಪ್ರತಿ ಟನ್ಗೆ ರಾಯಲ್ಟಿ ನಿಗದಿ ಮಾಡುವುದರಿಂದ ಹೆಚ್ಚುವರಿಯಾಗಿ 311 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಲಿದೆ. ಈ ಹಿಂದೆ ಒಂದು ಮೆಟ್ರಿಕ್ ಟನ್ಗೆ 20 ರೂಪಾಯಿಯಷ್ಟು ರಾಯಲ್ಟಿ ನಿಗದಿ ಇತ್ತು. ಈಗ ಪ್ರತಿ ಮೆಟ್ರಿಕ್ ಟನ್ ಕಲ್ಲಿಗೆ 10 ರೂಪಾಯಿ ರಾಯಲ್ಟಿ ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅಲ್ಲದೆ ಈ ರಾಯಲ್ಟಿ ಪಾವತಿ ಮಾಡದೆ, ಸಾಗಣೆ ಮಾಡಿದರೆ ಅವರಿಂದಲೂ ದಂಡ ವಿಧಿಸಲಾಗುವುದು. ಹಲವು ವರ್ಷಗಳಿಂದ ದಂಡ ವಸೂಲಿಯಾಗಿಲ್ಲ, ಹಾಗಾಗಿ ಈಗ ಒಂದೇ ಬಾರಿಗೆ ಬಾಕಿ ಪಾವತಿಗೂ ಅವಕಾಶ ನೀಡಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಸುಮಾರು 1,221 ಕೋಟಿ ರೂಪಾಯಿ ಮೊತ್ತವನ್ನು ರಾಯಲ್ಟಿ ಎಂದು ಪರಿಗಣಿಸಲಾಗಿದೆ. 6,105 ಕೋಟಿ ರೂಪಾಯಿಯಷ್ಟು ದಂಡ ಬಾಕಿ ಇದೆ. ಸರ್ಕಾರಕ್ಕೆ ಈಗ ಆದಾಯದ ಅಗತ್ಯತೆ ಇರುವುದರಿಂದ ರಾಯಲ್ಟಿ ವಸೂಲಿಗೆ ಮುಂದಾಗಿದ್ದೇವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಇನ್ನು ರಾಯಲ್ಟಿ ಹೆಚ್ಚಾಗುವುದರಿಂದ ಇದರ ಪರಿಣಾಮ ಮನೆ ನಿರ್ಮಾಣ ಮಾಡುವವರ ಮೇಲೆ ನೇರವಾಗಿ ಬೀಳುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಮನೆ ನಿರ್ಮಾಣಕ್ಕೆ ಕಲ್ಲನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಈ ದುಬಾರಿ ಬಿಸಿ ಜನರಿಗೆ ತಟ್ಟಲಿದೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಸರ್ಕಾರದ ಈ ನಿರ್ಧಾರದಿಂದ ಹೊಸ ಮನೆ ಕಟ್ಟುವ ಕನಸು ಕಂಡವರಿಗಂತೂ ಶಾಕ್ ನೀಡಿದಂತಾಗಿದೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications