Government Employee: 2025ಕ್ಕೆ ರಾಜ್ಯ ಸರ್ಕಾರಿ ನೌಕರರ ನಿರೀಕ್ಷೆಗಳು
ಬೆಂಗಳೂರು, ಡಿಸೆಂಬರ್ 26: 2024ನೇ ವರ್ಷ ಮುಗಿಯುತ್ತಾ ಬಂದಿದೆ. ವರ್ಷಾಂತ್ಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಖಜಾಂಚಿ ಆಯ್ಕೆಗೆ ಚುನಾವಣೆ ಸಹ ನಡೆಯುತ್ತಿದೆ. ಡಿಸೆಂಬರ್ 27ರಂದು ನಡೆಯುವ ಚುನಾವಣೆಗೆ ಸರ್ಕಾರಿ ನೌಕರರಿಗೆ ಹಲವು ಭರವಸೆಗಳನ್ನು ನೀಡಲಾಗಿದೆ. ಈ ವರ್ಷ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ 7ನೇ ರಾಜ್ಯ ವೇತನ ಆಯೋಗದ ವರದಿಯನ್ನು ಸರ್ಕಾರ ಜಾರಿಗೊಳಿಸಿದೆ. 2025ರಲ್ಲಿ ಸರ್ಕಾರಿ ನೌಕರರ ನಿರೀಕ್ಷೆಗಳೇನು?
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29 ಅವಧಿಯ ಚುನಾವಣೆಗೆ ಅಧ್ಯಕ್ಷ ಹುದ್ದೆಗೆ ಸಿ. ಎಸ್. ಷಡಾಕ್ಷರಿ ಮತ್ತು ರಾಜ್ಯ ಖಜಾಂಚಿ ಸ್ಥಾನಕ್ಕೆ ಕೊಪ್ಪಳ ಜಿಲ್ಲಾಧ್ಯಕ್ಷರಾದ ನಾಗರಾಜ್ ಜುಮ್ಮಣ್ಣನವರ ಅಭ್ಯರ್ಥಿಯಾಗಿದ್ದಾರೆ. ಸಿ. ಎಸ್. ಷಡಾಕ್ಷರಿ ಅವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ 2025ರಲ್ಲಿ ಸರ್ಕಾರಿ ನೌಕರರು ಯಾವ ನಿರೀಕ್ಷೆ ಇಟ್ಟುಕೊಳ್ಳಬಹುದು? ಎಂದು ಮಾಹಿತಿ ನೀಡಿದ್ದಾರೆ.

ಸಿ. ಎಸ್. ಷಡಾಕ್ಷರಿ ಮತ್ತು ನಾಗರಾಜ್ ಜುಮ್ಮಣ್ಣನವರ ಸರ್ಕಾರಿ ನೌಕರರಿಗೆ ಭರವಸೆಗಳನ್ನು ನೀಡಿದ್ದಾರೆ. 'ಇದು ಭರವಸೆಯಲ್ಲ ಸಂಕಲ್ಪ' ಎಂದು ಹೇಳಿದ್ದಾರೆ. ವಿವರಗಳು ಇಲ್ಲಿವೆ....
* NPS ರದ್ಧತಿ. ಸಂಘದ ಹೋರಾಟದ ಮೇರೆಗೆ ಈಗಾಗಲೇ ಒಪಿಎಸ್ ಅನುಷ್ಠಾನಗೊಂಡಿರುವ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲು ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಡಿಸೆಂಬರ್ 2024ರ ಅಂತ್ಯದಲ್ಲಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದ್ದು, ಸರ್ಕಾರದ ಮೇಲೆ ಒತ್ತಡವನ್ನು ತಂದು ಹಳೆ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸಿ ಗುರಿ ತಲುಪುವವರೆಗೆ ನಿರ್ಣಾಯಕ ಹೋರಾಟ.
* ಆರೋಗ್ಯ ಯೋಜನೆ. ಸಂಘದ ನಿರಂತರ ಪ್ರಯತ್ನದಿಂದ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ಕುಟುಂಬದ ಎಲ್ಲಾ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆಯ ಸರ್ಕಾರಿ ಆದೇಶ ಹೊರಡಿಸಿದ್ದು, ಶೀಘ್ರದಲ್ಲಿ ಈ ಯೋಜನೆಯನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರ ಲೋಕಾರ್ಪಣೆ ಮಾಡಲಿದೆ.
* 371ಜೆ ವಿಶೇಷ ಸ್ಥಾನಮಾನ. ಭಾರತದ ಸಂವಿಧಾನ ಅನುಚ್ಛೇದ 371ಜೆ ರಂತೆ ಹೈದರಾಬಾದ್-ಕರ್ನಾಟಕದ ಭಾಗದವರಿಗೆ ಮುಂಬಡ್ತಿಯ ಅವಕಾಶವನ್ನು ಕಲ್ಪಿಸುವುದು.
* ವರ್ಗಾವಣೆ ಕಾಯ್ದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ಎ, ಬಿ, ಸಿ, ಡಿ ವೃಂದಗಳ ಸರ್ಕಾರಿ ಅಧಿಕಾರಿ-ನೌಕರರಿಗೆ ಕೌನ್ಸೆಲಿಂಗ್ ವರ್ಗಾವಣೆ ಕಾಯ್ದೆಯನ್ನು ಜಾರಿಗೆ ತರುವುದು
* ಶೀಘ್ರ ಅನುಷ್ಠಾನ. 7ನೇ ವೇತನ ಆಯೋಗದ ಒಂದನೇ ವರದಿಯ ಶಿಫಾರಸ್ಸಿನಂತೆ ಅನುಷ್ಠಾನಗೊಳ್ಳದೇ ಬಾಕಿ ಇರುವ ಎಲ್ಲಾ ಇತರೆ ಭತ್ಯೆ ಮತ್ತು ಸೌಲಭ್ಯಗಳನ್ನು ಜಾರಿಗೊಳಿಸಲು ಕ್ರಮ. 7ನೇ ವೇತನ ಆಯೋಗದ 2ನೇ ವರದಿಯನ್ನು ಶಿಫಾರಸ್ಸುಗಳನ್ನು ಶೀಘ್ರ ಜಾರಿಗೊಳಿಸಲು ಕ್ರಮ.
* ಕೌಶಲ್ಯ ತರಬೇತಿ. ರಾಜ್ಯದ ಸಮಸ್ತ ನೌಕರರಿಗೆ ಗುಣಮಟ್ಟದ ವೃತ್ತಿ ಕೌಶಲ್ಯ-ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸುವುದು
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications