ಕಾರ್ಮಿಕರ ಬೆನ್ನಿಗೆ ನಿಂತ ಸರ್ಕಾರ: ವೇತನ ಪಾವತಿ ಮಾಡುವಂತೆ ಮನವಿ
ಬೆಂಗಳೂರು, ಮೇ 1: ಕೋವಿಡ್-19 ತಡೆಗಟ್ಟಲು ಘೋಷಿಸಿದ ಲಾಕ್ ಡೌನ್ ನಿಂದಾಗಿ ಶ್ರಮಿಕ ವರ್ಗ ಸಂಕಷ್ಟಕ್ಕೆ ಸಿಲುಕಿತ್ತು. ದೇಶದ ಜೊತೆಗೆ ರಾಜ್ಯದ ಆರ್ಥಿಕ ವ್ಯವಸ್ಥೆ ಕೂಡ ಹದಗೆಟ್ಟಿತ್ತು. ಹೀಗೆ, ತೊಂದರೆಗೆ ಸಿಲುಕಿದ್ದ ಜನಜೀವನ ಮತ್ತು ಅರ್ಥ ವ್ಯವಸ್ಥೆಯನ್ನು ಹಿಂದಿನ ಮಾದರಿಗೆ ಅನುಸರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಇದರ ಭಾಗವಾಗಿ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದ್ದು, ಸರ್ಕಾರ ಕಾರ್ಮಿಕರ ಹಿತ ಕಾಪಾಡಲು ತೀರ್ಮಾನಿಸಿದೆ.
Recommended Video
ಕಾರ್ಮಿಕರ ದಿನಾಚರಣೆಯ ಅಂಗವಾಗಿ, ಟ್ವೀಟ್ ಮಾಡಿರುವ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಲಿರುವ ಕಾರ್ಮಿಕ ವರ್ಗಕ್ಕೆ ಭರವಸೆ ತುಂಬುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ ಕಾರ್ಮಿಕರ ವೇತನ ನೀಡುವಂತೆ ವಾಣಿಜ್ಯೋದ್ಯಮಿಗಳಲ್ಲಿ ಮನವಿ ಮಾಡಿರುವ ಬಗ್ಗೆಯೂ ತಿಳಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJP ಅವರು, ಕೋವಿಡ್19 ಸೋಂಕಿನಿಂದ ಉಂಟಾಗಿರುವ ಕಠಿಣ ಸಂದರ್ಭದಲ್ಲಿ ಸರ್ಕಾರ ಕಾರ್ಮಿಕರ ಬೆನ್ನಿಗೆ ನಿಂತಿದ್ದು, ಯಾರೂ ಕೂಡ ಆತಂಕಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.#ಮನೆಯಲ್ಲೇಇರಿ#KarnatakaFightsCorona#IndiaFightsCorona#SaluteCOVIDFighters pic.twitter.com/MN8n8pqklH
— CM of Karnataka (@CMofKarnataka) May 1, 2020
''ಕೋವಿಡ್-19 ಸೋಂಕಿನಿಂದ ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿದ್ದವು. ಇದರಿಂದ ದುಡಿದು ತಿನ್ನುವ ಕಾರ್ಮಿಕರು ಹೆಚ್ಚಿನ ತೊಂದರೆ ಅನುಭವಿಸಬೇಕಾಯಿತು. ಇಂತಹ ಕಠಿಣ ಸಂದರ್ಭದಲ್ಲಿ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ.''
''ನಿಮ್ಮೆಲ್ಲರ ಸಹಕಾರದಿಂದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದೆ. ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆಗಳು ಮತ್ತೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ.''

''ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೆ ಕೇಂದ್ರ ಸರ್ಕಾರದ ಸೂಚನೆ ಬಂದೊಡನೆ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆ ಪುನರಾರಂಭ ಮಾಡಲು ಸಹಕರಿಸುವಂತೆ ಮನವಿ ಮಾಡುತ್ತೇನೆ'' ಎಂದು ಟ್ವೀಟ್ ಮಾಡಿದ್ದಾರೆ ಬಿ.ಎಸ್.ಯಡಿಯೂರಪ್ಪ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications