ರಾಜ್ಯದ ದೇವಾಲಯಗಳ ಪ್ರಸಾದ ಭಕ್ತರ ಮನೆ ಬಾಗಿಲಿಗೆ, ಯೋಜನೆ ವಿವರ
ಬೆಂಗಳೂರು, ಮಾರ್ಚ್ 29: ಕರ್ನಾಟಕದ ವಿವಿಧ ದೇವಾಲಯಗಳ ಭಕ್ತರಿಗೆ ಸಿಹಿಸುದ್ದಿಯೊಂದಿದೆ. ಇನ್ನು ಮುಂದೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದಗಳು ಭಕ್ತರ ಮನೆ ಬಾಗಿಲಿಗೆ ಬರಲಿದೆ. ಇದಕ್ಕಾಗಿಯೇ ಕರ್ನಾಟಕ ಸರ್ಕಾರ ದೇವಾಲಯಗಳಿಂದ ಪ್ರಸಾದವನ್ನು ಆನ್ಲೈನ್ ಮೂಲಕ ಆರ್ಡರ್ ಮಾಡಿ ಪಡೆಯಲು ಇ-ಪ್ರಸಾದ ವೆಬ್ಸೈಟ್ ಮೂಲಕ ಅನುಕೂಲವನ್ನು ಕಲ್ಪಿಸಿದೆ. ಪ್ರಸ್ತುತ 14 ಪ್ರಮುಖ ದೇವಾಲಯಗಳ ಪ್ರವಾದವನ್ನು ಆನ್ಲೈನ್ ಮೂಲಕ ತರಿಸಿಕೊಳ್ಳುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ.
ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಇ-ಪ್ರಸಾದ ವೆಬ್ಸೈಟ್ ಮೂಲಕ ದೇವಾಲಯದ ಪ್ರಸಾದವನ್ನು ಮನೆಗೆ ತರಿಸಿಕೊಳ್ಳುವ ಸೇವೆಗೆ ಚಾಲನೆ ನೀಡಿದ್ದಾರೆ. ಸಚಿವರು ಮಾತನಾಡಿ, "ನಾನಾ ಕಾರಣಗಳಿಂದಾಗಿ ಎಲ್ಲರಿಗೂ ದೇವಾಲಯಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ವಯಸ್ಸಾದವರು, ವಿಶೇಷ ಚೇತನರು, ಒಬ್ಬಂಟಿಗಳು ಒಳಗೊಂಡಂತೆ ಗ್ರಾಮೀಣ, ನಗರ ಹಾಗೂ ಹೊರ ರಾಜ್ಯದ ಭಕ್ತಾದಿಗಳ ಅನುಕೂಲಕ್ಕಾಗಿ ಇ-ಪ್ರಸಾದ ಸೇವೆ ಆರಂಭಿಸಲಾಗಿದೆ" ಎಂದು ಹೇಳಿದ್ದಾರೆ.

"ರಾಜ್ಯದ ಯಾವುದೇ ಜಿಲ್ಲೆಯ ಭಕ್ತಾದಿಗಳು ಪ್ರಸಾದಕ್ಕೆ ಆರ್ಡರ್ ಮಾಡಿದರೆ ಸಿಎಸ್ಸಿ ಇ ಗವರ್ನೆನ್ಸ್ ಸಂಸ್ಥೆಯು ಮನೆ ಬಾಗಿಲಿಗೆ ದೇವಾಲಯದ ಪ್ರಸಾದವನ್ನು ತಲುಪಿಸಲಾಗುತ್ತದೆ. ಭಕ್ತರು ಈ ಸೇವೆಯ ಉಪಯೋಗ ಪಡೆದುಕೊಳ್ಳಬೇಕು" ಎಂದು ಮನವಿ ಮಾಡಿದರು.
ಯಾವ-ಯಾವ ದೇವಾಲಯಗಳು?; ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯಡಿ ಇರುವ ದೇವಾಲಯಗಳ ಪೈಕಿ 'ಎ' ಮತ್ತು 'ಬಿ' ದರ್ಜೆಯ 390 ದೇವಾಲಯಗಳಿವೆ. ಭಕ್ತಾದಿಗಳು ಇ-ಪ್ರಸಾದ ವೆಬ್ಸೈಟ್ ಮೂಲಕ ಮೊದಲ ಹಂತದಲ್ಲಿ 14 ಪ್ರಮುಖ ದೇವಾಲಯಗಳಿಂದ ಪ್ರಸಾದವನ್ನು ಆನ್ಲೈನ್ ಮೂಲಕ ಆರ್ಡರ್ ಮಾಡಿ ಮನೆಯಲ್ಲಿ ಪಡೆಯಲು ಅನುಕೂಲ ಕಲ್ಪಿಸಲಾಗಿದೆ.

* ಬೆಂಗಳೂರಿನ ಜಯನಗರ ವಿನಾಯಕ ಸ್ವಾಮಿ ದೇವಾಲಯ
* ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯ
* ನಂಜನಗೂಡು ಶ್ರೀಕಂಠೇಶ್ವರ ದೇವಾಲಯ
* ಮಾಲೂರು ವೆಂಕಟರಮಣ ಸ್ವಾಮಿ ದೇವಾಲಯ
* ಹಲಸೂರು ಸೋಮೇಶ್ವರ ಸ್ವಾಮಿ ದೇವಾಲಯ
* ಕೊಲ್ಲೂರು ಮೂಕಾಂಬಿಕಾ ದೇವಾಲಯ
* ಗವಿಗಂಗಾಧರೇಶ್ವರ ದೇವಾಲಯ, ಬೆಂಗಳೂರು
* ಶ್ರೀ ಕ್ಷೇತ್ರ ಝರಣಿ ನರಸಿಂಹ, ಬೀದರ್
* ರೇಣುಕಾ ಯಲ್ಲಮ್ಮ ದೇವಾಲಯ, ಬೆಳಗಾವಿ
* ಕುಕ್ಕೆ ಸುಬ್ರಮಣ್ಯ ದೇವಾಲಯ, ದಕ್ಷಿಣ ಕನ್ನಡ
* ಕನಕದುರ್ಗಮ್ಮ ದೇವಾಲಯ, ಬಳ್ಳಾರಿ
* ಮೈಲಾರಲಿಂಗೇಶ್ವರ ದೇವಾಲಯ, ವಿಜಯನಗರ
* ಹುಲಿಗೆಮ್ಮ ದೇವಾಲಯ, ಕೊಪ್ಪಳ
* ಗುರುದತ್ತಾತ್ರೇಯ ಸ್ವಾಮಿ ದೇವಾಲಯ, ಕಲಬುರಗಿ
ಸದ್ಯ 14 ದೇವಾಲಯಗಳನ್ನು ಇ-ಪ್ರಸಾದ ವೆಬ್ಸೈಟ್ ಮೂಲಕ ದೇವಾಲಯದ ಪ್ರಸಾದವನ್ನು ಮನೆಗೆ ತಲುಪಿಸುವ ಯೋಜನೆಯಡಿ ತರಲಾಗಿದೆ. 3-4 ದಿನಗಳಲ್ಲಿ ಪ್ರಸಾದ ಭಕ್ತರ ಮನೆ ಬಾಗಿಲಿಗೆ ಬರಲಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೇಡಿಕೆ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ದೇವಾಲಯಗಳನ್ನು ಈ ಯೋಜನೆ ವ್ಯಾಪ್ತಿಗೆ ತರಲಾಗುತ್ತದೆ. ಹೊರ ರಾಜ್ಯದ ದೇವಾಲಯಗಳ ಪ್ರಸಾದವನ್ನು ಮನೆಗೆ ತಲುಪಿಸುವ ವ್ಯವಸ್ಥೆಗೆ ಒಪ್ಪಿಗೆ ಸಿಕ್ಕಿಲ್ಲ. ಆದರೆ ಹೊರ ರಾಜ್ಯದಲ್ಲಿರುವ ಭಕ್ತರಿಗೆ ಕರ್ನಾಟಕದ ದೇವಾಲಯದ ಪ್ರಸಾದವನ್ನು ತಲುಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಕ್ತರು ಮನೆಯಲ್ಲಿ ಕುಳಿತು ಆಯಾ ದೇವಾಲಯದಲ್ಲಿ ಒದಗಿಸುವ ಕಲ್ಲು ಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಭಸ್ಮ ಅಥವ ಭಂಡಾರ, ಕುಂಕುಮ, ಬಿಲ್ವಪತ್ರೆ/ ಹೂವು/ ತುಳಸಿ ಮತ್ತು ಪ್ಯಾಕೇಟ್ ಅಳತೆಯ ಲ್ಯಾಮಿನೇಟೆಡ್ ದೇವರ ಚಿತ್ರವನ್ನು ಪ್ರಸಾದ ರೂಪದಲ್ಲಿ ಪಡೆಯಬಹುದು.
ಅಂಚೆ ವೆಚ್ಚ ಸೇರಿ ಪ್ರಸಾದ ಮನೆಗೆ ತರಿಸಲು 100 ರಿಂದ 200 ರೂ. ತನಕ ದರವನ್ನು ನಿಗದಿ ಮಾಡಲಾಗಿದೆ. ಭಕ್ತರು ಇ-ಪ್ರಸಾದ ವೆಬ್ಸೈಟ್ ಮೂಲಕ ಅಥವ ಸಮೀಪದ ಸಿಎಸ್ಸಿ ಕೇಂದ್ರದ ಮೂಲಕ ಪ್ರಸಾದವನ್ನು ಆರ್ಡರ್ ಮಾಡಬಹುದು.
-
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications