Foeticide : ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ ವಹಿಸಿದ ಸರ್ಕಾರ
ಬೆಂಗಳೂರು, ನವೆಂಬರ್ 30: ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿರುವ ಹೆಣ್ಣು ಭ್ರೂಣ ಹತ್ಯೆ, ಭ್ರೂಣಲಿಂಗ ಪತ್ತೆ ಪ್ರಕರಣವನ್ನು ಬೆಂಗಳೂರಿನ ಪೊಲೀಸರು ಬೇದಿಸಿದ್ದರು. ರಾಜ್ಯದ ನಾನಾ ಕಡೆಗಳಲ್ಲಿ ಭ್ರೂಣ ಹತ್ಯೆ ನಡೆಸಿರುವುದು ಬೆಳಕಿಗೆ ಬಂದಿದ್ದು, ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ.
ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಿಷೇಧ ನಿಯಮ ಜಾರಿಯಲ್ಲಿದ್ದರೂ ಸಹಿತ ನೂರಾರು ಹೆಣ್ಣು ಭ್ರೂಣಗಳು ಕಳೆದ ಕೆಲವು ವರ್ಷಗಳಿಂದಲೂ ನಡೆದಿವೆ. ಇಂತಿಷ್ಟು ಹಣ ಪಡೆದು ದಂಧೆ ನಡೆಸುತ್ತಿದ್ದರು. ಆ ದಂಧೆಯನ್ನು ಬೆಂಗಳೂರು ಪೊಲೀಸರು ಬೇಧಿಸಿ ಸುಮಾರು 9 ಮಂದಿಯನ್ನು ಬೇಧಿಸಿದ್ದರು.

ಈ ಕುರಿತು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಚರ್ಚಿಸಿ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲು ಸೂಚಿಸಿದ್ದಾರೆ. ಈ ಮೂಲಕ ಪ್ರಕರಣವು ಇನ್ನೆಲ್ಲಿಯವರೆಗೆ ವ್ಯಾಪಿಸಿದೆ ಎಂಬುದು ತಿಳಿಯಲಿದೆ.
9 ಆರೋಪಿಗಳ ಬಂಧನ
ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರ ಕರಣ ನಡೆದಿದೆ. ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದು ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಕಳೆದ ಮೂರು ವರ್ಷಗಳಲ್ಲಿ ಒಟ್ಟು 900ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಮಾಡಿದ್ದಾಗಿ ತನಿಖೆಯಿಂದ ಬಯಲಾಗಿದೆ.
ಮೈಸೂರು ವ್ಯಾಪ್ತಿಯಲ್ಲಿ ಜಾಲ ಬೇದಿಸಿದ ಪೊಲೀಸರು ಕ್ಲಿನಿಕ್ ನಲ್ಲಿನ ಚಿಕಿತ್ಸಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರಿಜಿಸ್ಟ್ರಾರ್ ನಲ್ಲಿದ್ದ ಹೆಸರು, ವಿಳಾಸ ಪಡೆದ ಪೊಲೀಸರು ಕೆಲವರನ್ನು ವಿಚಾರಿಸಿದ್ದಾರೆ. ಇದರಲ್ಲಿ ಮಂಡ್ಯ, ರಾಮನಗರ, ಮೈಸೂರಿನವರು ಹೆಚ್ಚಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications